ಬ್ರೇಕಿಂಗ್ ನ್ಯೂಸ್
14-06-24 12:50 pm Mangalore Correspondent ಕರಾವಳಿ
ಮಂಗಳೂರು, ಜೂನ್ 14: ಮೂರು ವರ್ಷಗಳ ಹಿಂದೆ ಆರಂಭಗೊಂಡ ದಕ್ಷಿಣ ಕನ್ನಡ ಮ್ಯೂಚ್ವಲ್ ಬೆನಿಫಿಟ್ ನಿಧಿ ಲಿಮಿಟೆಡ್ ಮುಂಚೂಣಿ ಸಾರ್ವಜನಿಕ ಹಣಕಾಸು ಸಂಸ್ಥೆಯಾಗಿದ್ದು, ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಾದ್ಯಂತ ವಿಸ್ತರಣೆಗೊಳ್ಳುತ್ತಿದೆ.
ಭಾರತ ಸರಕಾರದ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದಲ್ಲಿ 2021ರ ಫೆಬ್ರವರಿ 19ರಂದು ನೋಂದಣಿಗೊಂಡಿದ್ದು ಮಂಗಳೂರಿನ ಪಿವಿಎಸ್ ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದೆ. ಅಲ್ಲದೆ ಮಂಗಳೂರಿನ ಹಂಪನಕಟ್ಟೆ, ಮೂಡುಬಿದ್ರೆ, ಕಡಬ, ಅಸೈಗೋಳಿ, ಕಾರ್ಕಳ ಸೇರಿದಂತೆ ಆರು ಶಾಖೆಗಳನ್ನು ಹೊಂದಿದೆ. ಸಂಸ್ಥೆಯ ಶಾಖೆಗಳನ್ನು ಗುತ್ತಿಗಾರು, ಪುತ್ತೂರು ಹಾಗೂ ಸುಳ್ಯ ತಾಲೂಕಿನಲ್ಲೂ ಆರಂಭಿಸಿದ್ದು ಇದೇ ಜೂನ್ ತಿಂಗಳಲ್ಲಿ ಶುಭಾರಂಭಗೊಳ್ಳಲಿದೆ.
ಪ್ರಸಕ್ತ 2024-25ನೇ ಸಾಲಿನ ಆರ್ಥಿಕ ವರ್ಷದಲ್ಲಿ ಸಂಸ್ಥೆಯನ್ನು ಮತ್ತಷ್ಟು ವಿಸ್ತರಣೆ ಮಾಡುತ್ತಿದ್ದು ಉಡುಪಿ, ಕಾರ್ಕಳ, ದಕ್ಷಿಣ ಕನ್ನಡ ಜಿಲ್ಲೆಯ ಗುತ್ತಿಗಾರು, ಸುಳ್ಯ, ಪುತ್ತೂರು, ಉಡುಪಿ ಸೇರಿದಂತೆ ಒಟ್ಟು 25 ಶಾಖೆಗಳನ್ನು ತೆರೆಯುವ ಗುರಿ ಹೊಂದಿದೆ. ದಕ್ಷಿಣ ಕನ್ನಡ ಮ್ಯೂಚ್ವಲ್ ಬೆನಿಫಿಟ್ ನಿಧಿ ಲಿಮಿಟೆಡ್ ಸಂಸ್ಥೆಯು ಠೇವಣಿ ಮೇಲೆ ಗರಿಷ್ಠ 12.50% ದಷ್ಟು ಬಡ್ಡಿ ದರ ನೀಡುತ್ತಿದ್ದು ಸಾಲದ ಮೇಲೆ 18.50% ಬಡ್ಡಿ ದರ ವಿಧಿಸುತ್ತದೆ. 2023-2024ನೇ ಸಾಲಿನಲ್ಲಿ 10 ಕೋಟಿ ರೂಪಾಯಿಗಳ ವ್ಯವಹಾರ ನಡೆಸಿದ್ದು ಪ್ರಸಕ್ತ 2024-2025 ಆರ್ಥಿಕ ಸಾಲಿನಲ್ಲಿ 30 ಕೋಟಿ ರೂಪಾಯಿ ವ್ಯವಹಾರ ನಡೆಸುವ ಗುರಿಯನ್ನು ಹೊಂದಿದೆ. ಸಂಸ್ಥೆಯಲ್ಲಿ 60ಕ್ಕೂ ಮಿಕ್ಕಿ ಉದ್ಯೋಗಿಗಳನ್ನು ಹೊಂದಿದೆ. ಬ್ಯಾಂಕೇತರ ಹಣಹಾಸು ಸೇವೆಯ ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಸಂಸ್ಥೆ ಆರಂಭಿಸಲಾಗಿದ್ದು ಮಂಗಳೂರಿನಲ್ಲಿ ಶೀಘ್ರದಲ್ಲೇ ಅಂತಾರಾಷ್ಟ್ರೀಯ ಗುಣಮಟ್ಟದ ಸೇವೆಯುಳ್ಳ ನೂತನ ಕಾರ್ಪೊರೇಟ್ ಕಚೇರಿಯನ್ನು 1.50 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಿದೆ.
ಇತ್ತೀಚೆಗೆ ದಕ್ಷಿಣ ಕನ್ನಡ ಮ್ಯುಚುಯಲ್ ಬೆನಿಫಿಟ್ ನಿಧಿ ಲಿಮಿಟೆಡ್ ಸಂಸ್ಥೆಯ ಕಡಬ ಶಾಖೆಯ ಕಚೇರಿ ಪ್ರಮುಖರನ್ನು ಆಯ್ಕೆ ಮಾಡಲಾಗಿದೆ. ಕಡಬ ಶಾಖೆಯ ಶಾಖಾಧ್ಯಕ್ಷರಾಗಿ ಎಸ್. ಸತೀಶ್ ನಾಯಕ್, ಉಪಾಧ್ಯಕ್ಷರಾಗಿ ಕೆ. ಆಡಮ್, ಶಾಖಾ ಕಾರ್ಯದರ್ಶಿಯಾಗಿ ಕೃಷ್ಣಪ್ಪ ಮಡಿವಾಳ, ಶಾಖಾ ಖಜಾಂಚಿಯಾಗಿ ಕಿರಣ್ ಬಂಗೇರ ಅವರನ್ನು ನೇಮಕ ಮಾಡಲಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
Dakshina Kannada Mutual Benefit Nidhi Limited expands across the coastal district; new branch at Kadaba. Nidhi Company advances from a root word which traditionally means “treasure”. Recently, in the Indian financial sector, a Nidhi Company refers to any mutual benefit society notified under the Central / Union Government as a Nidhi Company.
20-07-25 08:35 pm
Bangalore Correspondent
ವಾಲ್ಮೀಕಿ ನಿಗಮ ಹಗರಣ ರೀತಿಯಲ್ಲೇ ಮತ್ತೊಂದು ಹಗರಣ ;...
20-07-25 07:55 pm
Dharmasthala SIT Case, Parameshwar: ಎಸ್ಐಟಿ ರ...
20-07-25 04:24 pm
Rcb, Bangalore: ಪೊಲೀಸರು 'ಆರ್ಸಿಬಿ ಸೇವಕರು' ಎಂಬ...
19-07-25 03:05 pm
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
20-07-25 03:06 pm
Mangaluru Correspondent
MRPL, MP Brijesh Chowta, Mangalore: MRPL ಹಸಿರ...
19-07-25 10:01 pm
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
RCB Stampede, DySP Anupama Shenoy: ಕಾಲ್ತುಳಿತ...
19-07-25 06:51 pm
Dharmasthala Case, Santosh Kumar, CPIM: ಧರ್ಮಸ...
19-07-25 06:14 pm
20-07-25 08:52 pm
HK News Desk
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm