ಬ್ರೇಕಿಂಗ್ ನ್ಯೂಸ್
06-06-24 05:03 pm Mangalore Correspondent ಕರಾವಳಿ
ಮಂಗಳೂರು, ಜೂನ್.6: ವಿಧಾನ ಪರಿಷತ್ತಿನ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಎರಡನೇ ಸುತ್ತಿನ ಮುಕ್ತಾಯದ ವೇಳೆಗೆ ಜೆಡಿಎಸ್ನ ಎಸ್.ಎಲ್. ಭೋಜೇಗೌಡ 3,069 ಮತಗಳಿಂದ ಮುನ್ನಡೆ ಗಳಿಸಿದ್ದಾರೆ. ಆಮೂಲಕ ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಭೋಜೇಗೌಡ ಗೆಲ್ಲುವುದು ಖಚಿತವಾಗಿದೆ.
ಮೈಸೂರು ವಿಭಾಗೀಯ ಕಚೇರಿಯಲ್ಲಿ ಮತ ಎಣಿಕೆ ನಡೆಯುತ್ತಿದ್ದು ಎರಡು ಸುತ್ತಿನ ಮತ ಎಣಿಕೆಯ ಮುಕ್ತಾಯದಲ್ಲಿ ಮೈತ್ರಿ ಅಭ್ಯರ್ಥಿ ಭೋಜೇಗೌಡ 6,645 ಮತಗಳನ್ನು ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥ್ ಕುಮಾರ್ 3,576 ಮತಗಳನ್ನು ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿ, ಮಂಗಳೂರಿನ ಹರೀಶ್ ಆಚಾರ್ಯ 1,681 ಮತಗಳನ್ನು ಗಳಿಸಿದ್ದಾರೆ.
ಈವರೆಗೆ ಒಟ್ಟು 14,000 ಮತಗಳನ್ನು ಎಣಿಕೆ ಮಾಡಲಾಗಿದ್ದು, ಅದರಲ್ಲಿ 560 ಮತಗಳು ತಿರಸ್ಕೃತಗೊಂಡಿವೆ ಎಂದು ಚುನಾವಣಾಧಿಕಾರಿ ಜಿ.ಸಿ. ಪ್ರಕಾಶ್ ತಿಳಿಸಿದ್ದಾರೆ.
ಐದು ಜಿಲ್ಲೆಗಳ ವ್ಯಾಪ್ತಿಯಲ್ಲಿ ಒಟ್ಟು 23402 ಮತದಾರರಿದ್ದು ಈ ಪೈಕಿ 19320 ಮತದಾರರು ಮತ ಚಲಾವಣೆ ಮಾಡಿದ್ದರು. ಒಟ್ಟಾರೆಯಾಗಿ 82.56% ರಷ್ಟು ಮತದಾನ ದಾಖಲಾಗಿತ್ತು. ಎರಡು ಸುತ್ತಿನಲ್ಲಿ ಭೋಜೇಗೌಡ ಅತಿ ಹೆಚ್ಚು ಮತ ಗಳಿಸಿರುವುದರಿಂದ ಬಹುತೇಕ ಅವರೇ ಗೆಲುವು ದಾಖಲಿಸಲಿದ್ದಾರೆ. ಯಾವುದೇ ಅಭ್ಯರ್ಥಿ ನಿಕಟ ಸ್ಪರ್ಧೆ ಒಡ್ಡಿದಲ್ಲಿ ಮಾತ್ರ ಎರಡನೇ ಪ್ರಾಶಸ್ತ್ಯದ ಮತಗಳು ಗಣನೆಗೆ ಬರುತ್ತದೆ. ಆಡಳಿತಾರೂಢ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಪೈಪೋಟಿ ನೀಡುವಷ್ಟು ಮತ ಪಡೆಯುವುದಕ್ಕೂ ವಿಫಲರಾಗಿದ್ದಾರೆ.
ಪದವೀಧರ ಕ್ಷೇತ್ರದ ಮತ ಎಣಿಕೆ ಮಧ್ಯಾಹ್ನ 3 ಗಂಟೆಯ ನಂತರ ನಡೆದಿದ್ದು ಹೀಗಾಗಿ ಫಲಿತಾಂಶ ಬರುವಾಗಲೂ ವಿಳಂಬವಾಗುವ ಸಾಧ್ಯತೆಯಿದೆ. ನೈರುತ್ಯ ವಿಧಾನ ಪರಿಷತ್ ಕ್ಷೇತ್ರ ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಕೊಡಗು, ಶಿವಮೊಗ್ಗ, ಉಡುಪಿ ಮತ್ತು ದಾವಣಗೆರೆ ಜಿಲ್ಲೆಯ ಎರಡು ತಾಲೂಕುಗಳನ್ನು ಒಳಗೊಂಡಿದೆ. ನೈಋತ್ಯ ಪದವೀಧರ ಕ್ಷೇತ್ರದ ಮತದಾರರ ಸಂಖ್ಯೆ 85089 ಮತದಾರರಿದ್ದು ಈ ಪೈಕಿ 66529 ಮಂದಿ ಮತ ಚಲಾವಣೆ ಮಾಡಿದ್ದರು. ಒಟ್ಟು 78.19% ರಷ್ಟು ಮತದಾನ ಆಗಿತ್ತು. 10 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದು ಬಿಜೆಪಿಯ ಡಾ. ಧನಂಜಯ ಸರ್ಜಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ನಡುವೆ ನೇರ ಸ್ಪರ್ಧೆ ಇದೆ. ಬಿಜೆಪಿ ಟಿಕೆಟ್ ಸಿಗದ ಕಾರಣ ಮಾಜಿ ಶಾಸಕ ರಘುಪತಿ ಭಟ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರಿಂದ ಫಲಿತಾಂಶ ತೀವ್ರ ಕುತೂಹಲ ಕೆರಳಿಸಿದೆ.
Karnataka vidhan parishad election, Bhojegowda leading with majority votes.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm