ಬ್ರೇಕಿಂಗ್ ನ್ಯೂಸ್
29-06-24 10:54 pm Mangalore Correspondent ಕರಾವಳಿ
ಮಂಗಳೂರು, ಜೂನ್ 29: ರಾಜ್ಯದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕರ್ನಾಟಕವು ನೀಟ್ ಪರೀಕ್ಷಾ ವ್ಯವಸ್ಥೆಯಿಂದ ಹೊರಬಂದು ಪ್ರತ್ಯೇಕ ಪರೀಕ್ಷಾ ವ್ಯವಸ್ಥೆ ಮಾಡಿಕೊಳ್ಳುವ ತೀರ್ಮಾನ ಕೈಗೊಳ್ಳಬೇಕಾಗಿದೆ. ಈ ಬಗ್ಗೆ ಮುಂಬರುವ ಮಳೆಗಾಲದ ಅಧಿವೇಶನದಲ್ಲಿ ಪರಿಷತ್ತಿನಲ್ಲಿ ನಿಲುವಳಿ ಸೂಚನೆ ಮಂಡಿಸುವುದಾಗಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದ್ದಾರೆ. .
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಲುವಳಿ ಸೂಚನೆ ಮಂಡಿಸಲು ಈಗಾಗಲೇ ನಿರ್ಧಾರ ಮಾಡಿದ್ದು, ಅದಕ್ಕೆ ಬೇಕಾಗುವ ಅಂಕಿ ಅಂಶ ಪಡೆಯಲಿದ್ದೇನೆ ಎಂದು ತಿಳಿಸಿದರು. ನೀಟ್ ಪರೀಕ್ಷೆ ಅವ್ಯವಹಾರ ಬಗ್ಗೆ ದೇಶಾದ್ಯಂತ ಪ್ರತಿಭಟನೆಗಳು ನಡೆದಿವೆ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಮಸ್ಯೆ ಉಂಟಾಗಿರುವ ಪ್ರಕರಣದ ಬಗ್ಗೆ ಪಾರ್ಲಿಮೆಂಟ್ನಲ್ಲಿ ಚರ್ಚೆಗೇ ಅವಕಾಶ ಕೊಡುತ್ತಿಲ್ಲ. ಇಷ್ಟು ದೊಡ್ಡ ಅವ್ಯವಹಾರವನ್ನು ಚರ್ಚೆಗೆ ತೆಗೆದುಕೊಳ್ಳಲ್ಲ ಅಂತಾದರೆ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕಾಳಜಿ ಇಲ್ಲ ಎನ್ನುವುದು ಸ್ಪಷ್ಟವಾಗುತ್ತದೆ.
ಈಗಾಗಲೇ ಕೆಲವು ರಾಜ್ಯಗಳು ನೀಟ್ ಪರೀಕ್ಷೆ ಬದಲಿಗೆ ತಾವೇ ತೀರ್ಮಾನ ಮಾಡುವುದಾಗಿ ಹೇಳಿದರೂ, ಅದಕ್ಕೂ ಕೇಂದ್ರ ಸರ್ಕಾರ ಅನುಮತಿ ಕೊಡುತ್ತಿಲ್ಲ. ಕರ್ನಾಟಕವೂ ನೀಟ್ ವ್ಯವಸ್ಥೆಯಿಂದ ಹೊರ ಬರಬೇಕಾಗಿದೆ ಅಂತ ಒತ್ತಾಯ ಮಾಡಬೇಕಾದ ಅನಿವಾರ್ಯತೆ ಬಂದಿದೆ. ಮುಖ್ಯಮಂತ್ರಿ ತ್ವರಿತವಾಗಿ ಈ ಕುರಿತು ತೀರ್ಮಾನ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮೆಸ್ಕಾಂ ವೈಫಲ್ಯದಿಂದ ಸಾವು
ಜಿಲ್ಲೆಯಲ್ಲಿ ಮೆಸ್ಕಾಂ ನಿರ್ಲಕ್ಷ್ಯದಿಂದಾಗಿ ಮೂರು ಸಾವು ಸಂಭವಿಸಿದೆ. ವಿದ್ಯುತ್ ತಂತಿ ಕಳಚಿ ಬಿದ್ದು ಅಲ್ಲಿ ಬ್ರೇಕರ್ಸ್ ಇಲ್ಲದ ಕಾರಣ ತಂತಿಯಲ್ಲಿ ವಿದ್ಯುತ್ ಸಂಚಾರ ಆಗಿದೆ. ಈ ಪ್ರದೇಶದಲ್ಲಿ ಯಾಕೆ ಬ್ರೇಕರ್ಸ್ ಅಳವಡಿಸಿಲ್ಲ? ದುರ್ಘಟನೆ ಬಳಿಕ ಎಚ್ಚರಗೊಂಡಿರುವ ಅಧಿಕಾರಿಗಳು 1600 ಕಡೆ ಈಗ ಟ್ರಿಪರ್ ಹಾಕುವುದಾಗಿ ಹೇಳಿದಾರೆ. ಪ್ರಕರಣದ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಂದ ಉತ್ತರ ಪಡೆಯಲು ಜಿಲ್ಲಾಧಿಕಾರಿ ಹಾಗೂ ಉಸ್ತುವಾರಿ ಸಚಿವರಿ ತಿಳಿಸಿದ್ದಾಗಿ ಹೇಳಿದರು.
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ಉಂಟಾದರೆ ಸೂಕ್ತ ಪರಿಹಾರ ಒದಗಿಸುವುದು ಮತ್ತಿತರ ಕೆಲಸಗಳಿಗಾಗಿ ಜಿಲ್ಲಾಡಳಿತದ ಅಕೌಂಟಲ್ಲಿ 17 ಕೋಟಿ ರು. ಹಣ ಇದೆ. ಪ್ರತಿ ತಾಲೂಕಲ್ಲೂ 50 ಲಕ್ಷ ರು.ಗೂ ಅಧಿಕ ಹಣ ಇದೆ. ತಾಲೂಕು ಮಟ್ಟದಲ್ಲಿ ಪ್ರಕೃತಿ ವಿಕೋಪ ಪರಿಹಾರ ನೀಡಲು ಅಧಿಕಾರಿಗಳಿಗೆ ಮುಕ್ತ ಅವಕಾಶ ನೀಡುವಂತೆ ಜಿಲ್ಲಾಧಿಕಾರಿಗೆ ತಿಳಿಸಿದ್ದೇನೆ. ಮಳೆಯಿಂದ ಪ್ರಾಣ ಹಾನಿ ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ತಂಡಗಳನ್ನು ರಚಿಸಲಾಗಿದೆ. ಎಲ್ಲ ವಿಚಾರಗಳ ಬಗ್ಗೆ ಜು.5ರಂದು ಉಸ್ತುವಾರಿ ಸಚಿವರು ಸಭೆ ನಡೆಸಲಿದ್ದಾರೆ ಎಂದರು.
ಮುಖಂಡರಾದ ವಿಕಾಸ್ ಶೆಟ್ಟಿ, ಅಲಿಸ್ಟರ್ ಡಿಕುನ್ಹ, ಭಾಸ್ಕರ ರಾವ್, ನಝೀರ್ ಬಜಾಲ್ ಇದ್ದರು.
MLC Ivan D'Souza expressed sharp criticism towards the central government for its handling of NEET (National Eligibility cum Entrance Test) irregularities, stating that they have failed miserably to secure the future of students and provide justice in light of the recent controversies.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 11:41 am
Udupi Correspondent
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm