ಬ್ರೇಕಿಂಗ್ ನ್ಯೂಸ್
28-05-24 09:48 pm Mangalore Correspondent ಕರಾವಳಿ
ಮಂಗಳೂರು, ಮೇ 28: ನಡುರಸ್ತೆಯಲ್ಲಿ ನಮಾಜ್ ಮಾಡಿರುವ ವಿಚಾರದಲ್ಲಿ ಘಟನೆ ಮರುಕಳಿಸಿದರೆ ನಾವು ದಾಳಿ ಮಾಡುತ್ತೇವೆ ಎಂಬ ಬಜರಂಗದಳ ಎಚ್ಚರಿಕೆಗೆ ಎಸ್ಡಿಪಿಐ ನಾಯಕರು ತಿರುಗೇಟು ನೀಡಿದ್ದಾರೆ. ಹಿಂದುಗಳ ಗಣೇಶೋತ್ಸವ ಇನ್ನಿತರ ಸಂದರ್ಭಗಳಲ್ಲಿ ಇಡೀ ರಸ್ತೆಯನ್ನು ಬಂದ್ ಮಾಡೋದಿಲ್ವಾ.. ಅದು ಆಯಾ ಧರ್ಮಗಳ ಹಬ್ಬ. ಹಾಗೆಂದು ಅದನ್ನು ಮುಂದಿಟ್ಟು ಕೋಮು ದ್ವೇಷ ಹಬ್ಬಿಸುವುದು ಸರಿಯಲ್ಲ. ಈಗ ಬಜರಂಗದಳ ನಾಯಕರು ದಾಳಿ ಮಾಡುತ್ತೇವೆ ಎನ್ನುತ್ತಾರೆ. ತಾಕತ್ತಿದ್ದರೆ, ಅದನ್ನು ಮಾಡಿ ತೋರಿಸಲಿ ಎಂದು ಎಸ್ಪಿಡಿಐ ನಾಯಕ ರಿಯಾಜ್ ಕಡಂಬು ಸವಾಲು ಹಾಕಿದ್ದಾರೆ.
ಘಟನೆ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ರಿಯಾಜ್ ಕಡಂಬು, ನಾವು ಶಾಂತ ಸಮಾಜದಲ್ಲಿ ಕೋಮು ದ್ವೇಷ ಹಬ್ಬಿಸಲು ಅಥವಾ ಗಲಭೆ ಎಬ್ಬಿಸಲು ಬಯಸುವುದಿಲ್ಲ. ಹಾಗೆಂದು ಪಂಪ್ವೆಲ್ ನಂತಹ ನಾಯಕರು ಪ್ರಚೋದನೆ ಮಾಡಿದರೆ ಕೈಕಟ್ಟಿ ಕೂರುವುದೂ ಇಲ್ಲ. ಅಲ್ಲಿ ಎರಡು ನಿಮಿಷ ನಮಾಜ್ ಮಾಡಿದವರು ಎದ್ದು ಹೋಗಿದ್ದಾರೆ. ಇವರು ಮಾತ್ರ ಅದನ್ನು ದೊಡ್ಡ ರಾದ್ಧಾಂತ ಮಾಡುತ್ತಿದ್ದಾರೆ. ಇಲ್ಲಿ ಸಮಾಜವನ್ನು ರಕ್ಷಣೆ ಮಾಡುವುದಕ್ಕೆ, ಕಾನೂನಿಗೆ ವಿರುದ್ಧ ನಡೆದರೆ ಪೊಲೀಸರು ಇದ್ದಾರೆ. ಜನರು ಪ್ರಜ್ಞಾವಂತರಿದ್ದಾರೆ, ಎಲ್ಲ ಸಂದರ್ಭಗಳಲ್ಲಿ ಕೈಕಟ್ಟಿ ಕೂರುತ್ತಾರೆಂದು ಭಾವಿಸುವುದು ಬೇಡ.
ಪಂಪ್ವೆಲ್ ನಂತಹ ಸೇತುವೆಯ ಅಡಿಭಾಗದಲ್ಲಿ ಬಹಳಷ್ಟು ಮಂದಿ ಕುಟುಂಬಗಳು ರಾತ್ರಿ ಮಲಗುತ್ತಾರೆ. ಅದರಲ್ಲಿ ಎಲ್ಲ ಧರ್ಮದವರೂ ಇದ್ದಾರೆ. ಅವರಿಗೆ ಸಹಾಯ ಮಾಡುವುದು, ಆಶ್ರಯ ಕಲ್ಪಿಸುವ ಕೆಲಸ ಮಾಡಿದರೆ ಜನರು ಮೆಚ್ಚುತ್ತಾರೆ. ಅದು ಬಿಟ್ಟು ಪ್ರತಿ ಬಾರಿ ಜಿಲ್ಲೆಗೆ ಬೆಂಕಿ ಹಚ್ಚುವ ರೀತಿ ಹೇಳಿಕೆ ನೀಡುವುದು, ಪ್ರಚೋದನೆ ನೀಡುವುದನ್ನು ನಾವು ಸಹಿಸಲ್ಲ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಿಯಾಜ್ ಕಡಂಬು ಹೇಳಿದ್ದಾರೆ.
ಬಜರಂಗದಳ ನೇರ ಕಾರ್ಯಾಚರಣೆ ಮಾಡುತ್ತೇವೆ ಎಂದು ಹೇಳಿದ ಬೆನ್ನಲ್ಲೇ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಇದರ ಬೆನ್ನಲ್ಲೇ ನಾವೇನೂ ಕೈಕಟ್ಟಿ ಕೂತಿಲ್ಲ ಎನ್ನುವ ಮೂಲಕ ಮುಸ್ಲಿಂ ನಾಯಕರು ತೊಡೆ ತಟ್ಟಿದ್ದಾರೆ. ಆಮೂಲಕ ಶಾಂತ ಸಮಾಜದಲ್ಲಿ ಸದ್ದಿಲ್ಲದೆ, ಮತ್ತೊಮ್ಮೆ ದ್ವೇಷದ ವಾತಾವರಣ ಮೂಡಿಸುವ ಯತ್ನ ನಡೆದಿರುವಂತೆ ಕಂಡುಬರುತ್ತಿದೆ.
Mangalore Namaz in the middle of the raod, SDPI warns Bajrang dal. Bajrang dal had warned of taking action if they find doing nama again. Sdpi leader Riaz also questioned about Ganeshotsava celebrations in raods.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm