ಬ್ರೇಕಿಂಗ್ ನ್ಯೂಸ್
31-05-24 10:49 pm Mangalore Correspondent ಕರಾವಳಿ
ಮಂಗಳೂರು, ಮೇ 31: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಹಿಂದುತ್ವವಾದಿ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರನ್ನು ದಮನಿಸುವ ಕಾರ್ಯ ನಡೆಯುತ್ತಿದೆ. ಕಾಂಗ್ರೆಸ್ ನೀತಿ ಇದೇ ರೀತಿ ಮುಂದುವರಿದರೆ ರಾಜ್ಯಾದ್ಯಂತ ಹೋರಾಟ ರೂಪಿಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ರಾಜ್ಯ ಸರಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಶಾಂತಿ ಕಾಪಾಡಬೇಕಾಗಿರುವ ಸರಕಾರ ಮತ್ತು ಪೊಲೀಸ್ ಇಲಾಖೆ ಶಾಂತಿ ಕದಡುವ ಕೆಲಸ ಮಾಡುತ್ತಿದೆ. ಪೊಲೀಸರು ಸ್ವಾತಂತ್ರ್ಯ ಕಳಕೊಂಡು ಯಾರದ್ದೋ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ರಸ್ತೆಯಲ್ಲಿ ನಮಾಜ್ ಮಾಡಿದ್ದಕ್ಕೆ ಕೇಸು ದಾಖಲಿಸಿದ್ದ ಅದೇ ಪೊಲೀಸರು ಮೇಲಿನಿಂದ ಒತ್ತಡ ಬರುತ್ತಲೇ ಕೇಸು ಹಿಂಪಡೆಯುತ್ತಾರೆ. ಅಲ್ಲದೆ, ಈ ಬಗ್ಗೆ ಕ್ರಮಕ್ಕೆ ಆಗ್ರಹಿಸಿದ್ದ ಹಿಂದು ಸಂಘಟನೆ ಮುಖಂಡ ಶರಣ್ ಪಂಪ್ವೆಲ್ ಜಾಮೀನು ರಹಿತ ಕೇಸು ದಾಖಲಿಸಿದ್ದಾರೆ. ಕೇಸ್ ದಾಖಲಿಸಿರುವುದನ್ನು ಕೂಡಲೇ ರದ್ದುಗೊಳಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಯುವ ಜನರನ್ನು ಒಗ್ಗೂಡಿಸಿ, ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪೊಲೀಸರು ಕಾಂಗ್ರೆಸ್ ನಾಯಕರ ಒತ್ತಡದಿಂದ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದವರು ಮನವಿ ಸಲ್ಲಿಸಿದ ಬೆನ್ನಲ್ಲೇ ನಮಾಜ್ ಪ್ರಕರಣಕ್ಕೆ ಸಂಬಂಧಿಸಿ ಇಲಾಖೆ ಬಿ ರಿಪೋರ್ಟ್ ಸಲ್ಲಿಸಿದೆ. ಆದರೆ, ಈ ರೀತಿ ರಸ್ತೆ ಮೇಲೆ ನಮಾಜ್ ಮಾಡಿರುವುದು ತಪ್ಪು, ಇದೇ ರೀತಿ ಮುಂದುವರಿದಲ್ಲಿ ಹನುಮಾನ್ ಚಾಲೀಸಾ ಪಠಿಸುವುದಾಗಿ ಹೇಳಿರುವ ಶರಣ್ ಪಂಪ್ವೆಲ್ ಮೇಲೆ ಪ್ರಕರಣ ದಾಖಲಿಸಿದ್ದಾರೆ. ರಸ್ತೆಯಲ್ಲಿ ನಮಾಜ್ ಕುರಿತಂತೆ ಮಸೀದಿ ಕಾರ್ಯದರ್ಶಿಯೇ ಇದು ಸರಿಯಲ್ಲ ಎಂದು ಒಪ್ಪಿಕೊಂಡಿದ್ದಾರೆ. ಇದೀಗ ಕೇಸು ಹಿಂಪಡೆದು ಆ ರೀತಿ ಮಾಡಿದ್ದು ಸರಿ ಎಂದು ಪೊಲೀಸರು ಪರೋಕ್ಷವಾಗಿ ಒಪ್ಪಿಕೊಂಡ ರೀತಿ ಆಗಿದೆ. ಇದರಿಂದ ಪೊಲೀಸರು ಅಪನಂಬಿಕೆ ಎದುರಿಸುವಂತಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ನಿತಿನ್ ಕುಮಾರ್, ಜಗದೀಶ್ ಶೇಣವ, ಪ್ರೇಮಾನಂದ ಶೆಟ್ಟಿ, ಅರುಣ್ ಜಿ. ಶೇಟ್, ನಂದನ್ ಮಲ್ಯ ಉಪಸ್ಥಿತರಿದ್ದರು.
Namaz in road mangalore, BJP Satish Kumapla slams police department, congress government is trying to disturb peace in Karnataka he added.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm