ಬ್ರೇಕಿಂಗ್ ನ್ಯೂಸ್
29-06-24 10:54 pm Mangalore Correspondent ಕರಾವಳಿ
ಮಂಗಳೂರು, ಜೂನ್ 29: ರಾಜ್ಯದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕರ್ನಾಟಕವು ನೀಟ್ ಪರೀಕ್ಷಾ ವ್ಯವಸ್ಥೆಯಿಂದ ಹೊರಬಂದು ಪ್ರತ್ಯೇಕ ಪರೀಕ್ಷಾ ವ್ಯವಸ್ಥೆ ಮಾಡಿಕೊಳ್ಳುವ ತೀರ್ಮಾನ ಕೈಗೊಳ್ಳಬೇಕಾಗಿದೆ. ಈ ಬಗ್ಗೆ ಮುಂಬರುವ ಮಳೆಗಾಲದ ಅಧಿವೇಶನದಲ್ಲಿ ಪರಿಷತ್ತಿನಲ್ಲಿ ನಿಲುವಳಿ ಸೂಚನೆ ಮಂಡಿಸುವುದಾಗಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದ್ದಾರೆ. .
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಲುವಳಿ ಸೂಚನೆ ಮಂಡಿಸಲು ಈಗಾಗಲೇ ನಿರ್ಧಾರ ಮಾಡಿದ್ದು, ಅದಕ್ಕೆ ಬೇಕಾಗುವ ಅಂಕಿ ಅಂಶ ಪಡೆಯಲಿದ್ದೇನೆ ಎಂದು ತಿಳಿಸಿದರು. ನೀಟ್ ಪರೀಕ್ಷೆ ಅವ್ಯವಹಾರ ಬಗ್ಗೆ ದೇಶಾದ್ಯಂತ ಪ್ರತಿಭಟನೆಗಳು ನಡೆದಿವೆ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಮಸ್ಯೆ ಉಂಟಾಗಿರುವ ಪ್ರಕರಣದ ಬಗ್ಗೆ ಪಾರ್ಲಿಮೆಂಟ್ನಲ್ಲಿ ಚರ್ಚೆಗೇ ಅವಕಾಶ ಕೊಡುತ್ತಿಲ್ಲ. ಇಷ್ಟು ದೊಡ್ಡ ಅವ್ಯವಹಾರವನ್ನು ಚರ್ಚೆಗೆ ತೆಗೆದುಕೊಳ್ಳಲ್ಲ ಅಂತಾದರೆ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕಾಳಜಿ ಇಲ್ಲ ಎನ್ನುವುದು ಸ್ಪಷ್ಟವಾಗುತ್ತದೆ.
ಈಗಾಗಲೇ ಕೆಲವು ರಾಜ್ಯಗಳು ನೀಟ್ ಪರೀಕ್ಷೆ ಬದಲಿಗೆ ತಾವೇ ತೀರ್ಮಾನ ಮಾಡುವುದಾಗಿ ಹೇಳಿದರೂ, ಅದಕ್ಕೂ ಕೇಂದ್ರ ಸರ್ಕಾರ ಅನುಮತಿ ಕೊಡುತ್ತಿಲ್ಲ. ಕರ್ನಾಟಕವೂ ನೀಟ್ ವ್ಯವಸ್ಥೆಯಿಂದ ಹೊರ ಬರಬೇಕಾಗಿದೆ ಅಂತ ಒತ್ತಾಯ ಮಾಡಬೇಕಾದ ಅನಿವಾರ್ಯತೆ ಬಂದಿದೆ. ಮುಖ್ಯಮಂತ್ರಿ ತ್ವರಿತವಾಗಿ ಈ ಕುರಿತು ತೀರ್ಮಾನ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮೆಸ್ಕಾಂ ವೈಫಲ್ಯದಿಂದ ಸಾವು
ಜಿಲ್ಲೆಯಲ್ಲಿ ಮೆಸ್ಕಾಂ ನಿರ್ಲಕ್ಷ್ಯದಿಂದಾಗಿ ಮೂರು ಸಾವು ಸಂಭವಿಸಿದೆ. ವಿದ್ಯುತ್ ತಂತಿ ಕಳಚಿ ಬಿದ್ದು ಅಲ್ಲಿ ಬ್ರೇಕರ್ಸ್ ಇಲ್ಲದ ಕಾರಣ ತಂತಿಯಲ್ಲಿ ವಿದ್ಯುತ್ ಸಂಚಾರ ಆಗಿದೆ. ಈ ಪ್ರದೇಶದಲ್ಲಿ ಯಾಕೆ ಬ್ರೇಕರ್ಸ್ ಅಳವಡಿಸಿಲ್ಲ? ದುರ್ಘಟನೆ ಬಳಿಕ ಎಚ್ಚರಗೊಂಡಿರುವ ಅಧಿಕಾರಿಗಳು 1600 ಕಡೆ ಈಗ ಟ್ರಿಪರ್ ಹಾಕುವುದಾಗಿ ಹೇಳಿದಾರೆ. ಪ್ರಕರಣದ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಂದ ಉತ್ತರ ಪಡೆಯಲು ಜಿಲ್ಲಾಧಿಕಾರಿ ಹಾಗೂ ಉಸ್ತುವಾರಿ ಸಚಿವರಿ ತಿಳಿಸಿದ್ದಾಗಿ ಹೇಳಿದರು.
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ಉಂಟಾದರೆ ಸೂಕ್ತ ಪರಿಹಾರ ಒದಗಿಸುವುದು ಮತ್ತಿತರ ಕೆಲಸಗಳಿಗಾಗಿ ಜಿಲ್ಲಾಡಳಿತದ ಅಕೌಂಟಲ್ಲಿ 17 ಕೋಟಿ ರು. ಹಣ ಇದೆ. ಪ್ರತಿ ತಾಲೂಕಲ್ಲೂ 50 ಲಕ್ಷ ರು.ಗೂ ಅಧಿಕ ಹಣ ಇದೆ. ತಾಲೂಕು ಮಟ್ಟದಲ್ಲಿ ಪ್ರಕೃತಿ ವಿಕೋಪ ಪರಿಹಾರ ನೀಡಲು ಅಧಿಕಾರಿಗಳಿಗೆ ಮುಕ್ತ ಅವಕಾಶ ನೀಡುವಂತೆ ಜಿಲ್ಲಾಧಿಕಾರಿಗೆ ತಿಳಿಸಿದ್ದೇನೆ. ಮಳೆಯಿಂದ ಪ್ರಾಣ ಹಾನಿ ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ತಂಡಗಳನ್ನು ರಚಿಸಲಾಗಿದೆ. ಎಲ್ಲ ವಿಚಾರಗಳ ಬಗ್ಗೆ ಜು.5ರಂದು ಉಸ್ತುವಾರಿ ಸಚಿವರು ಸಭೆ ನಡೆಸಲಿದ್ದಾರೆ ಎಂದರು.
ಮುಖಂಡರಾದ ವಿಕಾಸ್ ಶೆಟ್ಟಿ, ಅಲಿಸ್ಟರ್ ಡಿಕುನ್ಹ, ಭಾಸ್ಕರ ರಾವ್, ನಝೀರ್ ಬಜಾಲ್ ಇದ್ದರು.
MLC Ivan D'Souza expressed sharp criticism towards the central government for its handling of NEET (National Eligibility cum Entrance Test) irregularities, stating that they have failed miserably to secure the future of students and provide justice in light of the recent controversies.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm