ಬ್ರೇಕಿಂಗ್ ನ್ಯೂಸ್
27-05-24 01:28 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ 27: ಪೆನ್ ಡ್ರೈವ್ ಸಂಕಷ್ಟದಲ್ಲಿ ಸಿಲುಕಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರ ಟೆಂಪಲ್ ರನ್ ಮುಂದುವರೆದಿದೆ. ಸೋಮವಾರ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇವಸ್ಥಾನಕ್ಕೆ ರೇವಣ್ಣ ಭೇಟಿ ನೀಡಿದರು.
ಶ್ರೀಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ರವಿವಾರ ರಾತ್ರಿಯೇ ಧರ್ಮಸ್ಥಳಕ್ಕೆ ಆಗಮಿಸಿ ವಾಸ್ತವ್ಯ ಹೂಡಿದ್ದ ರೇವಣ್ಣ ಇಂದು ಬೆಳಗ್ಗೆ ದೇವರ ದರ್ಶನ ಪಡೆದರು.
ಈಗಾಗಲೇ ಹಲವು ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿರುವ ಎಚ್.ಡಿ ರೇವಣ್ಣ ಇದೀಗ ಸಂಕಷ್ಟ ನಿವಾರಣೆಗಾಗಿ ಮಂಜುನಾಥನ ಮೊರೆ ಹೋಗಿದ್ದಾರೆ.
ಧರ್ಮಸ್ಥಳ ಶ್ರೀಮಂಜುನಾಥ ಸ್ವಾಮಿಯ ದರ್ಶನ ಬಳಿಕ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಜೊತೆ ರೇವಣ್ಣ ಮಾತುಕತೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ 40 ವರ್ಷಗಳಿಂದ ರಾಜಕಾರಣಿದಲ್ಲಿದ್ದೇನೆ. 25 ವರ್ಷ ಶಾಸಕನಾಗಿ ಕೆಲಸ ಮಾಡಿದ್ದೇನೆ. ಕಾನೂನು ಬಗ್ಗೆ ಗೌರವವಿದೆ ದೇವರ ಬಗ್ಗೆ ನಂಬಿಕೆಯಿದೆ.
ಪ್ರಕರಣ ಕೋರ್ಟ್ನಲ್ಲಿರುವುದರಿಂದ ನಾನು ಯಾವುದಕ್ಕೂ ಪ್ರತಿಕ್ರಿಯೆ ನೀಡಲ್ಲ. ಮಂಜುನಾಥ ಸ್ವಾಮಿ ಮೇಲೆ ನನಗೆ ನಂಬಿಕೆಯಿದೆ. ಸೋಮವಾರದ ವಿಶೇಷ ದಿನ ಮಂಜುನಾಥ ಸ್ವಾಮಿ ದರ್ಶನ ಮಾಡಿದ್ದೇನೆ. ರಾಜ್ಯದ ಜನತೆ ಬಗ್ಗೆ, ನ್ಯಾಯಾಲಯದ ಮೇಲೆ ನಂಬಿಕೆ ಇದೆ ಎಂದಿದ್ದಾರೆ.
ಇನ್ನು ಹಾಸನ ಚಲೋ ಕಾರ್ಯಕ್ರಮದ ಬಗ್ಗೆ ಗೊತ್ತಿಲ್ಲ. ದೇವೆಗೌಡರು ಪತ್ರ ಬರೆದಿರುವ ಬಗ್ಗೆಯೂ ಗೊತ್ತಿಲ್ಲ. ಉಳಿದ ಯಾವುದರ ಬಗ್ಗೆಯೂ ಸದ್ಯ ಪ್ರತಿಕ್ರಿಯೆ ನೀಡಲ್ಲ ಎಂದು ಹೇಳಿ ತೆರಳಿದ್ದಾರೆ.
Revanna visits Dharmasthala temple in Mangalore offers prayers for prajwal. Said will leave everything into the hands of God. I belive in both law and God he added.
20-07-25 04:24 pm
Bangalore Correspondent
Rcb, Bangalore: ಪೊಲೀಸರು 'ಆರ್ಸಿಬಿ ಸೇವಕರು' ಎಂಬ...
19-07-25 03:05 pm
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
20-07-25 03:06 pm
Mangaluru Correspondent
MRPL, MP Brijesh Chowta, Mangalore: MRPL ಹಸಿರ...
19-07-25 10:01 pm
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
RCB Stampede, DySP Anupama Shenoy: ಕಾಲ್ತುಳಿತ...
19-07-25 06:51 pm
Dharmasthala Case, Santosh Kumar, CPIM: ಧರ್ಮಸ...
19-07-25 06:14 pm
20-07-25 12:16 pm
HK News Desk
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm