ಬ್ರೇಕಿಂಗ್ ನ್ಯೂಸ್
31-05-24 10:07 pm Mangalore Correspondent ಕರಾವಳಿ
ಮಂಗಳೂರು, ಮೇ 31: ಮಂಗಳೂರು ಪೊಲೀಸ್ ಕಮಿಷನರ್ ಗೆ ಇಲ್ಲಿನ ಹಿಂದು ಸಂಘಟನೆಗಳ ಶಕ್ತಿ ಗೊತ್ತಿಲ್ಲ ಎಂದೆನಿಸುತ್ತದೆ. ನಮ್ಮ ಸಂಘಟನೆಗಳ ಜೊತೆಗೆ ಚೆಲ್ಲಾಟಕ್ಕೆ ಇಳಿದ ರೀತಿ ತೋರುತ್ತಿದೆ. ಯಾರದ್ದೋ ಒತ್ತಡಕ್ಕೆ ಮಣಿದು ಮುಸ್ಲಿಮರ ಮೇಲಿನ ಕೇಸನ್ನು ಹಿಂಪಡೆಯುತ್ತಾರೆ, ನಮ್ಮ ಸಂಘಟನೆ ನಾಯಕರ ಮೇಲೆ ಜಾಮೀನು ರಹಿತ ಕೇಸು ದಾಖಲು ಮಾಡುತ್ತಾರೆ. ಪೊಲೀಸ್ ಆಯುಕ್ತರಿಗೆ ನಮ್ಮ ಪವರ್ ಗೊತ್ತಿಲ್ಲಾಂದ್ರೆ ತೋರಿಸಬೇಕಾಗುತ್ತದೆ ಎಂದು ಬಿಜೆಪಿ ಮುಖಂಡ ಶರಣ್ ಪಂಪ್ವೆಲ್ ಹೇಳಿದ್ದಾರೆ.
ನಮಾಜ್ ವಿಚಾರದಲ್ಲಿ ದಾಖಲಾಗಿದ್ದ ಸುಮೊಟೋ ಕೇಸನ್ನು ಹಿಂಪಡೆದಿದ್ದನ್ನು ವಿರೋಧಿಸಿ ಮತ್ತು ಹಿಂದು ಮುಖಂಡ ಶರಣ್ ಪಂಪ್ವೆಲ್ ವಿರುದ್ಧ ಕೇಸು ದಾಖಲಿಸಿದ್ದನ್ನು ಖಂಡಿಸಿ ಮಲ್ಲಿಕಟ್ಟೆ ವೃತ್ತದಲ್ಲಿ ವಿಶ್ವ ಹಿಂದು ಪರಿಷತ್, ಬಜರಂಗದಳ ವತಿಯಿಂದ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಪೊಲೀಸರು ಕಾಂಗ್ರೆಸ್ ಮತ್ತು ಮುಸ್ಲಿಂ ನಾಯಕರ ಅಣತಿಯಂತೆ ಕೆಲಸ ಮಾಡುತ್ತಿದ್ದಾರೆ. ಕರಾವಳಿಯಲ್ಲಿ ಕೋಮು ದ್ವೇಷ ಕದಡಲು ಇವರೇ ಕಾರಣ ಆಗುತ್ತಿದ್ದಾರೆ. ರಸ್ತೆಯಲ್ಲಿ ನಮಾಜ್ ಮಾಡುವ ವಿಡಿಯೋ ಆಧರಿಸಿ ಸ್ವಯಂಪ್ರೇರಿತ ಕೇಸು ದಾಖಲಿಸಿದ್ದ ಪೊಲೀಸರೇ ಕಾಂಗ್ರೆಸ್ ನಾಯಕರ ಒತ್ತಡ ಬರುತ್ತಲೇ ಬಿ ರಿಪೋರ್ಟ್ ಹಾಕುತ್ತಾರೆ. ಪ್ರಕರಣ ದಾಖಲಿಸಿದ ಬಳಿಕ ತನಿಖೆಯನ್ನೇ ನಡೆಸದೆ ಬಿ ರಿಪೋರ್ಟ್ ಹಾಕಿದ್ದು ಇದೇ ಮೊದಲಿರಬೇಕು. ಅದರ ಜೊತೆಗೆ, ಕಾಂಗ್ರೆಸ್ ನಾಯಕರ ಸೂಚನೆಯಂತೆ ಶರಣ್ ಪಂಪ್ವೆಲ್ ಮೇಲೆ ಕೇಸು ದಾಖಲಿಸಿದ್ದಾರೆ. ಆ ಕೇಸನ್ನು ಅದೇ ರೀತಿ ಹಿಂಪಡೆಯಬೇಕು, ಇಲ್ಲಾಂದ್ರೆ ನಮ್ಮ ಶಕ್ತಿಯನ್ನು ತೋರಿಸಬೇಕಾಗುತ್ತದೆ ಎಂದರು.
ಬಜರಂಗದಳ ಮುಖಂಡ ಪುನೀತ್ ಅತ್ತಾವರ ಮಾತನಾಡಿ, ರಸ್ತೆಯಲ್ಲಿ ನಮಾಜ್ ಮಾಡಿದ್ದಕ್ಕೆ ದಾಖಲೆ ಇತ್ತು. ಅದಕ್ಕಾಗಿ ಪೊಲೀಸರು ಕೇಸು ದಾಖಲು ಮಾಡಿದ್ದಾರೆ. ಅದರ ನೆಪದಲ್ಲಿ ನೀವು ಗಣೇಶೋತ್ಸವ ಮಾಡೋದಿಲ್ಲವೇ, ಭಜನೆ, ಯಕ್ಷಗಾನ ಮಾಡೋದಿಲ್ಲವೇ ಎಂದು ಕೇಳುತ್ತಾರೆ. ನಾವು ಏನು ಮಾಡುವುದಿದ್ದರೂ ಪೊಲೀಸರ ಪರ್ಮಿಶನ್ ಪಡೆದೇ ಮಾಡುತ್ತೇವೆ. ನೀವು ಇದೇ ರೀತಿ ಮಾಡುತ್ತಾ ಹೋದರೆ ನಾವು ಕೇವಲ ಹನುಮಾನ್ ಚಾಲೀಸಾ ಪಠಣ ಮಾಡುವುದಲ್ಲ. ಕೈಯಲ್ಲಿ ದಂಡವನ್ನೂ ಹಿಡಿಯುತ್ತೇವೆ. ನಮಾಜ್ ಮಾಡಲು ಪರ್ಮಿಶನ್ ಬೇಡಾಂದ್ರೆ ಮಸೀದಿ ಎದುರಲ್ಲಿ ಹನುಮಾನ್ ಚಾಲೀಸಾ ಪಠಿಸುವುದಕ್ಕೂ ಪರ್ಮಿಶನ್ ಬೇಕಾಗಲ್ಲ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ನಂದನ್ ಮಲ್ಯ, ಶಿವಾನಂದ ಮೆಂಡನ್ ಸೇರಿದಂತೆ ಹಲವು ಪ್ರಮುಖರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
Mangalore Vhp Bajrang dal warns police commissioner Anupam agrwal over playing tactics in namaz case. Out of political pressure the sumoto case against muslim guys have been cancelled said jagadish shenava.
20-07-25 04:24 pm
Bangalore Correspondent
Rcb, Bangalore: ಪೊಲೀಸರು 'ಆರ್ಸಿಬಿ ಸೇವಕರು' ಎಂಬ...
19-07-25 03:05 pm
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
20-07-25 03:06 pm
Mangaluru Correspondent
MRPL, MP Brijesh Chowta, Mangalore: MRPL ಹಸಿರ...
19-07-25 10:01 pm
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
RCB Stampede, DySP Anupama Shenoy: ಕಾಲ್ತುಳಿತ...
19-07-25 06:51 pm
Dharmasthala Case, Santosh Kumar, CPIM: ಧರ್ಮಸ...
19-07-25 06:14 pm
20-07-25 12:16 pm
HK News Desk
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm