ಬ್ರೇಕಿಂಗ್ ನ್ಯೂಸ್
28-05-24 07:01 pm Mangalore Correspondent ಕರಾವಳಿ
ಮಂಗಳೂರು, ಮೇ.28: ಮಂಗಳೂರಿನಲ್ಲಿ ನಡುರಸ್ತೆಯಲ್ಲಿ ನಮಾಜ್ ಮಾಡಿದ ಘಟನೆಗೆ ಸಂಬಂಧಿಸಿ ಮಾಜಿ ಸಚಿವ ಈಶ್ವರಪ್ಪ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇಂಥವರನ್ನು ಒದ್ದು ಒಳಗೆ ಹಾಕಿ, ದೇಶದ್ರೋಹದ ಕೇಸ್ ಹಾಕಿ. ನಿಮ್ಮ ಮನೆಯಲ್ಲಿ ನಜಾಮ್ ಮಾಡಿಸಿ, ಬೇಡ ಅನ್ನಲ್ಲ ಎಂದು ಟೀಕಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಎಲ್ಲ ಮುಸ್ಲಿಮರನ್ನು ಟೀಕೆ ಮಾಡುತ್ತಿಲ್ಲ, ಅರ್ಥ ಮಾಡಿಕೊಳ್ಳಿ. ಇವರು ಯಾರೋ ರಾಷ್ಟ್ರ ದ್ರೋಹಿಗಳು ಮಾಡುತ್ತಿರುವ ಕುತಂತ್ರ. ಇಂತವರನ್ನು ಒದ್ದು ಒಳಗೆ ಹಾಕಿದ್ರೆ, ಇತರೇ ಮುಸ್ಲಿಮರಿಗೆ ಸಂತೋಷ ಆಗುತ್ತದೆ. ಮುಸ್ಲಿಂ ಸಮುದಾಯಕ್ಕೆ ಅಪಮಾನ ಆಗುತ್ತಿದೆ ಅಂತ ಅವರೂ ಹೇಳುತ್ತಿದ್ದಾರೆ. ನಮ್ಮ ಬ್ರದರ್, ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೇನೆ ಅಂತಾರೆ ಸಿದ್ದರಾಮಯ್ಯ. ಇದು ಟಿಪ್ಪು ನಗರ, ಟಿಪ್ಪು ರಾಜ್ಯ ಅಂತ ಹೇಳ್ತಾರೆ. ಇವರದು ಎಷ್ಟು ಸೊಕ್ಕಿನ ಮಾತು, ಎಲ್ಲಿಂದ ಧೈರ್ಯ ಬಂತು ಹೀಗನ್ನಲು.
ಇವರ ತುಷ್ಟೀಕರಣ ನೀತಿ ಸರ್ಕಾರವನ್ನು ಸುಡುತ್ತೆ, ಕಾಂಗ್ರೆಸನ್ನು ಭಸ್ಮ ಮಾಡುತ್ತೆ. ನಮಾಜ್ ಮಾಡಿದವರನ್ನು ತಕ್ಷಣ ಅರೆಸ್ಟ್ ಮಾಡಿ. ರಾಷ್ಟ್ರ ದ್ರೋಹದ ಕೃತ್ಯ ಕೇಸ್ ಹಾಕಿ. ಹಿಂದು ಮುಸ್ಲಿಂ ಸಂತೋಷದಿಂದ ಇರೋದು ಇವರಿಗೆ ಇಷ್ಟ ಇಲ್ವಾ ಎಂದು ಈಶ್ವರಪ್ಪ ಮಂಗಳೂರಿನಲ್ಲಿ ಪ್ರಶ್ನಿಸಿದ್ದಾರೆ.
ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಬಗ್ಗೆ ಕೇಳಿದ ಪ್ರಶ್ನೆಗೆ, ಈ ವಿಚಾರದಲ್ಲಿ ಬಿಜೆಪಿ ಮುಖಂಡರು ಏನು ಮಾಡುತ್ತಿದ್ದಾರೆ ಎಂಬುದರ ಬಗ್ಗೆ ನಾನು ಮಾತಾಡಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಡಬಲ್ ಸ್ಟ್ಯಾಂಡರ್ಡ್ ಹೊಂದಿದ್ದಾರೆ. ನನ್ನ ವಿರುದ್ಧ ಆರೋಪ ಬಂದಾಗ ತಕ್ಷಣ ರಾಜಿನಾಮೆ ನೀಡಿದ್ದೆ. ಇದೇ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಜೊತೆಯಾಗಿ ಪ್ರತಿಭಟನೆ ಮಾಡಿದ್ದರು. ಈಗ ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದಲ್ಲಿ ಈ ಇಬ್ಬರು ಮೌನವಾಗಿದ್ದಾರೆ. ನನ್ನ ವಿರುದ್ಧ ಆಪಾದನೆ ಬಂದಾಗ ನಾನು ರಾಜನಾಮೆ ನೀಡಿ ತನಿಖೆಗೆ ಸಹಕಾರ ನೀಡಿದ್ದೆ. ಈಗ ಆತ್ಮಹತ್ಯೆ ಮಾಡಿಕೊಂಡಿರುವ ಅಧಿಕಾರಿ ಡೆತ್ ನೋಟ್ ನಲ್ಲಿ ಕೆಲವು ಅಧಿಕಾರಿಗಳ ವಿರುದ್ದ, ಸಚಿವ ನಾಗೇಂದ್ರ ಅವರ ಬಗ್ಗೆ ಆರೋಪ ಮಾಡಿದ್ದಾರೆ. ಕೂಡಲೇ ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು. ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ಆಗಬೇಕು ಎಂದು ಆಗ್ರಹಿಸಿದರು.
Namaz in the middle of the road in Mangalore, Eshwarappa they are anti nationals must arrest them immediately he added speaking at press club in Mangalore.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm