ಬ್ರೇಕಿಂಗ್ ನ್ಯೂಸ್
31-05-24 10:07 pm Mangalore Correspondent ಕರಾವಳಿ
ಮಂಗಳೂರು, ಮೇ 31: ಮಂಗಳೂರು ಪೊಲೀಸ್ ಕಮಿಷನರ್ ಗೆ ಇಲ್ಲಿನ ಹಿಂದು ಸಂಘಟನೆಗಳ ಶಕ್ತಿ ಗೊತ್ತಿಲ್ಲ ಎಂದೆನಿಸುತ್ತದೆ. ನಮ್ಮ ಸಂಘಟನೆಗಳ ಜೊತೆಗೆ ಚೆಲ್ಲಾಟಕ್ಕೆ ಇಳಿದ ರೀತಿ ತೋರುತ್ತಿದೆ. ಯಾರದ್ದೋ ಒತ್ತಡಕ್ಕೆ ಮಣಿದು ಮುಸ್ಲಿಮರ ಮೇಲಿನ ಕೇಸನ್ನು ಹಿಂಪಡೆಯುತ್ತಾರೆ, ನಮ್ಮ ಸಂಘಟನೆ ನಾಯಕರ ಮೇಲೆ ಜಾಮೀನು ರಹಿತ ಕೇಸು ದಾಖಲು ಮಾಡುತ್ತಾರೆ. ಪೊಲೀಸ್ ಆಯುಕ್ತರಿಗೆ ನಮ್ಮ ಪವರ್ ಗೊತ್ತಿಲ್ಲಾಂದ್ರೆ ತೋರಿಸಬೇಕಾಗುತ್ತದೆ ಎಂದು ಬಿಜೆಪಿ ಮುಖಂಡ ಶರಣ್ ಪಂಪ್ವೆಲ್ ಹೇಳಿದ್ದಾರೆ.
ನಮಾಜ್ ವಿಚಾರದಲ್ಲಿ ದಾಖಲಾಗಿದ್ದ ಸುಮೊಟೋ ಕೇಸನ್ನು ಹಿಂಪಡೆದಿದ್ದನ್ನು ವಿರೋಧಿಸಿ ಮತ್ತು ಹಿಂದು ಮುಖಂಡ ಶರಣ್ ಪಂಪ್ವೆಲ್ ವಿರುದ್ಧ ಕೇಸು ದಾಖಲಿಸಿದ್ದನ್ನು ಖಂಡಿಸಿ ಮಲ್ಲಿಕಟ್ಟೆ ವೃತ್ತದಲ್ಲಿ ವಿಶ್ವ ಹಿಂದು ಪರಿಷತ್, ಬಜರಂಗದಳ ವತಿಯಿಂದ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಪೊಲೀಸರು ಕಾಂಗ್ರೆಸ್ ಮತ್ತು ಮುಸ್ಲಿಂ ನಾಯಕರ ಅಣತಿಯಂತೆ ಕೆಲಸ ಮಾಡುತ್ತಿದ್ದಾರೆ. ಕರಾವಳಿಯಲ್ಲಿ ಕೋಮು ದ್ವೇಷ ಕದಡಲು ಇವರೇ ಕಾರಣ ಆಗುತ್ತಿದ್ದಾರೆ. ರಸ್ತೆಯಲ್ಲಿ ನಮಾಜ್ ಮಾಡುವ ವಿಡಿಯೋ ಆಧರಿಸಿ ಸ್ವಯಂಪ್ರೇರಿತ ಕೇಸು ದಾಖಲಿಸಿದ್ದ ಪೊಲೀಸರೇ ಕಾಂಗ್ರೆಸ್ ನಾಯಕರ ಒತ್ತಡ ಬರುತ್ತಲೇ ಬಿ ರಿಪೋರ್ಟ್ ಹಾಕುತ್ತಾರೆ. ಪ್ರಕರಣ ದಾಖಲಿಸಿದ ಬಳಿಕ ತನಿಖೆಯನ್ನೇ ನಡೆಸದೆ ಬಿ ರಿಪೋರ್ಟ್ ಹಾಕಿದ್ದು ಇದೇ ಮೊದಲಿರಬೇಕು. ಅದರ ಜೊತೆಗೆ, ಕಾಂಗ್ರೆಸ್ ನಾಯಕರ ಸೂಚನೆಯಂತೆ ಶರಣ್ ಪಂಪ್ವೆಲ್ ಮೇಲೆ ಕೇಸು ದಾಖಲಿಸಿದ್ದಾರೆ. ಆ ಕೇಸನ್ನು ಅದೇ ರೀತಿ ಹಿಂಪಡೆಯಬೇಕು, ಇಲ್ಲಾಂದ್ರೆ ನಮ್ಮ ಶಕ್ತಿಯನ್ನು ತೋರಿಸಬೇಕಾಗುತ್ತದೆ ಎಂದರು.

ಬಜರಂಗದಳ ಮುಖಂಡ ಪುನೀತ್ ಅತ್ತಾವರ ಮಾತನಾಡಿ, ರಸ್ತೆಯಲ್ಲಿ ನಮಾಜ್ ಮಾಡಿದ್ದಕ್ಕೆ ದಾಖಲೆ ಇತ್ತು. ಅದಕ್ಕಾಗಿ ಪೊಲೀಸರು ಕೇಸು ದಾಖಲು ಮಾಡಿದ್ದಾರೆ. ಅದರ ನೆಪದಲ್ಲಿ ನೀವು ಗಣೇಶೋತ್ಸವ ಮಾಡೋದಿಲ್ಲವೇ, ಭಜನೆ, ಯಕ್ಷಗಾನ ಮಾಡೋದಿಲ್ಲವೇ ಎಂದು ಕೇಳುತ್ತಾರೆ. ನಾವು ಏನು ಮಾಡುವುದಿದ್ದರೂ ಪೊಲೀಸರ ಪರ್ಮಿಶನ್ ಪಡೆದೇ ಮಾಡುತ್ತೇವೆ. ನೀವು ಇದೇ ರೀತಿ ಮಾಡುತ್ತಾ ಹೋದರೆ ನಾವು ಕೇವಲ ಹನುಮಾನ್ ಚಾಲೀಸಾ ಪಠಣ ಮಾಡುವುದಲ್ಲ. ಕೈಯಲ್ಲಿ ದಂಡವನ್ನೂ ಹಿಡಿಯುತ್ತೇವೆ. ನಮಾಜ್ ಮಾಡಲು ಪರ್ಮಿಶನ್ ಬೇಡಾಂದ್ರೆ ಮಸೀದಿ ಎದುರಲ್ಲಿ ಹನುಮಾನ್ ಚಾಲೀಸಾ ಪಠಿಸುವುದಕ್ಕೂ ಪರ್ಮಿಶನ್ ಬೇಕಾಗಲ್ಲ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ನಂದನ್ ಮಲ್ಯ, ಶಿವಾನಂದ ಮೆಂಡನ್ ಸೇರಿದಂತೆ ಹಲವು ಪ್ರಮುಖರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
Mangalore Vhp Bajrang dal warns police commissioner Anupam agrwal over playing tactics in namaz case. Out of political pressure the sumoto case against muslim guys have been cancelled said jagadish shenava.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm