ಬ್ರೇಕಿಂಗ್ ನ್ಯೂಸ್
13-06-24 10:33 pm Mangalore Correspondent ಕರಾವಳಿ
ಮಂಗಳೂರು, ಜೂನ್ 13: ಮಂಗಳೂರು ನಗರ ವ್ಯಾಪ್ತಿಯಲ್ಲಿ ಅಪಘಾತ ತಡೆಯುವ ನಿಟ್ಟಿನಲ್ಲಿ ವಾಹನಗಳ ವೇಗಕ್ಕೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಮುಂದಾಗಿದೆ. ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಆದೇಶದ ಅನುಸಾರ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಹೆದ್ದಾರಿ, ರಾಜ್ಯ ಹೆದ್ದಾರಿ, ನಗರಸಭೆ, ಪುರಸಭೆ, ಪಾಲಿಕೆ ವ್ಯಾಪ್ತಿಯ ರಸ್ತೆಗಳಲ್ಲಿ ನಿಗದಿಗಿಂತ ಹೆಚ್ಚಿನ ವೇಗದಲ್ಲಿ ವಾಹನ ಚಲಾಯಿಸಿದರೆ, ದಂಡ ವಿಧಿಸಲು ಮಂಗಳೂರು ಪೊಲೀಸ್ ಆಯುಕ್ತರು ನಿರ್ಧರಿಸಿದ್ದಾರೆ.
ಇದಕ್ಕಾಗಿ ಮಂಗಳೂರು ವ್ಯಾಪ್ತಿಯಲ್ಲಿ ವಾಹನಗಳ ಚಾಲನೆಗೆ ಸ್ಪೀಡ್ ಲಿಮಿಟ್ ನಿಗದಿ ಮಾಡಲಾಗಿದೆ. ಪ್ರಯಾಣಿಕರನ್ನು ಕರೆದೊಯ್ಯುವ 9 ಸೀಟಿಗಿಂತ ಕಡಿಮೆ ಸಾಮರ್ಥ್ಯದ ವಾಹನಗಳು ರಾಷ್ಟ್ರೀಯ ಹೆದ್ದಾರಿ ಅಥವಾ ರಸ್ತೆ ವಿಭಜಕ ಇರುವ ರಸ್ತೆಗಳಲ್ಲಿ ಗಂಟೆಗೆ ನೂರು ಕಿಮೀ, ಪಾಲಿಕೆ, ನಗರಸಭೆ, ಪುರಸಭೆ ವ್ಯಾಪ್ತಿಯ ರಸ್ತೆಗಳಲ್ಲಿ 70 ಕಿಮೀಗಿಂತ ಹೆಚ್ಚು ವೇಗದಲ್ಲಿ ಸಂಚರಿಸುವಂತಿಲ್ಲ. ಪ್ರಯಾಣಿಕರನ್ನು ಕರೆದೊಯ್ಯುವ 9 ಸೀಟಿಗಿಂತ ಹೆಚ್ಚು ಸೀಟನ್ನು ಹೊಂದಿರುವ ಎಲ್ಲ ಮಾದರಿಯ ಬಸ್, ಟ್ರಾವೆಲರ್ ಇನ್ನಿತರ ವಾಹನಗಳು ಹೆದ್ದಾರಿಗಳಲ್ಲಿ 90 ಕಿಮೀ, ಇತರ ಕಡೆಗಳಲ್ಲಿ ಗಂಟೆಗೆ 60 ಕಿಮೀ ಹೆಚ್ಚು ವೇಗದಲ್ಲಿ ಚಲಿಸುವಂತಿಲ್ಲ.
ಎಲ್ಲಾ ತರದ ಗೂಡ್ಸ್ ವಾಹನಗಳು ರಾಷ್ಟ್ರೀಯ ಹೆದ್ದಾರಿಗಳಲ್ಲಿ 80 ಕಿಮೀ, ಪಾಲಿಕೆ, ಪುರಸಭೆ ಇನ್ನಿತರ ಕಡೆಗಳಲ್ಲಿ 60 ಕಿಮೀ ಹೆಚ್ಚು ವೇಗದಲ್ಲಿ ಹೋಗುವಂತಿಲ್ಲ. ಮೋಟಾರ್ ಸೈಕಲ್ ಗಳು ಹೆದ್ದಾರಿಯಲ್ಲಿ 80 ಕಿಮೀ, ಇತರ ಕಡೆಗಳಲ್ಲಿ 60 ಕಿಮೀ ಹೆಚ್ಚು ವೇಗದಲ್ಲಿ ಹೋಗುವಂತಿಲ್ಲ. ತ್ರಿಚಕ್ರ ವಾಹನಗಳು ಹೆದ್ದಾರಿ, ರಾಜ್ಯ ಹೆದ್ದಾರಿ, ಪಾಲಿಕೆ, ನಗರಸಭೆ, ಪುರಸಭೆ ವ್ಯಾಪ್ತಿಯ ರಸ್ತೆಗಳಲ್ಲಿ ಗಂಟೆಗೆ 50 ಕಿಮೀ ಹೆಚ್ಚು ವೇಗದಲ್ಲಿ ಚಲಿಸುವಂತಿಲ್ಲ. ಈ ಮಿತಿಯನ್ನು ಉಲ್ಲಂಘಿಸಿದರೆ, ಮೊಬೈಲ್ ಸ್ಪೀಡ್ ರಾಡಾರ್ ಗನ್ ಮೂಲಕ ಸಂಚಾರಿ ಪೊಲೀಸರು ನಿಗಾ ವಹಿಸಲಿದ್ದು, ಅಂತಹ ವಾಹನಗಳ ಮೇಲೆ ದಂಡ ವಿಧಿಸಲಿದ್ದಾರೆ.
ಈ ಬಗ್ಗೆ ಹೆದ್ದಾರಿ ಇಲಾಖೆಯ ಅದಿಕಾರಿಗಳ ಜೊತೆಗೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಉಪ ಪೊಲೀಸ್ ಆಯುಕ್ತ ಬಿಪಿ ದಿನೇಶ್ ಕುಮಾರ್ ಸಭೆ ನಡೆಸಿದ್ದು, ಹೆದ್ದಾರಿ ಇನ್ನಿತರ ಕಡೆಗಳಲ್ಲಿ ವೇಗದ ಮಿತಿಯ ಸೂಚನಾ ಫಲಕಗಳನ್ನು ಹಾಕುವಂತೆ ಸೂಚನೆ ನೀಡಿದ್ದಾರೆ. ಸಭೆಯಲ್ಲಿ ಹೆದ್ದಾರಿ ಇಲಾಖೆಯ ಯೋಜನಾ ನಿರ್ದೇಶಕ ಜಾವೇದ್ ಅಬ್ದುಲ್ಲ ಅಜ್ಮಿ, ಅನಿರುದ್ಧ ಕಾಮತ್, ಪಿಡಬ್ಲ್ಯುಡಿ ಇಲಾಖೆಯ ಜೆಇ ಲಾಯಿಡ್ ಡಿಸಿಲ್ವ, ಮಂಗಳೂರು ಸ್ಮಾರ್ಟ್ ಸಿಟಿ ಎಇಇ ಮಂಜು ಕೀರ್ತಿ, ಮಹಾನಗರ ಪಾಲಿಕೆಯ ಇಇ ಜ್ಞಾನೇಶ್, ಎಇಇ ಎಂ.ಎನ್ ಶಿವಲಿಂಗಪ್ಪ, ಎಇಇ ಮಿಥುನ್ ಹಾಜರಿದ್ದರು.
The Mangaluru City Police on Thursday, June 13, urged road users to adhere to speed limits prescribed for different categories of roads as the police will use Mobile Speed Radar Guns to impose penalties for overspeeding.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm