ಬ್ರೇಕಿಂಗ್ ನ್ಯೂಸ್
28-05-24 07:01 pm Mangalore Correspondent ಕರಾವಳಿ
ಮಂಗಳೂರು, ಮೇ.28: ಮಂಗಳೂರಿನಲ್ಲಿ ನಡುರಸ್ತೆಯಲ್ಲಿ ನಮಾಜ್ ಮಾಡಿದ ಘಟನೆಗೆ ಸಂಬಂಧಿಸಿ ಮಾಜಿ ಸಚಿವ ಈಶ್ವರಪ್ಪ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇಂಥವರನ್ನು ಒದ್ದು ಒಳಗೆ ಹಾಕಿ, ದೇಶದ್ರೋಹದ ಕೇಸ್ ಹಾಕಿ. ನಿಮ್ಮ ಮನೆಯಲ್ಲಿ ನಜಾಮ್ ಮಾಡಿಸಿ, ಬೇಡ ಅನ್ನಲ್ಲ ಎಂದು ಟೀಕಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಎಲ್ಲ ಮುಸ್ಲಿಮರನ್ನು ಟೀಕೆ ಮಾಡುತ್ತಿಲ್ಲ, ಅರ್ಥ ಮಾಡಿಕೊಳ್ಳಿ. ಇವರು ಯಾರೋ ರಾಷ್ಟ್ರ ದ್ರೋಹಿಗಳು ಮಾಡುತ್ತಿರುವ ಕುತಂತ್ರ. ಇಂತವರನ್ನು ಒದ್ದು ಒಳಗೆ ಹಾಕಿದ್ರೆ, ಇತರೇ ಮುಸ್ಲಿಮರಿಗೆ ಸಂತೋಷ ಆಗುತ್ತದೆ. ಮುಸ್ಲಿಂ ಸಮುದಾಯಕ್ಕೆ ಅಪಮಾನ ಆಗುತ್ತಿದೆ ಅಂತ ಅವರೂ ಹೇಳುತ್ತಿದ್ದಾರೆ. ನಮ್ಮ ಬ್ರದರ್, ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೇನೆ ಅಂತಾರೆ ಸಿದ್ದರಾಮಯ್ಯ. ಇದು ಟಿಪ್ಪು ನಗರ, ಟಿಪ್ಪು ರಾಜ್ಯ ಅಂತ ಹೇಳ್ತಾರೆ. ಇವರದು ಎಷ್ಟು ಸೊಕ್ಕಿನ ಮಾತು, ಎಲ್ಲಿಂದ ಧೈರ್ಯ ಬಂತು ಹೀಗನ್ನಲು.
ಇವರ ತುಷ್ಟೀಕರಣ ನೀತಿ ಸರ್ಕಾರವನ್ನು ಸುಡುತ್ತೆ, ಕಾಂಗ್ರೆಸನ್ನು ಭಸ್ಮ ಮಾಡುತ್ತೆ. ನಮಾಜ್ ಮಾಡಿದವರನ್ನು ತಕ್ಷಣ ಅರೆಸ್ಟ್ ಮಾಡಿ. ರಾಷ್ಟ್ರ ದ್ರೋಹದ ಕೃತ್ಯ ಕೇಸ್ ಹಾಕಿ. ಹಿಂದು ಮುಸ್ಲಿಂ ಸಂತೋಷದಿಂದ ಇರೋದು ಇವರಿಗೆ ಇಷ್ಟ ಇಲ್ವಾ ಎಂದು ಈಶ್ವರಪ್ಪ ಮಂಗಳೂರಿನಲ್ಲಿ ಪ್ರಶ್ನಿಸಿದ್ದಾರೆ.
ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಬಗ್ಗೆ ಕೇಳಿದ ಪ್ರಶ್ನೆಗೆ, ಈ ವಿಚಾರದಲ್ಲಿ ಬಿಜೆಪಿ ಮುಖಂಡರು ಏನು ಮಾಡುತ್ತಿದ್ದಾರೆ ಎಂಬುದರ ಬಗ್ಗೆ ನಾನು ಮಾತಾಡಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಡಬಲ್ ಸ್ಟ್ಯಾಂಡರ್ಡ್ ಹೊಂದಿದ್ದಾರೆ. ನನ್ನ ವಿರುದ್ಧ ಆರೋಪ ಬಂದಾಗ ತಕ್ಷಣ ರಾಜಿನಾಮೆ ನೀಡಿದ್ದೆ. ಇದೇ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಜೊತೆಯಾಗಿ ಪ್ರತಿಭಟನೆ ಮಾಡಿದ್ದರು. ಈಗ ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದಲ್ಲಿ ಈ ಇಬ್ಬರು ಮೌನವಾಗಿದ್ದಾರೆ. ನನ್ನ ವಿರುದ್ಧ ಆಪಾದನೆ ಬಂದಾಗ ನಾನು ರಾಜನಾಮೆ ನೀಡಿ ತನಿಖೆಗೆ ಸಹಕಾರ ನೀಡಿದ್ದೆ. ಈಗ ಆತ್ಮಹತ್ಯೆ ಮಾಡಿಕೊಂಡಿರುವ ಅಧಿಕಾರಿ ಡೆತ್ ನೋಟ್ ನಲ್ಲಿ ಕೆಲವು ಅಧಿಕಾರಿಗಳ ವಿರುದ್ದ, ಸಚಿವ ನಾಗೇಂದ್ರ ಅವರ ಬಗ್ಗೆ ಆರೋಪ ಮಾಡಿದ್ದಾರೆ. ಕೂಡಲೇ ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು. ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ಆಗಬೇಕು ಎಂದು ಆಗ್ರಹಿಸಿದರು.
Namaz in the middle of the road in Mangalore, Eshwarappa they are anti nationals must arrest them immediately he added speaking at press club in Mangalore.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm