ಬ್ರೇಕಿಂಗ್ ನ್ಯೂಸ್
25-05-24 09:01 pm Mangalore Correspondent ಕರಾವಳಿ
ಮಂಗಳೂರು, ಮೇ 25: ಲೋಕಸಭಾ ಚುನಾವಣೆ ಫಲಿತಾಂಶ ಬರುವುದಕ್ಕೂ ಮೊದಲೇ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಹುದ್ದೆಯಲ್ಲಿದ್ದ ರಾಜೇಶ್ ಜಿ.ವಿ. ಅವರಿಗೆ ಕೊಕ್ ನೀಡಲಾಗಿದೆ. ದಿಢೀರ್ ಆಗಿ ಹುದ್ದೆಯಿಂದ ತೆಗೆದು ಹಾಕಿರುವುದು ಕರಾವಳಿಯ ಸಂಘ ಪರಿವಾರದೊಳಗೆ ತೀವ್ರ ಚರ್ಚೆಗೀಡಾಗಿದೆ.
ಆರೆಸ್ಸೆಸ್ ನಲ್ಲಿ ಪ್ರಚಾರಕ್ ಆಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಂತೂರು ಮೂಲದ ರಾಜೇಶ್ ಅವರನ್ನು 2022ರಲ್ಲಿ ಯಾರೂ ನಿರೀಕ್ಷೆ ಮಾಡದ ರೀತಿ ರಾಜ್ಯ ಸಂಘಟನಾ ಕಾರ್ಯದರ್ಶಿ ಸ್ಥಾನಕ್ಕೆ ನೇಮಕ ಮಾಡಲಾಗಿತ್ತು. ಇದೀಗ ಅಷ್ಟೇ ಅನಿರೀಕ್ಷಿತ ಎನ್ನುವಂತೆ ಅವರನ್ನು ಆ ಸ್ಥಾನದಿಂದ ಕಿತ್ತು ಹಾಕಲಾಗಿದ್ದು, ಅವರಿಗೆ ಆರೆಸ್ಸೆಸ್ ನಲ್ಲಿ ಬೇರೆ ನಾಮ್ಕೇವಾಸ್ತೆ ಎನ್ನುವ ಜವಾಬ್ದಾರಿ ನೀಡಲಾಗಿದೆ. ಆರೆಸ್ಸೆಸ್ ಪ್ರಾಂತ ಸಾಮರಸ್ಯ ಸಹ ಸಂಯೋಜಕ ಎನ್ನುವ ಹುದ್ದೆ ಸೃಜಿಸಿ ಅಲ್ಲಿ ಕೂರಿಸಲಾಗಿದೆ.
2022ರ ಜುಲೈ ತಿಂಗಳಲ್ಲಿ ಆಗಿನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರಿಗೇ ತಿಳಿಯದ ರೀತಿ ರಾಜೇಶ್ ಜಿವಿ ಸಂಘಟನಾ ಕಾರ್ಯದರ್ಶಿ ಸ್ಥಾನ ಗಿಟ್ಟಿಸಿಕೊಂಡಿದ್ದರು. ಆನಂತರ, ಎದುರಾದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿತ್ತು. ಆಬಳಿಕ ನಳಿನ್ ಕುಮಾರ್ ಅವರನ್ನು ಬದಲಿಸಿ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಮಾಡಲಾಗಿತ್ತು. ಇದೀಗ ದಕ್ಷಿಣ ಕನ್ನಡ ಮೂಲದ ರಾಜ್ಯ ಸಂಘಟನಾ ಕಾರ್ಯದರ್ಶಿಗೂ ಕೊಕ್ ನೀಡಲಾಗಿದ್ದು ಉತ್ತರ ಕರ್ನಾಟಕ ಭಾಗದ ಆರೆಸ್ಸೆಸ್ ಪ್ರಮುಖರನ್ನು ಈ ಹುದ್ದೆಗೆ ನೇಮಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ದಿಢೀರ್ ಕಿಕ್ಕೌಟ್ ಮಾಡಿದ್ದೇಕೆ ಆರೆಸ್ಸೆಸ್ ?
ಲೋಕಸಭೆ ಚುನಾವಣೆ ಫಲಿತಾಂಶಕ್ಕೂ ಕಾಯದೆ ದಿಢೀರ್ ಈ ರೀತಿಯ ಕ್ರಮ ಕೈಗೊಂಡಿರುವುದು ಮಂಗಳೂರು ಮತ್ತು ಕರಾವಳಿ ಭಾಗದಲ್ಲಿ ತೀವ್ರ ಚರ್ಚೆಗೊಳಗಾಗಿದೆ. ಕರಾವಳಿಯ ಆರೆಸ್ಸೆಸ್ ಪ್ರಮುಖರು ಮತ್ತು ಹಿಂದಿನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಜೊತೆಗೆ ಉತ್ತಮ ಸಂಬಂಧ ಹೊಂದಿಲ್ಲದೇ ಇದ್ದ ರಾಜೇಶ್ ಜಿವಿ ಅವರನ್ನು ಕಿತ್ತು ಹಾಕಿರುವುದಕ್ಕೆ ಕಾರ್ಯಕರ್ತರು ಕಾರಣಗಳನ್ನು ಹುಡುಕುತ್ತಿದ್ದಾರೆ. ಜಾಲತಾಣದಲ್ಲಿ ತಮಗೆ ತೋಚಿದಂತೆ ಕಾರಣಗಳನ್ನು ಬರೆದು ಹಾಕುತ್ತಿದ್ದಾರೆ. ವೈಯಕ್ತಿಕ ವಿಚಾರಗಳ ಕಾರಣಕ್ಕಾಗಿಯೇ ರಾಜೇಶ್ ಹುದ್ದೆ ಕಳಕೊಂಡಿದ್ದಾರೆ ಎನ್ನುತ್ತಿದ್ದಾರೆ.
ಇತ್ತೀಚಿನ ವರ್ಷಗಳಲ್ಲಿ ಇದೇ ಮೊದಲು ಎನ್ನುವಂತೆ ಸಣ್ಣ ಪ್ರಾಯದ ವ್ಯಕ್ತಿಗೆ ರಾಜ್ಯ ಸಂಘಟನಾ ಕಾರ್ಯದರ್ಶಿಯಂತಹ ಮಹತ್ವದ ಜವಾಬ್ದಾರಿ ನೀಡಲಾಗಿತ್ತು. ಬಿಜೆಪಿ ಮತ್ತು ಆರೆಸ್ಸೆಸ್ ನಡುವೆ ಸಮನ್ವಯಕಾರರ ರೀತಿ ಇರುವ ಈ ಜವಾಬ್ದಾರಿ ಹೊಂದಿದ್ದವರು ಪಕ್ಷದ ರಾಜ್ಯಾಧ್ಯಕ್ಷರ ಹತ್ತಿರದಲ್ಲಿ ಇರುತ್ತಾರೆ. ವಿಜಯೇಂದ್ರ ಜೊತೆಗೆ ಎಲ್ಲ ರೀತಿಯಲ್ಲೂ ತುಂಬ ಹತ್ತಿರದ ನಂಟು ಇಟ್ಟುಕೊಂಡಿದ್ದ ರಾಜೇಶ್, ಪಕ್ಷದಲ್ಲಿ ಬೆಳೆಯಬಹುದಾಗಿದ್ದ ಆಯಕಟ್ಟಿನ ಹುದ್ದೆಯಲ್ಲಿದ್ದರೂ ಯಾವುದೋ ಕಾರಣಕ್ಕೆ ತಮ್ಮ ಭವಿಷ್ಯಕ್ಕೆ ಕಲ್ಲು ಹಾಕಿಸಿಕೊಂಡಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ. ಈ ಹಿಂದೆ ರಾಜ್ಯ ಸಂಘಟನಾ ಕಾರ್ಯದರ್ಶಿ ಹುದ್ದೆಯಲ್ಲಿದ್ದ ಉಡುಪಿ ಮೂಲದ ಬಿಎಲ್ ಸಂತೋಷ್, ಆನಂತರ ಪಕ್ಷದಲ್ಲಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸ್ಥಾನಕ್ಕೆ ಹೋಗಿದ್ದರು ಎನ್ನುವುದು ವಿಶೇಷ. ವಿಧಾನಸಭೆ ಸೋಲಿನ ಬಳಿಕ ಅವರನ್ನೂ ಬದಲಾವಣೆ ಮಾಡಲಾಗುತ್ತೆ ಎಂದು ಹೇಳಲಾಗಿದ್ದರೂ, ಆ ರೀತಿ ಆಗಿರಲಿಲ್ಲ.
Bjp state secretary Mangalorean Rajesh KV kicked out of party. He was a active member of RSS who hails from Kadaba, Dakshina Kannada. He has been given some other post in the Rss organisation.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm