ಬ್ರೇಕಿಂಗ್ ನ್ಯೂಸ್
20-06-24 06:02 pm Mangalore Correspondent ಕರಾವಳಿ
ಮಂಗಳೂರು, ಜೂನ್ 20: ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆ ಹಾಕಲಾಗಿದೆ. ಜೂನ್ 18ರ ಮಂಗಳವಾರ ಮಧ್ಯಾಹ್ನ 12.43ಕ್ಕೆ ವಿಮಾನ ನಿಲ್ದಾಣದ ಇಮೇಲ್ ಐಡಿಗಳಿಗೆ ಏರ್ಪೋರ್ಟ್ ನಲ್ಲಿ ಬಾಂಬ್ ಇಟ್ಟಿದ್ದು ಕೆಲವೇ ಕ್ಷಣದಲ್ಲಿ ಸ್ಫೋಟಗೊಳ್ಳಲಿದೆ ಎಂದು ಯಾರೋ ಕಿಡಿಗೇಡಿಗಳು ಸಂದೇಶ ಕಳಿಸಿದ್ದಾರೆ.
ಇದರ ಬಗ್ಗೆ ವಿಮಾನ ನಿಲ್ದಾಣದ ಮುಖ್ಯ ಸೆಕ್ಯುರಿಟಿ ಅಧಿಕಾರಿ ಮೋನಿಷ್ ಜೂನ್ 19ರಂದು ಸಂಜೆ ಬಜ್ಪೆ ಠಾಣೆಗೆ ದೂರು ನೀಡಿದ್ದಾರೆ. ವಿಮಾನ ನಿಲ್ದಾಣದ ಒಳಗಡೆ ಮತ್ತು ಆವರಣದಲ್ಲಿ ತಪಾಸಣೆ ನಡೆಸಿ, ಯಾವುದೇ ತೊಂದರೆ ಇಲ್ಲವೆಂದು ಖಚಿತಪಡಿಸಿದ ಬಳಿಕ ಬಜ್ಪೆ ಠಾಣೆಗೆ ದೂರಿತ್ತಿದ್ದಾರೆ.
ಅಪರಿಚಿತ ವ್ಯಕ್ತಿ ವಿಮಾನ ನಿಲ್ದಾಣದ ಎರಡು ಇಮೇಲ್ ಐಡಿಗಳಿಗೆ exhumedyou888@gmail.com ಎಂಬ ಇಮೇಲ್ ವಿಳಾಸದಿಂದ ಬೆದರಿಕೆ ಸಂದೇಶ ಕಳಿಸಿದ್ದಾನೆ. ಇಮೇಲ್ ನಲ್ಲಿ Hello there are exploses hidden in the airport. The bombs will soon explode. You will all die. The GROUP “KNR” his behind this messacre. “KNR” is also behind the may 1st Delhi School attack (ವಿಮಾನ ನಿಲ್ದಾಣದ ಒಳಗಡೆ ಸ್ಫೋಟಕ ಸಾಮಗ್ರಿ ಅಡಗಿಸಿಟ್ಟಿದ್ದು, ಕೆಲವೇ ಕ್ಷಣದಲ್ಲಿ ಸ್ಫೋಟ ಆಗಲಿದೆ. ನೀವೆಲ್ಲ ಸಾಯಲಿದ್ದೀರಿ. ಗ್ರೂಪ್ ಕೆಎನ್ಆರ್ ಇದರ ಹಿಂದಿದೆ. ಮೇ 1ರ ಡೆಲ್ಲಿ ಸ್ಕೂಲ್ ಅಟ್ಯಾಕ್ ಕೃತ್ಯದಲ್ಲೂ ಇದೇ ಗ್ರೂಪ್ ಇತ್ತು) ಎಂಬುದಾಗಿ ಬರೆದಿದ್ದಾನೆ. ಪೊಲೀಸರು ಬೆದರಿಕೆ ಹಾಕಿರುವ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ.
ಇದೇ ಮಾದರಿಯ ಇಮೇಲ್ ಸಂದೇಶವನ್ನು ಒಂದೇ ದಿನ ದೇಶದ ಇತರ 41 ವಿಮಾನ ನಿಲ್ದಾಣಗಳಿಗೆ ರವಾನಿಸಲಾಗಿದ್ದು, ಎಲ್ಲ ಕಡೆಯೂ ಒಂದೇ ಇಮೇಲ್ ಐಡಿಯಿಂದ ಸಂದೇಶ ಕಳಿಸಿದ್ದು ಸಿಐಎಸ್ಎಫ್ ತಪಾಸಣೆ ನಡೆಸಿ ಹುಸಿ ಬಾಂಬ್ ಕರೆ ಎಂದು ತಿಳಿಸಿದ್ದಾರೆ. ಇತ್ತೀಚೆಗೆ ಮೇ ತಿಂಗಳ ಮೊದಲ ವಾರದಲ್ಲಿ ಇದೇ ರೀತಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಲಾಗಿತ್ತು. ದುಬೈನಿಂದ ಬರ್ತಿದ್ದ ವಿಮಾನದಲ್ಲಿ ಬಾಂಬ್ ಇಡಲಾಗಿದೆ, ಎಲ್ಲರೂ ಸಾಯಲಿದ್ದೀರಿ ಎಂದು ಇಮೇಲ್ ಸಂದೇಶ ಕಳುಹಿಸಲಾಗಿತ್ತು. ಆ ಸಂದರ್ಭದಲ್ಲಿಯೂ ದೇಶದ 22 ವಿಮಾನ ನಿಲ್ದಾಣದ ಕಚೇರಿಗಳಿಗೆ ಇದೇ ರೀತಿಯ ಸಂದೇಶ ಹೋಗಿತ್ತು.
Mangalore airport gets bomb threat on mail, says there are explosives kept inside the airport, case filed at Bajpe police station. Mail has been sent from two different email ids to airport. The bombs will soon explode. You will all die. The GROUP “KNR” his behind this messacre. “KNR” is also behind the may 1st Delhi School attack.
20-07-25 08:35 pm
Bangalore Correspondent
ವಾಲ್ಮೀಕಿ ನಿಗಮ ಹಗರಣ ರೀತಿಯಲ್ಲೇ ಮತ್ತೊಂದು ಹಗರಣ ;...
20-07-25 07:55 pm
Dharmasthala SIT Case, Parameshwar: ಎಸ್ಐಟಿ ರ...
20-07-25 04:24 pm
Rcb, Bangalore: ಪೊಲೀಸರು 'ಆರ್ಸಿಬಿ ಸೇವಕರು' ಎಂಬ...
19-07-25 03:05 pm
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
20-07-25 10:35 pm
Mangalore Correspondent
Dharmasthala Case, SIT, Pronab Mohanty: ಧರ್ಮಸ...
20-07-25 03:06 pm
MRPL, MP Brijesh Chowta, Mangalore: MRPL ಹಸಿರ...
19-07-25 10:01 pm
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
RCB Stampede, DySP Anupama Shenoy: ಕಾಲ್ತುಳಿತ...
19-07-25 06:51 pm
20-07-25 08:52 pm
HK News Desk
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm