ಬ್ರೇಕಿಂಗ್ ನ್ಯೂಸ್
28-05-24 09:48 pm Mangalore Correspondent ಕರಾವಳಿ
ಮಂಗಳೂರು, ಮೇ 28: ನಡುರಸ್ತೆಯಲ್ಲಿ ನಮಾಜ್ ಮಾಡಿರುವ ವಿಚಾರದಲ್ಲಿ ಘಟನೆ ಮರುಕಳಿಸಿದರೆ ನಾವು ದಾಳಿ ಮಾಡುತ್ತೇವೆ ಎಂಬ ಬಜರಂಗದಳ ಎಚ್ಚರಿಕೆಗೆ ಎಸ್ಡಿಪಿಐ ನಾಯಕರು ತಿರುಗೇಟು ನೀಡಿದ್ದಾರೆ. ಹಿಂದುಗಳ ಗಣೇಶೋತ್ಸವ ಇನ್ನಿತರ ಸಂದರ್ಭಗಳಲ್ಲಿ ಇಡೀ ರಸ್ತೆಯನ್ನು ಬಂದ್ ಮಾಡೋದಿಲ್ವಾ.. ಅದು ಆಯಾ ಧರ್ಮಗಳ ಹಬ್ಬ. ಹಾಗೆಂದು ಅದನ್ನು ಮುಂದಿಟ್ಟು ಕೋಮು ದ್ವೇಷ ಹಬ್ಬಿಸುವುದು ಸರಿಯಲ್ಲ. ಈಗ ಬಜರಂಗದಳ ನಾಯಕರು ದಾಳಿ ಮಾಡುತ್ತೇವೆ ಎನ್ನುತ್ತಾರೆ. ತಾಕತ್ತಿದ್ದರೆ, ಅದನ್ನು ಮಾಡಿ ತೋರಿಸಲಿ ಎಂದು ಎಸ್ಪಿಡಿಐ ನಾಯಕ ರಿಯಾಜ್ ಕಡಂಬು ಸವಾಲು ಹಾಕಿದ್ದಾರೆ.
ಘಟನೆ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ರಿಯಾಜ್ ಕಡಂಬು, ನಾವು ಶಾಂತ ಸಮಾಜದಲ್ಲಿ ಕೋಮು ದ್ವೇಷ ಹಬ್ಬಿಸಲು ಅಥವಾ ಗಲಭೆ ಎಬ್ಬಿಸಲು ಬಯಸುವುದಿಲ್ಲ. ಹಾಗೆಂದು ಪಂಪ್ವೆಲ್ ನಂತಹ ನಾಯಕರು ಪ್ರಚೋದನೆ ಮಾಡಿದರೆ ಕೈಕಟ್ಟಿ ಕೂರುವುದೂ ಇಲ್ಲ. ಅಲ್ಲಿ ಎರಡು ನಿಮಿಷ ನಮಾಜ್ ಮಾಡಿದವರು ಎದ್ದು ಹೋಗಿದ್ದಾರೆ. ಇವರು ಮಾತ್ರ ಅದನ್ನು ದೊಡ್ಡ ರಾದ್ಧಾಂತ ಮಾಡುತ್ತಿದ್ದಾರೆ. ಇಲ್ಲಿ ಸಮಾಜವನ್ನು ರಕ್ಷಣೆ ಮಾಡುವುದಕ್ಕೆ, ಕಾನೂನಿಗೆ ವಿರುದ್ಧ ನಡೆದರೆ ಪೊಲೀಸರು ಇದ್ದಾರೆ. ಜನರು ಪ್ರಜ್ಞಾವಂತರಿದ್ದಾರೆ, ಎಲ್ಲ ಸಂದರ್ಭಗಳಲ್ಲಿ ಕೈಕಟ್ಟಿ ಕೂರುತ್ತಾರೆಂದು ಭಾವಿಸುವುದು ಬೇಡ.
ಪಂಪ್ವೆಲ್ ನಂತಹ ಸೇತುವೆಯ ಅಡಿಭಾಗದಲ್ಲಿ ಬಹಳಷ್ಟು ಮಂದಿ ಕುಟುಂಬಗಳು ರಾತ್ರಿ ಮಲಗುತ್ತಾರೆ. ಅದರಲ್ಲಿ ಎಲ್ಲ ಧರ್ಮದವರೂ ಇದ್ದಾರೆ. ಅವರಿಗೆ ಸಹಾಯ ಮಾಡುವುದು, ಆಶ್ರಯ ಕಲ್ಪಿಸುವ ಕೆಲಸ ಮಾಡಿದರೆ ಜನರು ಮೆಚ್ಚುತ್ತಾರೆ. ಅದು ಬಿಟ್ಟು ಪ್ರತಿ ಬಾರಿ ಜಿಲ್ಲೆಗೆ ಬೆಂಕಿ ಹಚ್ಚುವ ರೀತಿ ಹೇಳಿಕೆ ನೀಡುವುದು, ಪ್ರಚೋದನೆ ನೀಡುವುದನ್ನು ನಾವು ಸಹಿಸಲ್ಲ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಿಯಾಜ್ ಕಡಂಬು ಹೇಳಿದ್ದಾರೆ.
ಬಜರಂಗದಳ ನೇರ ಕಾರ್ಯಾಚರಣೆ ಮಾಡುತ್ತೇವೆ ಎಂದು ಹೇಳಿದ ಬೆನ್ನಲ್ಲೇ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಇದರ ಬೆನ್ನಲ್ಲೇ ನಾವೇನೂ ಕೈಕಟ್ಟಿ ಕೂತಿಲ್ಲ ಎನ್ನುವ ಮೂಲಕ ಮುಸ್ಲಿಂ ನಾಯಕರು ತೊಡೆ ತಟ್ಟಿದ್ದಾರೆ. ಆಮೂಲಕ ಶಾಂತ ಸಮಾಜದಲ್ಲಿ ಸದ್ದಿಲ್ಲದೆ, ಮತ್ತೊಮ್ಮೆ ದ್ವೇಷದ ವಾತಾವರಣ ಮೂಡಿಸುವ ಯತ್ನ ನಡೆದಿರುವಂತೆ ಕಂಡುಬರುತ್ತಿದೆ.
Mangalore Namaz in the middle of the raod, SDPI warns Bajrang dal. Bajrang dal had warned of taking action if they find doing nama again. Sdpi leader Riaz also questioned about Ganeshotsava celebrations in raods.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm