ಬ್ರೇಕಿಂಗ್ ನ್ಯೂಸ್
04-12-20 11:05 pm Mangaluru Correspondent ಕರಾವಳಿ
ಮಂಗಳೂರು, ಡಿ. 4: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ , ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಕೆ.ಕೃಷ್ಣಪ್ಪ ಮೆಂಡನ್ (88) ಶುಕ್ರವಾರ ಮುಂಜಾನೆ ಅಳಪೆ ಸ್ವಗೃಹದಲ್ಲಿ ನಿಧನ ಹೊಂದಿದರು.
ಅವರು ನಗರ ಪಾಲಿಕೆ ಕಂಕನಾಡಿ ಅಳಪೆ ವಾರ್ಡ್ ನಿಂದ ನಾಲ್ಕು ಬಾರಿ ಕಾರ್ಪೊರೇಟರ್ ಆಗಿ ಆಯ್ಕೆಯಾಗಿದ್ದು, ಮೇಯರ್ ಆಗಿ, ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ವೇಳೆ ಸಜ್ಜನ ರಾಜಕಾರಣಿಯೆಂದೇ ಗುರುತಿಸಲ್ಪಟ್ಟಿದ್ದರು.
ಅತ್ತಾವರ ಶ್ರೀ ವಿಷ್ಣುಮೂರ್ತಿ ಉಮಾಮಹೇಶ್ವರ ದೇವಸ್ಥಾನದ ಮೊಕ್ತೇಶ್ವರರಾಗಿದ್ದರು. ಅಳಪೆ ಕರ್ಮಾರ್ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿ, ಕರಾವಳಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಕಂಕನಾಡಿ ಯುವಕ ವೃಂದದ ಸ್ಥಾಪಕ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು. ದ.ಕ. ಜಿಲ್ಲಾ ಗಾಣಿಗ ಸಂಘದ ಅಧ್ಯಕ್ಷರಾಗಿ ಸಾಮಾಜಿಕ ಮುಖಂಡರಾಗಿದ್ದರು. ಅವರು ಪತ್ನಿ, ಇಬ್ಬರು ಪುತ್ರಿಯರನ್ನು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
ಶಾಸಕ ಯು.ಟಿ.ಖಾದರ್, ಐವನ್ ಡಿಸೋಜ, ಮಾಜಿ ಶಾಸಕ ಮೊಯಿದೀನ್ ಬಾವ ಅಂತಿಮ ನಮನ ಸಲ್ಲಿಸಿದರು.
ಮಾಜಿ ಮೇಯರ್ ಗಳಾದ ಶಶಿಧರ ಹೆಗ್ಡೆ, ಹಿಲ್ಡಾ ಆಳ್ವ, ಭಾಸ್ಕರ್ ಮೊಯ್ಲಿ, ಜೇಸಿಂತ ಆಲ್ಫ್ರೆಡ್, ಮಂಗಳೂರು ನಗರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ವಿಶ್ವಾಸ್ ಕುಮಾರ್ ದಾಸ್, ದಕ್ಷಿಣ ಬ್ಲಾಕ್ ಅಧ್ಯಕ್ಷರಾದ ಸಲೀಮ್, ಕಾರ್ಪೊರೇಟರ್ ಗಳಾದ ಪ್ರವೀಣ್ ಚಂದ್ರ ಆಳ್ವ, ಕೇಶವ ಮರೋಳಿ, ಅಶ್ರಫ್, ವಿರೋಧ ಪಕ್ಷದ ನಾಯಕ ಅಬ್ದುಲ್ ರಾವೂಫ್, ರೂಪಶ್ರೀ ಪೂಜಾರಿ, ಸಂದೀಪ್ ಗರೋಡಿ ಮಾಜಿ ಕಾರ್ಪೊರೇಟರ್ ಗಳಾದ ಪದ್ಮನಾಭ ಅಮೀನ್, ಆಶಾ ಡಿಸಿಲ್ವ, ಪ್ರಕಾಶ್ ಪಡೀಲ್ ಮತ್ತು ಟಿ.ಕೆ. ಸುಧೀರ್, ಡೆನ್ನಿಸ್ ಡಿಸಿಲ್ವಾ ಮತ್ತಿತರರು ಅಂತಿಮ ದರ್ಶನ ಪಡೆದರು.
The former Mayor K. Krishnappa Mendon died here on Friday. He was 88 and is survived by his wife and two daughters.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am