ಬ್ರೇಕಿಂಗ್ ನ್ಯೂಸ್
03-06-24 09:37 pm Mangalore Correspondent ಕರಾವಳಿ
ಪುತ್ತೂರು, ಜೂನ್ 3: ಸೋಮವಾರ ಸಂಜೆ ಪುತ್ತೂರು ಪೇಟೆಯಲ್ಲಿ ಮೇಘಸ್ಫೋಟ ಆದ ರೀತಿ ಮಳೆಯಾಗಿದೆ. ಸಂಜೆ 4 ಗಂಟೆಯಿಂದ 45 ನಿಮಿಷ ಕಾಲ ಭಾರೀ ಮಳೆ ಸುರಿದಿದ್ದು ಪುತ್ತೂರು ಪೇಟೆ ಇಡೀ ಮಳೆನೀರಿನಲ್ಲಿ ತೋಯ್ದು ಹೋಗಿದೆ. ಪುತ್ತೂರು ಪೇಟೆಯ ಜನರ ಪ್ರಕಾರ, ಇತ್ತೀಚಿನ ವರ್ಷಗಳಲ್ಲಿ ಕಂಡರಿಯದ ರೀತಿ ಮಳೆ ಆಗಿದ್ಯಂತೆ.
ಒಂದೇ ಸಮನೆ ಧೋ ಎಂದು ಮಳೆ ಸುರಿದಿದ್ದು, ರಸ್ತೆಯಲ್ಲಿ ನೀರು ನದಿಯಂತೆ ತುಂಬಿಕೊಂಡಿದೆ. ದರ್ಭೆಯಲ್ಲಿ ಆಟೋ ರಿಕ್ಷಾಗಳು, ದ್ವಿಚಕ್ರ ವಾಹನಗಳು ಸಾಗಲು ಸಾಧ್ಯವಾಗದೆ ನಿಂತುಬಿಟ್ಟಿದ್ದವು. ಕೋರ್ಟ್ ರೋಡಿನಲ್ಲಿ ತಗ್ಗಿನ ಪ್ರದೇಶದಲ್ಲಿದ್ದ ಜುವೆಲ್ಲರಿ ಅಂಗಡಿಗೆ ನೀರು ನುಗ್ಗಿದ್ದು ಮೊಣಕಾಲು ಮುಳುಗುವಷ್ಟು ಮಳೆ ನೀರು ಶೇಖರಗೊಂಡಿತ್ತು.




ಕೋರ್ಟ್ ರೋಡ್, ಮಹಾಲಿಂಗೇಶ್ವರ ದೇವಸ್ಥಾನ ಆಸುಪಾಸಿನಲ್ಲಿ ತಗ್ಗಿನ ಜಾಗದ ಹಲವಾರು ಅಂಗಡಿಗಳಿಗೆ ನೀರು ನುಗ್ಗಿದೆ. ದೇವಸ್ಥಾನ ಪರಿಸರದಲ್ಲಿ ಜನರ ಸಂಚಾರಕ್ಕೆ ತೊಡಕಾಗಿದೆ. ಆದರೆ ಅರ್ಧ ಗಂಟೆಯ ಮಳೆಯ ಬಳಿಕ ಮಳೆಯೇ ಬಂದಿಲ್ಲವೇನೋ ಎನ್ನುವಂತೆ ಹಠಾತ್ ನಿಂತುಬಿಟ್ಟಿದೆ. ಪುತ್ತೂರು ಆಸುಪಾಸಿನಲ್ಲಿ ಅಷ್ಟು ಮಳೆಯಾಗಿಲ್ಲ. ಒಂದೇ ಕಡೆ ಮಳೆಯಾಗಿರುವುದು ಭಾರೀ ವಿಶೇಷ ಅಂತ ಜನರು ಮಾತನಾಡಿಕೊಳ್ಳುತ್ತಿದ್ದಾರೆ.
ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಡೀ ದಿನ ಮೋಡ ಕವಿದ ವಾತಾವರಣ ಇತ್ತು. ಸಂಜೆಯ ಹೊತ್ತಿಗೆ ಕಪ್ಪಗಿನ ಮೋಡ ಆವರಿಸಿದ್ದರಿಂದ ಭಾರೀ ಮಳೆಯಾಗುತ್ತೆ ಅನ್ನುವ ಸುಳಿವು ನೀಡಿತ್ತು. ಆದರೆ ಮಂಗಳೂರಿನಲ್ಲಿ ಹನಿ ಹನಿ ಸುರಿದಿದ್ದು ನೆಲ ಒದ್ದೆಯಾಗುವಷ್ಟು ಮಾತ್ರ ಮಳೆಯಾಗಿದೆ.
Heavy rains in Puttur causes havoc, water enters shops, most of the shops were filled with shops causing huge damage to many business people.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm