ಬ್ರೇಕಿಂಗ್ ನ್ಯೂಸ್
04-12-20 11:05 pm Mangaluru Correspondent ಕರಾವಳಿ
ಮಂಗಳೂರು, ಡಿ. 4: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ , ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಕೆ.ಕೃಷ್ಣಪ್ಪ ಮೆಂಡನ್ (88) ಶುಕ್ರವಾರ ಮುಂಜಾನೆ ಅಳಪೆ ಸ್ವಗೃಹದಲ್ಲಿ ನಿಧನ ಹೊಂದಿದರು.
ಅವರು ನಗರ ಪಾಲಿಕೆ ಕಂಕನಾಡಿ ಅಳಪೆ ವಾರ್ಡ್ ನಿಂದ ನಾಲ್ಕು ಬಾರಿ ಕಾರ್ಪೊರೇಟರ್ ಆಗಿ ಆಯ್ಕೆಯಾಗಿದ್ದು, ಮೇಯರ್ ಆಗಿ, ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ವೇಳೆ ಸಜ್ಜನ ರಾಜಕಾರಣಿಯೆಂದೇ ಗುರುತಿಸಲ್ಪಟ್ಟಿದ್ದರು.
ಅತ್ತಾವರ ಶ್ರೀ ವಿಷ್ಣುಮೂರ್ತಿ ಉಮಾಮಹೇಶ್ವರ ದೇವಸ್ಥಾನದ ಮೊಕ್ತೇಶ್ವರರಾಗಿದ್ದರು. ಅಳಪೆ ಕರ್ಮಾರ್ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿ, ಕರಾವಳಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಕಂಕನಾಡಿ ಯುವಕ ವೃಂದದ ಸ್ಥಾಪಕ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು. ದ.ಕ. ಜಿಲ್ಲಾ ಗಾಣಿಗ ಸಂಘದ ಅಧ್ಯಕ್ಷರಾಗಿ ಸಾಮಾಜಿಕ ಮುಖಂಡರಾಗಿದ್ದರು. ಅವರು ಪತ್ನಿ, ಇಬ್ಬರು ಪುತ್ರಿಯರನ್ನು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
ಶಾಸಕ ಯು.ಟಿ.ಖಾದರ್, ಐವನ್ ಡಿಸೋಜ, ಮಾಜಿ ಶಾಸಕ ಮೊಯಿದೀನ್ ಬಾವ ಅಂತಿಮ ನಮನ ಸಲ್ಲಿಸಿದರು.
ಮಾಜಿ ಮೇಯರ್ ಗಳಾದ ಶಶಿಧರ ಹೆಗ್ಡೆ, ಹಿಲ್ಡಾ ಆಳ್ವ, ಭಾಸ್ಕರ್ ಮೊಯ್ಲಿ, ಜೇಸಿಂತ ಆಲ್ಫ್ರೆಡ್, ಮಂಗಳೂರು ನಗರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ವಿಶ್ವಾಸ್ ಕುಮಾರ್ ದಾಸ್, ದಕ್ಷಿಣ ಬ್ಲಾಕ್ ಅಧ್ಯಕ್ಷರಾದ ಸಲೀಮ್, ಕಾರ್ಪೊರೇಟರ್ ಗಳಾದ ಪ್ರವೀಣ್ ಚಂದ್ರ ಆಳ್ವ, ಕೇಶವ ಮರೋಳಿ, ಅಶ್ರಫ್, ವಿರೋಧ ಪಕ್ಷದ ನಾಯಕ ಅಬ್ದುಲ್ ರಾವೂಫ್, ರೂಪಶ್ರೀ ಪೂಜಾರಿ, ಸಂದೀಪ್ ಗರೋಡಿ ಮಾಜಿ ಕಾರ್ಪೊರೇಟರ್ ಗಳಾದ ಪದ್ಮನಾಭ ಅಮೀನ್, ಆಶಾ ಡಿಸಿಲ್ವ, ಪ್ರಕಾಶ್ ಪಡೀಲ್ ಮತ್ತು ಟಿ.ಕೆ. ಸುಧೀರ್, ಡೆನ್ನಿಸ್ ಡಿಸಿಲ್ವಾ ಮತ್ತಿತರರು ಅಂತಿಮ ದರ್ಶನ ಪಡೆದರು.
The former Mayor K. Krishnappa Mendon died here on Friday. He was 88 and is survived by his wife and two daughters.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am