ಬ್ರೇಕಿಂಗ್ ನ್ಯೂಸ್
29-06-24 10:54 pm Mangalore Correspondent ಕರಾವಳಿ
ಮಂಗಳೂರು, ಜೂನ್ 29: ರಾಜ್ಯದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕರ್ನಾಟಕವು ನೀಟ್ ಪರೀಕ್ಷಾ ವ್ಯವಸ್ಥೆಯಿಂದ ಹೊರಬಂದು ಪ್ರತ್ಯೇಕ ಪರೀಕ್ಷಾ ವ್ಯವಸ್ಥೆ ಮಾಡಿಕೊಳ್ಳುವ ತೀರ್ಮಾನ ಕೈಗೊಳ್ಳಬೇಕಾಗಿದೆ. ಈ ಬಗ್ಗೆ ಮುಂಬರುವ ಮಳೆಗಾಲದ ಅಧಿವೇಶನದಲ್ಲಿ ಪರಿಷತ್ತಿನಲ್ಲಿ ನಿಲುವಳಿ ಸೂಚನೆ ಮಂಡಿಸುವುದಾಗಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದ್ದಾರೆ. .
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಲುವಳಿ ಸೂಚನೆ ಮಂಡಿಸಲು ಈಗಾಗಲೇ ನಿರ್ಧಾರ ಮಾಡಿದ್ದು, ಅದಕ್ಕೆ ಬೇಕಾಗುವ ಅಂಕಿ ಅಂಶ ಪಡೆಯಲಿದ್ದೇನೆ ಎಂದು ತಿಳಿಸಿದರು. ನೀಟ್ ಪರೀಕ್ಷೆ ಅವ್ಯವಹಾರ ಬಗ್ಗೆ ದೇಶಾದ್ಯಂತ ಪ್ರತಿಭಟನೆಗಳು ನಡೆದಿವೆ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಮಸ್ಯೆ ಉಂಟಾಗಿರುವ ಪ್ರಕರಣದ ಬಗ್ಗೆ ಪಾರ್ಲಿಮೆಂಟ್ನಲ್ಲಿ ಚರ್ಚೆಗೇ ಅವಕಾಶ ಕೊಡುತ್ತಿಲ್ಲ. ಇಷ್ಟು ದೊಡ್ಡ ಅವ್ಯವಹಾರವನ್ನು ಚರ್ಚೆಗೆ ತೆಗೆದುಕೊಳ್ಳಲ್ಲ ಅಂತಾದರೆ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕಾಳಜಿ ಇಲ್ಲ ಎನ್ನುವುದು ಸ್ಪಷ್ಟವಾಗುತ್ತದೆ.
ಈಗಾಗಲೇ ಕೆಲವು ರಾಜ್ಯಗಳು ನೀಟ್ ಪರೀಕ್ಷೆ ಬದಲಿಗೆ ತಾವೇ ತೀರ್ಮಾನ ಮಾಡುವುದಾಗಿ ಹೇಳಿದರೂ, ಅದಕ್ಕೂ ಕೇಂದ್ರ ಸರ್ಕಾರ ಅನುಮತಿ ಕೊಡುತ್ತಿಲ್ಲ. ಕರ್ನಾಟಕವೂ ನೀಟ್ ವ್ಯವಸ್ಥೆಯಿಂದ ಹೊರ ಬರಬೇಕಾಗಿದೆ ಅಂತ ಒತ್ತಾಯ ಮಾಡಬೇಕಾದ ಅನಿವಾರ್ಯತೆ ಬಂದಿದೆ. ಮುಖ್ಯಮಂತ್ರಿ ತ್ವರಿತವಾಗಿ ಈ ಕುರಿತು ತೀರ್ಮಾನ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮೆಸ್ಕಾಂ ವೈಫಲ್ಯದಿಂದ ಸಾವು
ಜಿಲ್ಲೆಯಲ್ಲಿ ಮೆಸ್ಕಾಂ ನಿರ್ಲಕ್ಷ್ಯದಿಂದಾಗಿ ಮೂರು ಸಾವು ಸಂಭವಿಸಿದೆ. ವಿದ್ಯುತ್ ತಂತಿ ಕಳಚಿ ಬಿದ್ದು ಅಲ್ಲಿ ಬ್ರೇಕರ್ಸ್ ಇಲ್ಲದ ಕಾರಣ ತಂತಿಯಲ್ಲಿ ವಿದ್ಯುತ್ ಸಂಚಾರ ಆಗಿದೆ. ಈ ಪ್ರದೇಶದಲ್ಲಿ ಯಾಕೆ ಬ್ರೇಕರ್ಸ್ ಅಳವಡಿಸಿಲ್ಲ? ದುರ್ಘಟನೆ ಬಳಿಕ ಎಚ್ಚರಗೊಂಡಿರುವ ಅಧಿಕಾರಿಗಳು 1600 ಕಡೆ ಈಗ ಟ್ರಿಪರ್ ಹಾಕುವುದಾಗಿ ಹೇಳಿದಾರೆ. ಪ್ರಕರಣದ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಂದ ಉತ್ತರ ಪಡೆಯಲು ಜಿಲ್ಲಾಧಿಕಾರಿ ಹಾಗೂ ಉಸ್ತುವಾರಿ ಸಚಿವರಿ ತಿಳಿಸಿದ್ದಾಗಿ ಹೇಳಿದರು.
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ಉಂಟಾದರೆ ಸೂಕ್ತ ಪರಿಹಾರ ಒದಗಿಸುವುದು ಮತ್ತಿತರ ಕೆಲಸಗಳಿಗಾಗಿ ಜಿಲ್ಲಾಡಳಿತದ ಅಕೌಂಟಲ್ಲಿ 17 ಕೋಟಿ ರು. ಹಣ ಇದೆ. ಪ್ರತಿ ತಾಲೂಕಲ್ಲೂ 50 ಲಕ್ಷ ರು.ಗೂ ಅಧಿಕ ಹಣ ಇದೆ. ತಾಲೂಕು ಮಟ್ಟದಲ್ಲಿ ಪ್ರಕೃತಿ ವಿಕೋಪ ಪರಿಹಾರ ನೀಡಲು ಅಧಿಕಾರಿಗಳಿಗೆ ಮುಕ್ತ ಅವಕಾಶ ನೀಡುವಂತೆ ಜಿಲ್ಲಾಧಿಕಾರಿಗೆ ತಿಳಿಸಿದ್ದೇನೆ. ಮಳೆಯಿಂದ ಪ್ರಾಣ ಹಾನಿ ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ತಂಡಗಳನ್ನು ರಚಿಸಲಾಗಿದೆ. ಎಲ್ಲ ವಿಚಾರಗಳ ಬಗ್ಗೆ ಜು.5ರಂದು ಉಸ್ತುವಾರಿ ಸಚಿವರು ಸಭೆ ನಡೆಸಲಿದ್ದಾರೆ ಎಂದರು.
ಮುಖಂಡರಾದ ವಿಕಾಸ್ ಶೆಟ್ಟಿ, ಅಲಿಸ್ಟರ್ ಡಿಕುನ್ಹ, ಭಾಸ್ಕರ ರಾವ್, ನಝೀರ್ ಬಜಾಲ್ ಇದ್ದರು.
MLC Ivan D'Souza expressed sharp criticism towards the central government for its handling of NEET (National Eligibility cum Entrance Test) irregularities, stating that they have failed miserably to secure the future of students and provide justice in light of the recent controversies.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm