ಬ್ರೇಕಿಂಗ್ ನ್ಯೂಸ್
12-06-24 10:55 pm Mangalore Correspondent ಕರಾವಳಿ
ಮಂಗಳೂರು, ಜೂನ್ 12: ಕರಾವಳಿಯ ಮಸೀದಿಗಳಲ್ಲಿ ಶಸ್ತ್ರಾಸ್ತ್ರ ಇಟ್ಟುಕೊಂಡು ಮತಾಂಧ ಕೆಲಸ ಮಾಡುತ್ತಿದ್ದಾರೆ ಅಂತ ನಾವು ಹಿಂದಿನಿಂದಲೂ ಹೇಳಿಕೊಂಡು ಬಂದಿದ್ದೇವೆ. ಈಗಲೂ ಹೇಳುತ್ತೇವೆ. ಎಲ್ಲ ಮಸೀದಿಗಳನ್ನು ತಪಾಸಣೆ ನಡೆಸಿದರೆ, ಒಳಗೇನು ಇಟ್ಕೊಂಡಿದ್ದಾರೆ ಅಂತ ಹೊರಬರುತ್ತದೆ. ಮಸೀದಿ ಎದುರಲ್ಲಿ ಮೆರವಣಿಗೆ ಹೋದ ಮಾತ್ರಕ್ಕೆ ಚೂರಿ ಇರಿಯುತ್ತಾರಂದ್ರೆ, ಇವರು ಒಳಗೆ ಶಸ್ತ್ರಾಸ್ತ್ರ ಇಟ್ಕೊಂಡಿರ್ತಾರೆ ಅಂತ ಅರ್ಥ ಅಲ್ಲವೇ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರಶ್ನಿಸಿದ್ದಾರೆ.
ಬೋಳಿಯಾರು ಚೂರಿ ಇರಿತಕ್ಕೊಳಗಾದ ಬಿಜೆಪಿ ಕಾರ್ಯಕರ್ತರನ್ನು ಭೇಟಿಯಾಗಿ ಮಾಧ್ಯಮಕ್ಕೆ ಹೇಳಿಕೆ ನೀಡಿದ ಹರೀಶ್ ಪೂಂಜ, ಕಳೆದ ಬಾರಿ ಸಿದ್ದರಾಮಯ್ಯ ಸರಕಾರ ಇದ್ದಾಗ 24 ಹಿಂದುಗಳ ಹತ್ಯೆಯಾಗಿತ್ತು. ಈ ಬಾರಿ ಸಿದ್ದರಾಮಯ್ಯ ಎಷ್ಟು ಹತ್ಯೆ ಮಾಡಲು ಹೊರಟಿದ್ದಾರೆ ಅಂತ ಚಿಂತೆಯಾಗುತ್ತದೆ. ಈಗಲೇ ಅಶಾಂತಿ ಮೂಡಿದೆ, ಕೋಮು ಶಕ್ತಿಗಳು ಕಾನೂನು ಕೈಗೆ ತೆಗೆದುಕೊಂಡಿರುವುದು ಕಾಣುತ್ತದೆ.
ಬೋಳಿಯಾರಿನಲ್ಲಿ ಹತ್ಯೆಗೆ ಯತ್ನಿಸಿದವರೆಲ್ಲ ಇಲ್ಲಿನ ಶಾಸಕ ಯುಟಿ ಖಾದರ್ ಅವರ ಆಪ್ತ ವಲಯದಲ್ಲಿದ್ದವರು. ಅಲ್ಲ ಹೇಳಲಿ ನೋಡೋಣ ಖಾದರ್. ಉಸ್ತುವಾರಿ ಸಚಿವರು ಆಸ್ಪತ್ರೆಗೆ ಬಂದಾಗ ಕ್ಷೇತ್ರದ ಶಾಸಕರಾಗಿ ಅವರನ್ನು ತನ್ನ ಕ್ಷೇತ್ರದಲ್ಲಿ ಇರಿತಕ್ಕೊಳಗಾದ ಯುವಕರ ಬಳಿಗೊಯ್ದು ತೋರಿಸುವುದು ಜವಾಬ್ದಾರಿ ಅಲ್ಲವೇ. ಯಾಕೆ ಇವರಿಗೆ ಮುಸ್ಲಿಮರ ಭಯವೇ, ನೀವು ಮುಸ್ಲಿಮರಿಗೆ ಮಾತ್ರ ಶಾಸಕನಾ. ನೀವು ಯಾರ ಪರ ವಹಿಸ್ತೀರಿ ಎಂದು ಸ್ಪಷ್ಟನೆ ನೀಡಬೇಕು ಎಂದು ಖಾದರ್ ಅವರಿಗೆ ಆಗ್ರಹ ಮಾಡಿದ್ದಾರೆ.
ನೀವು ಭಾರತ್ ಮಾತಾಕೀ ಜೈ ಎಂದರೆ ಕೇಸು ಹಾಕುತ್ತೀರಿ ಎಂದಾದರೆ, ನಾವು ಯಾವ ದೇಶದಲ್ಲಿದ್ದೇವೆ ಎಂದು ಕೇಳಬೇಕಾಗುತ್ತದೆ. ನಮ್ಮ ದೇಶಕ್ಕೆ ಜೈಕಾರ ಹಾಕದೆ ಯಾರಿಗೆ ಹಾಕಬೇಕು ಸ್ವಾಮಿ. ಯುಟಿ ಖಾದರ್, ಜಿಲ್ಲಾಧಿಕಾರಿ ಅವರಿಗೆ ಆಗ್ರಹ ಮಾಡುತ್ತೀನಿ, ಕೂಡಲೇ ನೀವು ಹಾಕಿರುವ ಕೇಸನ್ನು ಹಿಂಪಡೆಯಬೇಕು, ಕೂಲಿ ಕೆಲಸ ಮಾಡುವವರು ಆಸ್ಪತ್ರೆಯಲ್ಲಿ ಮಲಗುವ ಸ್ಥಿತಿಯಾಗಿದೆ, ಆಸ್ಪತ್ರೆ ವೆಚ್ಚವನ್ನು ಭರಿಸಲು ಜಿಲ್ಲಾಧಿಕಾರಿ ವ್ಯವಸ್ಥೆ ಮಾಡಬೇಕು. ದನ ಕಳ್ಳತನ ಮಾಡಿದವರಿಗೆ ಪರಿಹಾರ ಮಾಡ್ತೀರಾದ್ರೆ ಚೂರಿ ಇರಿತಕ್ಕೊಳಗಾದವರಿಗೂ ಪರಿಹಾರ ನೀಡಬೇಕು ಎಂದು ಆಗ್ರಹ ಮಾಡುತ್ತೇವೆ. ಈ ದೇಶಕ್ಕೆ ಬದ್ಧತೆ ಇಲ್ಲದವರ ಮೇಲೆ ಪಾಕಿಸ್ತಾನ ಕುನ್ನಿಗಳು ಅನ್ನೋದಲ್ಲದೆ ಬೇರೇನು ಹೇಳಬೇಕು. ಅಷ್ಟಕ್ಕೇ ನೀವು ಎಫ್ಐಆರ್ ಮಾಡ್ತೀರಂದ್ರೆ ಅದನ್ನು ನಾವು ಸಹಿಸಿಕೊಳ್ಳಲ್ಲ ಎಂದು ಹೇಳಿದರು.
Belthangady MLA Harish poonja makes controversy statement on Boliyar Stabbing case. Every mosques have kept weapons and trying to disturb communial harmony. Every mosque should be examined by police he slammed.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm