ಬ್ರೇಕಿಂಗ್ ನ್ಯೂಸ್
13-06-24 03:24 pm Mangalore Correspondent ಕರಾವಳಿ
ಉಳ್ಳಾಲ, ಜೂ.13: ಬೋಳಿಯಾರು ಚೂರಿ ಇರಿತ ಪ್ರಕರಣವು ಶಾಸಕ ಖಾದರ್ ಅವರನ್ನ ಹಣಿಯಲು ಜಂಟಿಯಾಗಿ ಬಲೆ ಹೆಣೆದ ಎರಡು ಪಕ್ಷಗಳ ನಡುವಿನ ಘಟನೆಯಾದರೂ ಕಾನೂನು ಪರ ಇರುವ ಶಾಸಕರೂ, ವಿದಾನಸಭೆಯ ಸ್ಪೀಕರ್ ಆಗಿರುವ ಯು.ಟಿ.ಖಾದರ್ ಅವರ ಮೇಲೆ ವಿನಾಕಾರಣ ಗೂಬೆ ಕೂರಿಸುವ ಕಾರ್ಯವನ್ನ ರಾಜ್ಯದಲ್ಲಿ ಅಧಿಕಾರವಿಲ್ಲದೆ ಹತಾಶರಾದ ಬಿಜೆಪಿ ಶಾಸಕರು ಮತ್ತು ಮುಖಂಡರು ನಡೆಸುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಅಭಿಷೇಕ್ ಉಳ್ಳಾಲ್ ಹೇಳಿದರು.
ತೊಕ್ಕೊಟ್ಟಿನ ಉಳ್ಳಾಲ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ವಿಧಾನಸಭೆ ಚುನಾವಣೆಯ ಸಂದರ್ಭ ಶಾಸಕರನ್ನು ಸೋಲಿಸಲು ಒಂದೇ ಮನೆಯವರಂತೆ ಜಂಟಿಯಾಗಿ ಬಲೆ ಹೆಣೆದವರೇ ಇಂದು ತಮ್ಮೊಳಗೆ ಕಿತ್ತಾಟ ನಡೆಸುತ್ತಾ ಇದ್ದಾರೆ. ಬಿಜೆಪಿಯವರು ಈಗ ಶಾಸಕ ಖಾದರ್ ವಿರುದ್ಧ ಇಲ್ಲ ಸಲ್ಲದ ಆರೋಪಗಳನ್ನು ಹೊರಿಸುತ್ತಿದ್ದಾರೆ. ಭಾರತ್ ಮಾತಾ ಕಿ ಜೈ ಘೋಷಣೆಯು ಪ್ರಚೋದನಕಾರಿ ಎಂದು ಯಾವತ್ತೂ ಕಾಂಗ್ರೆಸ್ ಹೇಳುವುದಿಲ್ಲ. ಬೋಳಿಯಾರಿನಲ್ಲಿ ನಡೆದಿರುವ ಘಟನೆಯ ನೈಜ ವಿಚಾರ, ಸತ್ಯಸಂಗತಿಯನ್ನು ಜನರಿಗೆ ಮುಟ್ಟಿಸುವ ಕಾರ್ಯವಾಗಬೇಕು. ಖಾದರ್ ಅವರು ಶಾಸಕರಲ್ಲದೆ ವಿಧಾನಸಭೆಯ ಸ್ಪೀಕರ್ ಆಗಿದ್ದಾರೆ. ರಾಜಕೀಯ ಪಕ್ಷಗಳ ವಿಚಾರದಲ್ಲಿ ತೊಡಗಿಸಲು ಬರುವುದಿಲ್ಲ. ಕಾನೂನು ವ್ಯಾಪ್ತಿಯ ಕೆಲಸ ಕಾರ್ಯಗಳನ್ನಷ್ಟೆ ಅವರು ಮಾಡಿದ್ದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಬಿಜೆಪಿಗರು ಬೋಳಿಯಾರಿನಲ್ಲಿ ಪೊಲೀಸ್ ಇಲಾಖೆಯ ಅನುಮತಿ ಪಡೆಯದೆ ವಿಜಯೋತ್ಸವ ಆಚರಿಸಿದ್ದಾರೆ. ವಿಜಯೋತ್ಸವ ವೇಳೆ ಕಾರ್ಯಕರ್ತರು ಹೇಗೆ ವರ್ತಿಸಬೇಕೆಂದು ಪಕ್ಷದ ಮುಖಂಡರು ತಿಳಿಸಬೇಕು. ಅದನ್ನು ಬಿಟ್ಟು ಕ್ಷೇತ್ರದ ಶಾಸಕರ ಮೇಲೆ ಗೂಬೆ ಕೂರಿಸುವುದು ಎಷ್ಟು ಸರಿ. ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಶಾಂತಿಯನ್ನು ಕೆಡಿಸಿದ ಇತಿಹಾಸವೇ ಇಲ್ಲ. ಯು.ಟಿ ಖಾದರ್ ಅವರಿಗೆ ವೈರಿಗಳಿದ್ದಾರೆ ಎಂದರೆ ಅವರು ಕಾನೂನಿಗೆ ವಿರುದ್ಧವಾಗಿ ಇರುವವರು ಎಂದರ್ಥ. ಬೋಳಿಯಾರು ಪ್ರಕರಣದಲ್ಲಿ ಸಿಸಿಟಿವಿ ಫೂಟೇಜ್ ಆಧಾರದಲ್ಲಿ ತನಿಖೆ ನಡೆಯುತ್ತಿದ್ದು, ಸತ್ಯಾಂಶ ಪೊಲೀಸ್ ಇಲಾಖೆ ಜನತೆ ಮುಂದೆ ತಂದಿದೆ. ಬಿಜೆಪಿ ನಾಯಕರ ಸಲಹೆಯ ಅಗತ್ಯವಿಲ್ಲ. ಭಾರತೀಯರನ್ನ ಪಾಕಿಸ್ತಾನದವ ಅಂದರೆ ಸುಮ್ಮನೆ ಯಾರೂ ಕೂರುವುದಿಲ್ಲ. ಇಡೀ ಘಟನೆಯನ್ನು ಶಾಸಕರ ತಲೆಗೆ ಕಟ್ಟಿಕೊಡುವುದು ಹಾಸ್ಯಾಸ್ಪದ ಎಂದರು.
ಈ ಸಂದರ್ಭ ಯೂತ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎಂ ರವೂಫ್, ಯುವ ಕಾಂಗ್ರೆಸ್ ಅಧ್ಯಕ್ಷ ಫಿರೋಝ್ ಮಲಾರ್ ಉಪಸ್ಥಿತರಿದ್ದರು.
Mangalore Boliyar Stabbing case, Congress spokesperson Abhishek slams BJP for misusing UT Khader name. He said why did the BJP members provoke the Muslims standing near the mosque, their provocation was the reason for stabbing he added.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm