ಬ್ರೇಕಿಂಗ್ ನ್ಯೂಸ್
25-05-24 06:38 pm Mangalore Correspondent ಕರಾವಳಿ
ಮಂಗಳೂರು, ಮೇ 25: ಕೊಟ್ಟಾರದಲ್ಲಿ ಮಳೆನೀರು ಹರಿಯುವ ಕಾಲುವೆಗೆ ಆಟೋ ರಿಕ್ಷಾ ಬಿದ್ದು ಚಾಲಕ ಸಾವನ್ನಪ್ಪಿದ ಪ್ರಕರಣ ಸಂಬಂಧಿಸಿ ಪೊಲೀಸರು ಮಹಾನಗರ ಪಾಲಿಕೆಯ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಸಾವನ್ನಪ್ಪಿದ ಆಟೋ ಚಾಲಕ ದೀಪಕ್ ಆಚಾರ್ಯ (44) ಅವರ ಅಕ್ಕ ಹೇಮಲತಾ ಅವರು ನೀಡಿದ ದೂರಿನ ಮೇರೆಗೆ ಉರ್ವಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಾನಗರ ಪಾಲಿಕೆಯವರು ಕಾಲುವೆಯ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದು ಮತ್ತು ನೀರು ಮೇಲೆ ಬರುತ್ತಿದ್ದರೂ ರಸ್ತೆಗೆ ತಡೆಗೋಡೆ ಇರಿಸದೆ ನಿರ್ಲಕ್ಷ್ಯ ತೋರಿದ್ದರಿಂದ ಘಟನೆ ಸಂಭವಿಸಿದೆ. ಇದಕ್ಕೆ ಮಹಾನಗರ ಪಾಲಿಕೆಯವರೇ ಕಾರಣ ಎಂದು ದೂರು ನೀಡಿದ್ದರು. ಪೊಲೀಸರು ಪಾಲಿಕೆಯ ಅಧಿಕಾರಿಗಳು ಎಂದಷ್ಟೇ ಉಲ್ಲೇಖಿಸಿ ಪ್ರಕರಣ ದಾಖಲು ಮಾಡಿದ್ದಾರೆ.
ಇದೇ ವೇಳೆ, ಎನ್ಎಸ್ ಯುಐ ಮಂಗಳೂರು ನಗರ ದಕ್ಷಿಣ ಘಟಕದ ಅಧ್ಯಕ್ಷ ಕ್ರಿಸ್ಟನ್ ಮಿನೇಜಸ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಘಟನೆಗೆ ಸಂಬಂಧಿಸಿ ಪತ್ರ ಬರೆದಿದ್ದು, ಈ ಘಟನೆಗೆ ಹೊಣೆಗಾರರಾಗಿರುವ ಮಂಗಳೂರು ಮಹಾನಗರ ಪಾಲಿಕೆ ಮೇಯರ್, ಕಾರ್ಪೊರೇಟರ್ ಹಾಗೂ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ. ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಕಾರ್ಪೊರೇಟರ್ ಮನೋಜ್ ಕುಮಾರ್ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಅಮೂವ್ಯ ಜೀವ ಹೋಗುವಂತಾಗಿದೆ. ಜನರು ಕಟ್ಟಿದ ತೆರಿಗೆ ಹಣದಿಂದ ಅಭಿವೃದ್ಧಿ ಕೆಲಸವನ್ನು ಮಾಡಬೇಕು. ಇಲ್ಲಿ ನಿರ್ಲಕ್ಷ್ಯ ವಹಿಸಿದ್ದರಿಂದ ಘಟನೆಗೆ ಕಾರಣವಾಗಿದೆ. ಇವರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು. ಅಲ್ಲದೆ, ಬಲಿಯಾದ ದೀಪಕ್ ಕುಟುಂಬದ ಒಬ್ಬರು ಸದಸ್ಯರಿಗೆ ಸರಕಾರಿ ಕೆಲಸ ಕೊಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕೊಟ್ಟಾರದಲ್ಲಿ ಪ್ರತಿವರ್ಷ ಜೋರು ಮಳೆಯಾದರೆ ಕಾಲುವೆ ನೀರು ತುಂಬುವುದರಿಂದ ಆಸುಪಾಸಿನಲ್ಲಿರುವ ತಗ್ಗಿನ ಮನೆಗಳಿಗೆ ನುಗ್ಗುತ್ತದೆ. ಈ ರೀತಿಯ ಸ್ಥಿತಿ ಈ ಬಾರಿ ಮೊದಲ ಮಳೆಗೇ ಸಂಭವಿಸಿದ್ದು, ಪಾಲಿಕೆಯ ಅಧಿಕಾರಸ್ಥರು ನಿರ್ಲಕ್ಷ್ಯ ವಹಿಸಿದ್ದರಿಂದಲೇ ಸಮಸ್ಯೆ ಉಂಟಾಗುತ್ತಿದೆ. ಕಾಲುವೆ ಹೂಳೆತ್ತದಿರುವುದು, ಕಾಲುವೆಯನ್ನು ಒತ್ತುವರಿ ಮಾಡಿರುವುದನ್ನು ತೆರವು ಮಾಡದೇ ಇರುವುದು ಸಮಸ್ಯೆಗೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಾರೆ.
Mangalore Kottara auto driver death, FIR filed on Mangalore City corporation over negligence, NSUI has written letter to CM demanding strict against mayor and corporator responsible.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 4...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm