ಬ್ರೇಕಿಂಗ್ ನ್ಯೂಸ್
10-06-24 03:57 pm Mangalore Correspondent ಕರಾವಳಿ
ಮಂಗಳೂರು, ಜೂನ್ 10: ಮಂಗಳೂರು- ಬೆಂಗಳೂರು ಸಂಪರ್ಕದ ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ರಸ್ತೆ ಹಾಳಾಗಿರುವ ಬಗ್ಗೆ ಹೆದ್ದಾರಿ ಅಧಿಕಾರಿಗಳ ಜೊತೆಗಿನ ರಿವೀವ್ ಮೀಟಿಂಗಲ್ಲಿ ಕ್ಲಾಸ್ ತೆಗೆದುಕೊಂಡಿದ್ದೇನೆ. 2-3 ದಿನದಲ್ಲಿ ರಸ್ತೆಯನ್ನು ಸಂಚಾರ ಯೋಗ್ಯ ಮಾಡಬೇಕೆಂದು ಸೂಚನೆ ನೀಡಿದ್ದೇನೆ. ಮತ್ತೆ ರಸ್ತೆ ಹಾಳಾದರೆ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಆಗದಂತೆ ನೋಡಿಕೊಳ್ಳಬೇಕೆಂದು ತಿಳಿಸಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಕಲ್ಲಡ್ಕ ರಸ್ತೆ ಹದಗೆಟ್ಟ ಬಗ್ಗೆ ಪ್ರಶ್ನೆ ಎತ್ತಿದಾಗ, ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ. ಪುಂಜಾಲಕಟ್ಟೆ- ಚಾರ್ಮಾಡಿ ಹೆದ್ದಾರಿಯಲ್ಲೂ ಕಾಮಗಾರಿ ಆಗ್ತಾ ಇದೆ. ರಸ್ತೆ ಅಗೆದು ಹಾಕಿರುವಲ್ಲಿ ಅಪಘಾತ ಆಗದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.


ಪುತ್ತೂರು ಸುಬ್ರಹ್ಮಣ್ಯ ಭಾಗದಲ್ಲಿ ಸಿಡಿಲು ಬಡಿದು ಆರೇಳು ಮಂದಿ ಸಾವು ಆಗಿದೆ. ಈ ಬಗ್ಗೆ ಗಂಭೀರ ಪರಿಗಣಿಸಲಾಗಿದ್ದು ನಾಲ್ಕರಿಂದ ಆರು ಕಡೆ ಸಿಡಿಲು ನಿರೋಧಕ ಅಳವಡಿಸಲು ನಿರ್ಧರಿಸಿದ್ದೇವೆ, ಒಂದು ಕಡೆ ಹಾಕಿದರೆ ಐನೂರು ಮೀಟರ್ ನಿಂದ ಒಂದೂವರೆ ಕಿಮೀ ವರೆಗೆ ಅದರ ವ್ಯಾಪ್ತಿ ಇರತ್ತೆ. ಸಿಡಿಲಿನ ಶಾಕ್ ಆಗುವುದನ್ನು ತಡೆಯುತ್ತದೆ. ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಲು ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು. ಸುಬ್ರಹ್ಮಣ್ಯ ದೇವಸ್ಥಾನದಿಂದ ಈಗಾಗಲೇ 2-3 ಕಡೆ ಸಿಡಿಲು ನಿರೋಧಕ ಹಾಕಿದ್ದಾರೆ. ಅದನ್ನು ನೋಡಿಕೊಂಡು ಕ್ರಮ ವಹಿಸಲಾಗುವುದು ಎಂದು ಹೇಳಿದರು.
ಕಡಲ್ಕೊರೆತ ಸಮಸ್ಯೆ ಕುರಿತ ಪ್ರಶ್ನೆಗೆ, ಉಳ್ಳಾಲದ ಬಟ್ಟಪ್ಪಾಡಿ ಪ್ರದೇಶದಲ್ಲಿ ಬಂದರು ಇಲಾಖೆಯಿಂದ ಮರವಂತೆ ಮಾದರಿಯಲ್ಲಿ ಕಾಮಗಾರಿ ಮಾಡಲು 80 ಕೋಟಿ ಪ್ರಸ್ತಾವನೆ ಕೊಟ್ಟಿದ್ದಾರೆ. ಅದರ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದರು.
ಕೆಂಪು ಮಣ್ಣು ಸಾಗಾಟದ ಬಗ್ಗೆ ದೂರು ಬಂದಿದೆ. ಈ ಬಗ್ಗೆ ಕಟ್ಟುನಿಟ್ಟಿನ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಲೋಪ ಆದರೆ ಅಧಿಕಾರಿಗಳೇ ಹೊಣೆಯಾಗಬೇಕಾಗುತ್ತದೆ. ಮರಳುಗಾರಿಕೆ ವಿಚಾರದಲ್ಲಿ ಸಿಆರ್ ಝೆಡ್ ದುರುಪಯೋಗ ಆಗ್ತಾ ಇದೆ. ಜಿಲ್ಲಾಡಳಿತ ನಿಗಾ ವಹಿಸಬೇಕು, ಸಿಸಿಟಿವಿ ಇದ್ರೂ ಅಕ್ರಮ ಮರಳುಗಾರಿಕೆ ಆಗತ್ತೆ ಅಂದ್ರೆ ಆಡಳಿತದ ವೈಫಲ್ಯ ಅಂತ ಹೇಳಬೇಕಾಗುತ್ತದೆ ಎಂದರು. ಪುತ್ತೂರು ಶಾಸಕ ಅಶೋಕ ರೈ, ವಿನಯರಾಜ್ ಮತ್ತಿತರರು ಇದ್ದರು.
Mangalore kalladka highway to be made proper in few days says Dinesh Gundu Rao in Mangalore during the review meeting held at DC office. Measures are taken to avoid accident at Dharmasthala Charmadi roads he added.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm