ಬ್ರೇಕಿಂಗ್ ನ್ಯೂಸ್
05-06-24 06:12 pm Udupi Correspondent ಕರಾವಳಿ
ಉಡುಪಿ, ಜೂನ್ 5: ಲೋಕಸಭಾ ಫಲಿತಾಂಶದಲ್ಲಿ ಸೋಲಾದ ಬೆನಲ್ಲೇ ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋ ಬ್ಯಾಕ್ ಅಭಿಯಾನ ನಡೆಸಿದ್ದಾರೆ.
ಜಾಲತಾಣದಲ್ಲಿ ʼಗೋ ಬ್ಯಾಕ್ʼ ಅಭಿಯಾನ ಆರಂಭಿಸಿದ್ದು ಕರಾವಳಿಯಲ್ಲಿ ಕಾಂಗ್ರೆಸ್ ಸೋಲಿಗೆ ಜಿಲ್ಲಾ ಉಸ್ತುವಾರಿ ಸಚಿವರು ಕಾರಣ ಎಂದು ಗರಂ ಆಗಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಕಾರ್ಯಕರ್ತರು ಗರಂ ಆಗಿದ್ದು ಸಮಸ್ಯೆ ಆದಾಗ ನೀವು ಬರೋದೆ ಇಲ್ಲ. ಉಡುಪಿ ಜಿಲ್ಲೆಗೆ ನಿಮ್ಮ ಕೊಡುಗೆ ಏನೂ ಇಲ್ಲ. ಜಿಲ್ಲಾ ಕಾಂಗ್ರೆಸ್ ನಾಯಕರು ಬಿಜೆಪಿ ಜೊತೆಗೆ ಒಳಗಿಂದೊಳಗೆ ಒಳ ಒಪ್ಪಂದ ಮಾಡಿದ್ದಾರೆ. ಕಾರ್ಯಕರ್ತರು ಮಾತ್ರ ಹಗಲು ರಾತ್ರಿ ಕೆಲಸ ಮಾಡುತ್ತಿರಬೇಕು ಎಂದು ಬರೆದುಕೊಂಡಿದ್ದಾರೆ.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರನ್ನ ಬದಲಿಸುವಂತೆ ಕಾರ್ಯಕರ್ತರು ಒತ್ತಾಯಿಸಿದ್ದು ಲಕ್ಷ್ಮೀ ಹೆಬ್ಬಾಳ್ಕರ್ ಕಾರ್ಯವೈಖರಿ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಾಲತಾಣದಲ್ಲಿ ಕೈ ಕಾರ್ಯಕರ್ತರ ಗೋ ಬ್ಯಾಕ್ ಪೋಸ್ಟರ್ ವೈರಲ್ ಆಗಿದೆ.
ಎರಡು ಬಾರಿ ವಿಧಾನಸಭೆ ಚುನಾವಣೆಯಲ್ಲಿ ಐದಕ್ಕೆ ಐದು ಸ್ಥಾನದಲ್ಲೂ ಸೋಲಾಗಿದೆ. ಎರಡು ಲೋಕಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದೇವೆ. ನಗರಸಭೆ, ಪುರಸಭೆ ಚುನಾವಣೆಯಲ್ಲಿ ಹೀನಾಯ ಸೋಲಾಗಿದೆ. ಇದಕ್ಕೆಲ್ಲ ಕಾಂಗ್ರೆಸ್ ನಾಯಕರ ನಿರ್ಲಕ್ಷ್ಯವೇ ಕಾರಣವೆಂದು ಆಕ್ರೋಶ ಹೊರಹಾಕಿದ್ದಾರೆ.
Go back camping starts against Laxmi Hebbalkar, says she’s the reason for congress defeat in lok sabha elections in Udupi. Social media post against Laxmi Hebbalkar has gone viral on social media.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm