ಬ್ರೇಕಿಂಗ್ ನ್ಯೂಸ್
26-06-24 10:02 am Mangaluru Correspondent ಕರಾವಳಿ
ಉಳ್ಳಾಲ, ಜೂನ್ 26: ಕಂಪೌಂಡ್ ಗೋಡೆ ಮನೆಯ ಮೇಲ್ಗಡೆ ಉರುಳಿ ಬಿದ್ದು ಒಂದೇ ಕುಟುಂಬದ ನಾಲ್ವರು ಮಲಗಿದ್ದಲ್ಲೇ ಸಾವನ್ನಪ್ಪಿದ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿನಗರ ಎಂಬಲ್ಲಿ ನಸುಕಿನ ಜಾವ ಸಂಭವಿಸಿದೆ.
ಮನೆಯಲ್ಲಿ ವಾಸ್ತವ್ಯವಿದ್ದ ಯಾಸಿರ್(45), ಅವರ ಪತ್ನಿ ಮರಿಯಮ್ಮ(40) ಮತ್ತು ಇಬ್ಬರು ಮಕ್ಕಳಾದ ರಿಹಾನ (11)ಮತ್ತು ರಿಫಾನ (17) ಮೃತಪಟ್ಟಿದ್ದಾರೆ. ಪಕ್ಕದ ಮನೆಯ ಅಬೂಬಕ್ಕರ್ ಎಂಬವರಿಗೆ ಸೇರಿದ ಮನೆಯ ಗೋಡೆ, ಕುಸಿದು ದುರಂತ ಸಂಭವಿಸಿದೆ.
ಯಾಸೀರ್ ಮಂಗಳೂರಿನ ಬಂದರು ದಕ್ಕೆಯಲ್ಲಿ ಮಡ್ಡಿ ಆಯಿಲ್ ಘಟಕದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ನಿನ್ನೆ ರಾತ್ರಿ ಊಟ ಮುಗಿಸಿ ಮನೆಯ ಕೋಣೆಯಲ್ಲಿ ಮಲಗಿದ್ದ ಇಬ್ಬರು ಪುತ್ರಿಯರು ಹಾಗೂ ದಂಪತಿ ಬೆಳಗ್ಗಿನ ಜಾವ ಮನೆಯ ಮೇಲೆ ಬಿದ್ದ ಕಾಂಪೌಂಡ್ ಗೋಡೆಯಿಂದಾಗಿ ಸ್ಥಳದಲ್ಲೇ ಸಾವು ಕಂಡಿದ್ದಾರೆ. ರಾತ್ರಿಯಿಡೀ ಮಳೆಯಾದ ಪರಿಣಾಮ ಕಂಪೌಂಡ್ ವಾಲ್ ಹಾಗೂ ಎರಡು ಅಡಿಕೆ ಮರಗಳು ಯಾಸಿರ್ ಅವರ ಮನೆಯ ಮೇಲೆ ಉರುಳಿಬಿದ್ದಿದೆ.




ರಿಹಾನಾ ಹಾಗೂ ರಿಫಾನ ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಶಾಲೆ ಹಾಗೂ ಕಾಲೇಜಿಗೆ ತೆರಳುತ್ತಿದ್ದರು. ಆರು ವರ್ಷಗಳ ಹಿಂದೆ ಮನೆ ಖರೀದಿಸಿದ್ದ ಇವರು ಒಂದು ವರ್ಷ ಮನೆಯನ್ನು ಲೀಸ್ ಗೆ ನೀಡಿ ಆರು ತಿಂಗಳ ಹಿಂದಷ್ಟೇ ಮನೆಗೆ ವಾಪಸ್ಸಾಗಿದ್ದರು. ಎರಡು ವರ್ಷಗಳ ಹಿಂದೆಯೂ ಮನೆಯ ಮೇಲೆ ಇದೇ ರೀತಿ ಕಂಪೌಂಡ್ ಗೋಡೆ ಕುಸಿದಿದ್ದು, ಯಾವುದೇ ಅಪಾಯವಾಗಿರಲಿಲ್ಲ.
ಮೂರು ಗಂಟೆಗಳ ಕಾರ್ಯಾಚರಣೆ ಬಳಿಕ ನಾಲ್ಕು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಸ್ಥಳೀಯರು ಮೂರು ಮೃತದೇಹಗಳನ್ನು ಅವಶೇಷಗಳಡಿಯಿಂದ ಹೊರತೆಗೆದರೆ, ಅಗ್ನಿಶಾಮಕ ದಳ ಸ್ಥಳೀಯರ ಜೊತೆ ಸೇರಿ ಎರಡು ಗಂಟೆ ಕಾರ್ಯಾಚರಣೆ ನಡೆಸಿ ಮತ್ತೊಂದು ಹೆಣ್ಮಗಳ ಮೃತದೇಹವನ್ನು ಹೊರತೆಗೆದಿದ್ದಾರೆ.
ದೊಡ್ಡಮಗಳು ರಶೀನಾ ಕಾಸರಗೋಡು ಕಡೆಗೆ ವಿವಾಹ ಮಾಡಲಾಗಿದ್ದು, ಬಕ್ರೀದ್ ಹಬ್ಬಕ್ಕೆಂದು ಬಂದವರು ನಿನ್ನೆಯಷ್ಟೇ ಗಂಡನ ಮನೆಗೆ ವಾಪಸ್ಸಾಗಿದ್ದರು. ಹೀಗಾಗಿ ಆಕೆ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.
In a heart-wrenching incident that occurred in the early hours on Wednesday June 26, a compound wall collapsed onto a house, leading to the death of a family of four in Madani Nagar, Munnur village, Ullal taluk.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm