ಬ್ರೇಕಿಂಗ್ ನ್ಯೂಸ್
27-05-24 10:59 pm Mangalore Correspondent ಕರಾವಳಿ
ಮಂಗಳೂರು, ಮೇ 27: ಕಳೆದ ಶುಕ್ರವಾರ ನಗರದ ಕಂಕನಾಡಿಯ ಮಾಲ್ ಒಂದರ ಹಿಂಭಾಗದ ಮಸೀದಿ ಆವರಣದ ರಸ್ತೆಯಲ್ಲಿ ಯುವಕರು ನಮಾಜ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ನಡು ರಸ್ತೆಯಲ್ಲೇ ಯುವಕರು ನಮಾಜ್ ಮಾಡಿದ್ದಾರೆ ಎಂದು ವಿಡಿಯೋ ವೈರಲ್ ಆಗುತ್ತಿದ್ದು, ಹಿಂದು ಸಂಘಟನೆಗಳ ಕಡೆಯಿಂದ ಆಕ್ಷೇಪವೂ ಕೇಳಿಬಂದಿದೆ.
ಕಂಕನಾಡಿಯ ಮ್ಯಾಕ್ ಮಾಲ್ ಹಿಂಭಾಗದ ಮಸೀದಿ ಆವರಣದ ರಸ್ತೆಯಲ್ಲಿ ಒಂದಷ್ಟು ಯುವಕರು ಕುಳಿತುಕೊಂಡು ನಮಾಜ್ ಮಾಡಿದ್ದರು. ಮಸೀದಿ ಒಳಭಾಗದಲ್ಲಿ ಫುಲ್ ಆಗಿದ್ದರಿಂದಲೋ ಏನೋ ಯುವಕರು ಹೊರಭಾಗದಲ್ಲಿಯೇ ಕುಳಿತು ನಮಾಜ್ ಮಾಡಿದ್ದರು. ಇದನ್ನು ಯಾರೋ ದೂರದ ಕಟ್ಟಡದಿಂದ ವಿಡಿಯೋ ಮಾಡಿದ್ದು, ಅದೀಗ ವೈರಲ್ ಆಗಿದೆ. ವಿಡಿಯೋ ವೈರಲ್ ಆಗಿದ್ದು ಮಾಧ್ಯಮಗಳಲ್ಲಿಯೂ ಸುದ್ದಿಯಾಗಿದೆ.
ಘಟನೆ ಬಗ್ಗೆ ಮಂಗಳೂರಿನ ಬಜರಂಗದಳ ಘಟಕ ತನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ನಮಾಜ್ ಕುರಿತಾಗಿ ಸಂಬಂಧಪಟ್ಟವರಿಗೆ ತಿಳಿಸಲಾಗಿದೆ. ಮುಂದಿನ ಶುಕ್ರವಾರ ಮತ್ತೆ ಅದೇ ಜಾಗದಲ್ಲಿ ನಮಾಜ್ ನಡೆದರೆ ನೇರವಾಗಿ ಬಜರಂಗದಳ ಇದರ ವಿರುದ್ಧ ನೇರ ಕಾರ್ಯಾಚರಣೆ ನಡೆಸಲಿದೆ ಎಂದು ಈ ಮೂಲಕ ಎಚ್ಚರಿಕೆ ನೀಡುತ್ತಿದ್ದೇವೆ ಎಂಬುದಾಗಿ ಬರೆಯಲಾಗಿದೆ. ಈ ಪೋಸ್ಟ್ ಹಾಕಿದ ಬಗ್ಗೆ ವಿಶ್ವ ಹಿಂದು ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೆಡ್ ಲೈನ್ ಕರ್ನಾಟಕಕ್ಕೆ ದೃಢಪಡಿಸಿದ್ದು ನಾವೇ ಪೋಸ್ಟ್ ಹಾಕಿದ್ದಾಗಿ ತಿಳಿಸಿದ್ದಾರೆ.


ಘಟನೆ ಬಗ್ಗೆ ಕದ್ರಿ ಪೊಲೀಸರಲ್ಲಿ ಕೇಳಿದಾಗ, ಮಸೀದಿ ಕಮಿಟಿಯವರಿಗೆ ಹೇಳಿದ್ದೇವೆ, ಕೇಸು ಏನೂ ಆಗಿಲ್ಲ. ಕೆಲವೊಮ್ಮೆ ಹೆಚ್ಚು ಜನ ಬಂದಾಗ, ಮಸೀದಿ ಹೊರಭಾಗದಲ್ಲಿ ನಿಲ್ಲುವ ಸ್ಥಿತಿಯಾಗಿದೆ ಎಂದು ತಿಳಿಸಿದ್ದಾರೆ. ವಿಡಿಯೋ ಬಂದಿರುವ ಬಗ್ಗೆ ಜಾಗ್ರತೆ ಇರುವಂತೆ ತಿಳಿಸಿದ್ದೇವೆ ಎಂದಿದ್ದಾರೆ.
~ Namaz on the roads begin for the first time in Mangalore. Behind MAK Mall in Kankanady. pic.twitter.com/tmYxOwaUdn
— Jeetuavaral Hegde (@jeetuavaral) May 27, 2024
Mangalore Youths doing their namaz in the middle of the road near masjid at Kankandy went viral on social media, Bajrang Dal Sharan Pumpwell has warns of action if this continues next time.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm