ಬ್ರೇಕಿಂಗ್ ನ್ಯೂಸ್
27-05-24 10:59 pm Mangalore Correspondent ಕರಾವಳಿ
ಮಂಗಳೂರು, ಮೇ 27: ಕಳೆದ ಶುಕ್ರವಾರ ನಗರದ ಕಂಕನಾಡಿಯ ಮಾಲ್ ಒಂದರ ಹಿಂಭಾಗದ ಮಸೀದಿ ಆವರಣದ ರಸ್ತೆಯಲ್ಲಿ ಯುವಕರು ನಮಾಜ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ನಡು ರಸ್ತೆಯಲ್ಲೇ ಯುವಕರು ನಮಾಜ್ ಮಾಡಿದ್ದಾರೆ ಎಂದು ವಿಡಿಯೋ ವೈರಲ್ ಆಗುತ್ತಿದ್ದು, ಹಿಂದು ಸಂಘಟನೆಗಳ ಕಡೆಯಿಂದ ಆಕ್ಷೇಪವೂ ಕೇಳಿಬಂದಿದೆ.
ಕಂಕನಾಡಿಯ ಮ್ಯಾಕ್ ಮಾಲ್ ಹಿಂಭಾಗದ ಮಸೀದಿ ಆವರಣದ ರಸ್ತೆಯಲ್ಲಿ ಒಂದಷ್ಟು ಯುವಕರು ಕುಳಿತುಕೊಂಡು ನಮಾಜ್ ಮಾಡಿದ್ದರು. ಮಸೀದಿ ಒಳಭಾಗದಲ್ಲಿ ಫುಲ್ ಆಗಿದ್ದರಿಂದಲೋ ಏನೋ ಯುವಕರು ಹೊರಭಾಗದಲ್ಲಿಯೇ ಕುಳಿತು ನಮಾಜ್ ಮಾಡಿದ್ದರು. ಇದನ್ನು ಯಾರೋ ದೂರದ ಕಟ್ಟಡದಿಂದ ವಿಡಿಯೋ ಮಾಡಿದ್ದು, ಅದೀಗ ವೈರಲ್ ಆಗಿದೆ. ವಿಡಿಯೋ ವೈರಲ್ ಆಗಿದ್ದು ಮಾಧ್ಯಮಗಳಲ್ಲಿಯೂ ಸುದ್ದಿಯಾಗಿದೆ.
ಘಟನೆ ಬಗ್ಗೆ ಮಂಗಳೂರಿನ ಬಜರಂಗದಳ ಘಟಕ ತನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ನಮಾಜ್ ಕುರಿತಾಗಿ ಸಂಬಂಧಪಟ್ಟವರಿಗೆ ತಿಳಿಸಲಾಗಿದೆ. ಮುಂದಿನ ಶುಕ್ರವಾರ ಮತ್ತೆ ಅದೇ ಜಾಗದಲ್ಲಿ ನಮಾಜ್ ನಡೆದರೆ ನೇರವಾಗಿ ಬಜರಂಗದಳ ಇದರ ವಿರುದ್ಧ ನೇರ ಕಾರ್ಯಾಚರಣೆ ನಡೆಸಲಿದೆ ಎಂದು ಈ ಮೂಲಕ ಎಚ್ಚರಿಕೆ ನೀಡುತ್ತಿದ್ದೇವೆ ಎಂಬುದಾಗಿ ಬರೆಯಲಾಗಿದೆ. ಈ ಪೋಸ್ಟ್ ಹಾಕಿದ ಬಗ್ಗೆ ವಿಶ್ವ ಹಿಂದು ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೆಡ್ ಲೈನ್ ಕರ್ನಾಟಕಕ್ಕೆ ದೃಢಪಡಿಸಿದ್ದು ನಾವೇ ಪೋಸ್ಟ್ ಹಾಕಿದ್ದಾಗಿ ತಿಳಿಸಿದ್ದಾರೆ.


ಘಟನೆ ಬಗ್ಗೆ ಕದ್ರಿ ಪೊಲೀಸರಲ್ಲಿ ಕೇಳಿದಾಗ, ಮಸೀದಿ ಕಮಿಟಿಯವರಿಗೆ ಹೇಳಿದ್ದೇವೆ, ಕೇಸು ಏನೂ ಆಗಿಲ್ಲ. ಕೆಲವೊಮ್ಮೆ ಹೆಚ್ಚು ಜನ ಬಂದಾಗ, ಮಸೀದಿ ಹೊರಭಾಗದಲ್ಲಿ ನಿಲ್ಲುವ ಸ್ಥಿತಿಯಾಗಿದೆ ಎಂದು ತಿಳಿಸಿದ್ದಾರೆ. ವಿಡಿಯೋ ಬಂದಿರುವ ಬಗ್ಗೆ ಜಾಗ್ರತೆ ಇರುವಂತೆ ತಿಳಿಸಿದ್ದೇವೆ ಎಂದಿದ್ದಾರೆ.
~ Namaz on the roads begin for the first time in Mangalore. Behind MAK Mall in Kankanady. pic.twitter.com/tmYxOwaUdn
— Jeetuavaral Hegde (@jeetuavaral) May 27, 2024
Mangalore Youths doing their namaz in the middle of the road near masjid at Kankandy went viral on social media, Bajrang Dal Sharan Pumpwell has warns of action if this continues next time.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm