ಬ್ರೇಕಿಂಗ್ ನ್ಯೂಸ್
22-06-24 11:05 pm Mangalore Correspondent ಕರಾವಳಿ
ಮಂಗಳೂರು, ಜೂನ್ 22: ಮಂಗಳೂರಿನಲ್ಲಿ ಒಂದೂವರೆ ಸಾವಿರ ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಆದರೆ ಹೆಚ್ಚಿನ ಕಡೆ ಕಳಪೆ ಕಾಮಗಾರಿಯ ಆರೋಪ ಕೇಳಿಬಂದಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ನೇತ್ರಾವತಿ ನದಿ ತೀರದ ಮುಳಿಹಿತ್ಲು ಬಳಿ ಕಟ್ಟಲಾಗಿದ್ದ ತಡೆಗೋಡೆ ಸಾಮಾನ್ಯ ಮಳೆಗೇ ಕುಸಿದು ಬಿದ್ದಿದೆ.
70 ಕೋಟಿ ರೂಪಾಯಿ ವೆಚ್ಚದಲ್ಲಿ ರಿವರ್ ಫ್ರಂಟ್ ಯೋಜನೆ ಕಾಮಗಾರಿ ನಡೆಯುತ್ತಿದ್ದು, ಇದನ್ನು ಸಿಆರ್ ಝಡ್ ವ್ಯಾಪ್ತಿಯಲ್ಲಿ ನಡೆಸುತ್ತಿರುವುದರಿಂದ ಪರಿಸರವಾದಿಗಳು ಹಸಿರು ನ್ಯಾಯಮಂಡಳಿಗೆ ದೂರಿತ್ತು ತಡೆಯಾಜ್ಞೆ ತಂದಿದ್ದಾರೆ. ಅದರಂತೆ, ಯೋಜನಾ ಕಾಮಗಾರಿಗೆ ಹಸಿರು ಪೀಠದ ಕೋರ್ಟ್ ತಡೆಯಾಜ್ಞೆ ನೀಡಿದ್ದು, ಕಾಮಗಾರಿ ಅರ್ಧಕ್ಕೆ ನಿಂತಿದೆ. ಆದರೆ, ಅರೆಬರೆ ಆಗಿದ್ದ ತಡೆಗೋಡೆಯೇ ಈಗ ಕುಸಿದು ನೇತ್ರಾವತಿ ಪಾಲಾಗಿರುವುದು ಕಳಪೆ ಕಾಮಗಾರಿಗೆ ಸಾಕ್ಷಿ ಎನ್ನುವ ಆರೋಪ ಕೇಳಿಬಂದಿದೆ.
ರಿವರ್ ಫ್ರಂಟ್ ಯೋಜನೆಯನ್ನು ನಾಲ್ಕು ಮಂದಿ ಟೆಂಡರ್ ಪಡೆದಿದ್ದಾರೆ. ನದಿ ತೀರದಲ್ಲಿ ವೀವ್ ಪಾಯಿಂಟ್ ಸೇರಿದಂತೆ ಪ್ರವಾಸಿ ತಾಣದ ರೂಪದಲ್ಲಿ ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಲಾಗಿದೆ. ಇದರಂತೆ, ತಡೆಗೋಡೆ ಸೇರಿದಂತೆ ನದಿಯ ದಡಕ್ಕೆ ಮಣ್ಣು ತುಂಬಿಸಿ ಆಕರ್ಷಣೆ ಗಿಟ್ಟಿಸಲು ಕಾಮಗಾರಿ ನಡೆಸಲಾಗಿತ್ತು. ಇದರಲ್ಲಿ 14.5 ಕೋಟಿ ರೂ. ವೆಚ್ಚದ ತಡೆಗೋಡೆ ಕಾಮಗಾರಿ ಈಗ ಕುಸಿದು ಬಿದ್ದಿದೆ. ಅದರಲ್ಲಿ ನೋಡಿದರೆ, ಕಗ್ಗಲ್ಲಿನಿಂದ ಕಟ್ಟಲಾಗಿದ್ದು, ಅದಕ್ಕೆ ಸಿಮೆಂಟ್ ಆಗಲೀ, ಕಾಂಕ್ರೀಟ್ ಆಗಲೀ ಬಳಸಿದ್ದು ಕಂಡುಬರುತ್ತಿಲ್ಲ. ಬರೀ ಮಣ್ಣು ಮತ್ತು ಕಲ್ಲಿನಿಂದ ಕಟ್ಟಿದ ರೀತಿಯಿದ್ದು ಹೊರಭಾಗದಲ್ಲಿ ಮಾತ್ರ ಸಿಮೆಂಟ್ ಹಾಕಲಾಗಿದೆ. ಇದೇ ಕಾರಣದಿಂದ ತಡೆಗೋಡೆ ನಡುವೆ ಹತ್ತು ಮೀಟರ್ ಉದ್ದಕ್ಕೆ ಕುಸಿದು ಬಿದ್ದಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸ್ಮಾರ್ಟ್ ಸಿಟಿ ಇಂಜಿನಿಯರುಗಳು, ಗುತ್ತಿಗೆದಾರರೇ ಮರಳಿ ತಡೆಗೋಡೆಯನ್ನು ಕಟ್ಟಿ ಕೊಡಲಿದ್ದಾರೆ. ಆ ಬಗ್ಗೆ ಭರವಸೆ ನೀಡಿದ್ದಾಗಿ ಹೇಳಿದ್ದಾರೆ. ಕಳಪೆ ಗಾಮಕಾರಿ ನಡೆಸಿದ ಗುತ್ತಿಗೆದಾರನ ವಿರುದ್ಧ ಕ್ರಮಕ್ಕೆ ಪಾಲಿಕೆಯಾಗಲೀ, ಜಿಲ್ಲಾಡಳಿತವಾಗಲೀ ಮುಂದಾಗಿಲ್ಲ. ಎಲ್ಲವೂ ಕೊಡು ಕೊಳ್ಳುವಿಕೆ ರೀತಿಯಲ್ಲಿ ನಡೆಯುತ್ತಿದ್ದು, ಸ್ಮಾರ್ಟ್ ಸಿಟಿಯಡಿ ಬಂದಿರುವ ದುಡ್ಡನ್ನು ಎಲ್ಲ ಸೇರಿ ಕೊಳ್ಳೆ ಹೊಡೆಯಲು ಮುಂದಾಗಿದ್ದಾರೆಯೇ ಎನ್ನುವ ಅನುಮಾನ ಬರುವಂತಿದೆ.
In Mangalore, various development works are going on under the Smart City project at a cost of 1.5 thousand crores, but there have been allegations of poor work in most places. As proof of this, the barrier built near mulihithlu on the banks of the Netravati river has collapsed due to normal rain.
20-07-25 08:35 pm
Bangalore Correspondent
ವಾಲ್ಮೀಕಿ ನಿಗಮ ಹಗರಣ ರೀತಿಯಲ್ಲೇ ಮತ್ತೊಂದು ಹಗರಣ ;...
20-07-25 07:55 pm
Dharmasthala SIT Case, Parameshwar: ಎಸ್ಐಟಿ ರ...
20-07-25 04:24 pm
Rcb, Bangalore: ಪೊಲೀಸರು 'ಆರ್ಸಿಬಿ ಸೇವಕರು' ಎಂಬ...
19-07-25 03:05 pm
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
20-07-25 10:35 pm
Mangalore Correspondent
Dharmasthala Case, SIT, Pronab Mohanty: ಧರ್ಮಸ...
20-07-25 03:06 pm
MRPL, MP Brijesh Chowta, Mangalore: MRPL ಹಸಿರ...
19-07-25 10:01 pm
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
RCB Stampede, DySP Anupama Shenoy: ಕಾಲ್ತುಳಿತ...
19-07-25 06:51 pm
20-07-25 08:52 pm
HK News Desk
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm