ಬ್ರೇಕಿಂಗ್ ನ್ಯೂಸ್
31-05-24 10:49 pm Mangalore Correspondent ಕರಾವಳಿ
ಮಂಗಳೂರು, ಮೇ 31: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಹಿಂದುತ್ವವಾದಿ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರನ್ನು ದಮನಿಸುವ ಕಾರ್ಯ ನಡೆಯುತ್ತಿದೆ. ಕಾಂಗ್ರೆಸ್ ನೀತಿ ಇದೇ ರೀತಿ ಮುಂದುವರಿದರೆ ರಾಜ್ಯಾದ್ಯಂತ ಹೋರಾಟ ರೂಪಿಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ರಾಜ್ಯ ಸರಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಶಾಂತಿ ಕಾಪಾಡಬೇಕಾಗಿರುವ ಸರಕಾರ ಮತ್ತು ಪೊಲೀಸ್ ಇಲಾಖೆ ಶಾಂತಿ ಕದಡುವ ಕೆಲಸ ಮಾಡುತ್ತಿದೆ. ಪೊಲೀಸರು ಸ್ವಾತಂತ್ರ್ಯ ಕಳಕೊಂಡು ಯಾರದ್ದೋ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ರಸ್ತೆಯಲ್ಲಿ ನಮಾಜ್ ಮಾಡಿದ್ದಕ್ಕೆ ಕೇಸು ದಾಖಲಿಸಿದ್ದ ಅದೇ ಪೊಲೀಸರು ಮೇಲಿನಿಂದ ಒತ್ತಡ ಬರುತ್ತಲೇ ಕೇಸು ಹಿಂಪಡೆಯುತ್ತಾರೆ. ಅಲ್ಲದೆ, ಈ ಬಗ್ಗೆ ಕ್ರಮಕ್ಕೆ ಆಗ್ರಹಿಸಿದ್ದ ಹಿಂದು ಸಂಘಟನೆ ಮುಖಂಡ ಶರಣ್ ಪಂಪ್ವೆಲ್ ಜಾಮೀನು ರಹಿತ ಕೇಸು ದಾಖಲಿಸಿದ್ದಾರೆ. ಕೇಸ್ ದಾಖಲಿಸಿರುವುದನ್ನು ಕೂಡಲೇ ರದ್ದುಗೊಳಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಯುವ ಜನರನ್ನು ಒಗ್ಗೂಡಿಸಿ, ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪೊಲೀಸರು ಕಾಂಗ್ರೆಸ್ ನಾಯಕರ ಒತ್ತಡದಿಂದ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದವರು ಮನವಿ ಸಲ್ಲಿಸಿದ ಬೆನ್ನಲ್ಲೇ ನಮಾಜ್ ಪ್ರಕರಣಕ್ಕೆ ಸಂಬಂಧಿಸಿ ಇಲಾಖೆ ಬಿ ರಿಪೋರ್ಟ್ ಸಲ್ಲಿಸಿದೆ. ಆದರೆ, ಈ ರೀತಿ ರಸ್ತೆ ಮೇಲೆ ನಮಾಜ್ ಮಾಡಿರುವುದು ತಪ್ಪು, ಇದೇ ರೀತಿ ಮುಂದುವರಿದಲ್ಲಿ ಹನುಮಾನ್ ಚಾಲೀಸಾ ಪಠಿಸುವುದಾಗಿ ಹೇಳಿರುವ ಶರಣ್ ಪಂಪ್ವೆಲ್ ಮೇಲೆ ಪ್ರಕರಣ ದಾಖಲಿಸಿದ್ದಾರೆ. ರಸ್ತೆಯಲ್ಲಿ ನಮಾಜ್ ಕುರಿತಂತೆ ಮಸೀದಿ ಕಾರ್ಯದರ್ಶಿಯೇ ಇದು ಸರಿಯಲ್ಲ ಎಂದು ಒಪ್ಪಿಕೊಂಡಿದ್ದಾರೆ. ಇದೀಗ ಕೇಸು ಹಿಂಪಡೆದು ಆ ರೀತಿ ಮಾಡಿದ್ದು ಸರಿ ಎಂದು ಪೊಲೀಸರು ಪರೋಕ್ಷವಾಗಿ ಒಪ್ಪಿಕೊಂಡ ರೀತಿ ಆಗಿದೆ. ಇದರಿಂದ ಪೊಲೀಸರು ಅಪನಂಬಿಕೆ ಎದುರಿಸುವಂತಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ನಿತಿನ್ ಕುಮಾರ್, ಜಗದೀಶ್ ಶೇಣವ, ಪ್ರೇಮಾನಂದ ಶೆಟ್ಟಿ, ಅರುಣ್ ಜಿ. ಶೇಟ್, ನಂದನ್ ಮಲ್ಯ ಉಪಸ್ಥಿತರಿದ್ದರು.
Namaz in road mangalore, BJP Satish Kumapla slams police department, congress government is trying to disturb peace in Karnataka he added.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm