ಬ್ರೇಕಿಂಗ್ ನ್ಯೂಸ್
09-06-24 09:16 pm Mangalore Correspondent ಕರಾವಳಿ
ಮಂಗಳೂರು, ಜೂನ್: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ್ದು, ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಹಿಮಾಚಲ ಪ್ರದೇಶ ಮೂಲದ ಜೆಪಿ ನಡ್ಡಾ 2019ರ ಜೂನ್ 19ರಂದು ಬಿಜೆಪಿ ಅಧ್ಯಕ್ಷರಾಗಿದ್ದರು. ಅಮಿತ್ ಷಾ ಬಳಿಕ ಪಕ್ಷದ ಚುಕ್ಕಾಣಿ ಹಿಡಿದಿದ್ದ ಅವರು ರಾಷ್ಟ್ರೀಯ ನೆಲೆಯಲ್ಲಿ ಆಕರ್ಷಣೆ ಮೂಡಿಸಿದ್ದರು. 2014ರಲ್ಲಿ ಮೋದಿ ಸರಕಾರದಲ್ಲಿ ಆರೋಗ್ಯ ಸಚಿವರಾಗಿ ನಡ್ಡಾ ಕರ್ತವ್ಯ ನಿರ್ವಹಿಸಿದ್ದರು.
ಈ ಬಾರಿ ಮೋದಿ ಸಂಪುಟದಲ್ಲಿ ಹಿಮಾಚಲ ಪ್ರದೇಶದ ಅನುರಾಗ್ ಠಾಕೂರ್ ಅವರಿಗೆ ಅವಕಾಶ ನೀಡಲಾಗಿಲ್ಲ. ಅವರ ಬದಲಿಗೆ, ಜೆಪಿ ನಡ್ಡಾಗೆ ಅವಕಾಶ ನೀಡಿದ್ದು, ಅನುರಾಗ್ ಅವರಿಗೆ ಪಕ್ಷದಲ್ಲಿ ಉನ್ನತ ಹುದ್ದೆ ನೀಡುವ ಸಾಧ್ಯತೆಯಿದೆ. ಜೆಪಿ ನಡ್ಡಾ ಅವಧಿ ಇದೇ ಜೂನ್ ತಿಂಗಳಿಗೆ ಅಂತ್ಯಗೊಳ್ಳುವುದರಿಂದ ಹೊಸ ಅಧ್ಯಕ್ಷರ ಆಯ್ಕೆ ಬಗ್ಗೆ ಮಾತು ಕೇಳಿಬಂದಿತ್ತು. ಅದಕ್ಕೂ ಮೊದಲೇ ಪಕ್ಷದ ಹುದ್ದೆಗೆ ರಾಜಿನಾಮೆ ಕೊಟ್ಟು ಕೇಂದ್ರ ಸಚಿವರಾಗಿ ಪ್ರಮಾಣ ಸ್ವೀಕಾರ ಮಾಡಿದ್ದಾರೆ.
ಜೆಪಿ ನಡ್ಡಾ ಸ್ಥಾನ ತೆರವಾಗಿದ್ದರಿಂದ ಬಿಜೆಪಿ ಅಧ್ಯಕ್ಷ ಯಾರಾಗುತ್ತಾರೆ ಎಂಬ ಬಗ್ಗೆ ಚರ್ಚೆ ಎದ್ದಿದೆ. ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಈ ಬಾರಿ ಸಂಸದರಾಗಿ ವಿದಿಶಾ ಕ್ಷೇತ್ರದಿಂದ ಆಯ್ಕೆಯಾಗಿದ್ದು, ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೇರಲಿದ್ದಾರೆ ಎನ್ನಲಾಗಿತ್ತು. ಆದರೆ, ಈ ಬಾರಿ ಕೇಂದ್ರ ಸಚಿವರಾಗಿ ಚೌಹಾಣ್ ಕೂಡ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
BJP chief JP Nadda is back in Prime Minister Narendra Modi's cabinet, which has taken charge for a historic third term. Along with PM Modi, seventy-one ministers took oath at the Rashtrapati Bhavan today.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm