ಬ್ರೇಕಿಂಗ್ ನ್ಯೂಸ್
31-05-24 10:41 pm Mangalore Correspondent ಕರಾವಳಿ
ಮಂಗಳೂರು, ಮೇ 31: ಸಾರ್ವಜನಿಕ ರಸ್ತೆಯಲ್ಲಿ ನಮಾಝ್ ಮಾಡಿ ವಾಹನ ಹಾಗೂ ಜನಸಂಚಾರಕ್ಕೆ ಅಡ್ಡಿಪಡಿಸಿದರೂ ಆ ಕೇಸಿಗೆ ಬಿ ರಿಪೋರ್ಟ್ ಹಾಕಿದ ಪೊಲೀಸರು, ನಮಾಜ್ ಘಟನೆ ಬಗ್ಗೆ ಪ್ರಶ್ನೆ ಮಾಡಿದ ಶರಣ್ ಪಂಪುವೆಲ್ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ. ಇಂತಹ ತಾರತಮ್ಯದ ಘಟನೆ ನಡೆದಿರುವುದು ಕಾಂಗ್ರೆಸಿನ ದುರಾಡಳಿತದ ಪರಮಾವಧಿಗೆ ಸಾಕ್ಷಿ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾ.ಬ್ರಿಜೇಶ್ ಚೌಟ ಟೀಕಿಸಿದ್ದಾರೆ.
ಜನ ಸಂಚಾರಕ್ಕೆ ತೊಂದರೆಪಡಿಸಿ ನಮಾಜ್ ಮಾಡಿರುವ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಸ್ವಯಂ ಆಗಿಯೇ ಪ್ರಕರಣ ದಾಖಲಿಸಿದ್ದರು. ಆದರೆ, ಇದರಿಂದ ಅಲ್ಪಸಂಖ್ಯಾತರಿಗೆ ನೋವಾಯ್ತು ಎನ್ನುವ ಕಾರಣವೊಡ್ಡಿ ಕಾಂಗ್ರೆಸ್ ನಾಯಕರು ಪೊಲೀಸ್ ಇಲಾಖೆ ಮೇಲೆ ಒತ್ತಡ ಹಾಕಿ ಕೇಸನ್ನೇ ಹಿಂಪಡೆಯುವಂತೆ ಮಾಡಿದ್ದು ವಿಪರ್ಯಾಸ.

ಅಲ್ಲದೆ, ಸುಮೋಟೊ ಪ್ರಕರಣ ದಾಖಲಿಸಿದ ಪೊಲೀಸ್ ಅಧಿಕಾರಿಯನ್ನು ರಜೆಯಲ್ಲಿ ಕಳುಹಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಪೊಲೀಸರ ಮನೋಸ್ಥೈರ್ಯವನ್ನೇ ಕುಗ್ಗಿಸುವಂತೆ ಮಾಡಿದೆ. ಇದಲ್ಲದೆ, ನಮಾಜ್ ಘಟನೆ ಮುಂದುವರಿದರೆ ಹನುಮಾನ್ ಚಾಲೀಸಾ ಪಠಣ ಮಾಡುತ್ತೇವೆ ಎಂದ ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪುವೆಲ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಿ ಅಲ್ಪಸಂಖ್ಯಾತರನ್ನು ಖುಷಿಪಡಿಸುವ ಕೆಲಸ ಮಾಡಿದ್ದಾರೆ. ಆಮೂಲಕ ಕಾಂಗ್ರೆಸ್ ತನ್ನ ವೋಟ್ ಬ್ಯಾಂಕ್ ಗಟ್ಟಿಗೊಳಿಸಲು ಹೊರಟಂತಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದಾಗಿನಿಂದ ಪೋಲಿಸ್ ಇಲಾಖೆಗೆ ಸ್ವಾತಂತ್ರ್ಯ ಇಲ್ಲದಾಗಿದೆ. ಪೊಲೀಸರು ತಮ್ಮ ಕರ್ತವ್ಯ ಪಾಲನೆ ಮಾಡುವುದಕ್ಕೂ ಕಾಂಗ್ರೆಸ್ ನಾಯಕರ ಅನುಮತಿ ಪಡೆದು ಮುಂದುವರಿಯುವ ಸ್ಥಿತಿಯಾಗಿದೆ. ಇಂತಹ ಬೆಳವಣಿಗೆಯಿಂದ ರಾಜ್ಯದಲ್ಲಿ ಕೋಮು ಸಾಮರಸ್ಯಕ್ಕೆ ಧಕ್ಕೆಯಾಗಿ ಸಾಮಾಜಿಕ ಅಶಾಂತಿ ನಿರ್ಮಾಣಕ್ಕೆ ಕಾರಣವಾಗಿದೆ. ಪೊಲೀಸರನ್ನೂ ಹಿಂದು ಸಂಘಟನೆಗಳ ಮೇಲೆ ಎತ್ತಿಕಟ್ಟಿ ಸಾಮರಸ್ಯಕ್ಕೆ ಕೊಳ್ಳಿಯಿಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರವೇ ಮಾಡಿದೆ ಎಂದು ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Mangalore Namaz in road, BJP Brijesh Chowta slams police over case against Sharan Pumpwell, says police have become puppets of congress government.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm