ಬ್ರೇಕಿಂಗ್ ನ್ಯೂಸ್
01-07-24 10:15 pm Mangalore Correspondent ಕರಾವಳಿ
ಮಂಗಳೂರು, ಜುಲೈ.1: ಕನ್ನಡದ ಮೊದಲ ಪತ್ರಿಕೆ ಮಂಗಳೂರ ಸಮಾಚಾರದ ಸಂಪಾದಕರಾಗಿದ್ದ ರೆವರೆಂಡ್ ಹರ್ಮನ್ ಮೋಗ್ಲಿಂಗ್ ಹೆಸರಿನಲ್ಲಿ ಮಂಗಳೂರಿನ ಪ್ರಮುಖ ರಸ್ತೆಗೆ ಅವರ ಹೆಸರು ಹಾಗೂ ವೃತ್ತವೊಂದನ್ನು ನಿರ್ಮಿಸುವಂತೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟಾನಿ ಆಳ್ವಾರಿಸ್ ಒತ್ತಾಯಿಸಿದರು.
ಸೋಮವಾರ ಮಂಗಳೂರಿನ ಬಲ್ಮಠದ ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನ ಆವರಣದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಹಮ್ಮಿಕೊಂಡ ಪತ್ರಿಕಾ ದಿನಾಚರಣೆ ಹಾಗೂ ಹರ್ಮನ್ ಮೋಗ್ಲಿಂಗ್ ಸ್ಮರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮದ ಇನ್ನೋರ್ವ ಅತಿಥಿ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಹೆಚ್ ಮಾತನಾಡಿ, ಹರ್ಮನ್ ಮೋಗ್ಲಿಂಗ್ ಅವರು ಮಂಗಳೂರ ಸಮಾಚಾರ ಪತ್ರಿಕೆಯನ್ನು ಆರಂಭಿಸುವ ಮೂಲಕ ನೈಜ ಪತ್ರಿಕಾ ಧರ್ಮದ ಅಡಿಪಾಯ ಹಾಕಿದ್ದರು. ಇವತ್ತಿನ ಸಂದರ್ಭದಲ್ಲಿ ಪತ್ರಿಕಾ ಧರ್ಮವನ್ನು ಪಾಲಿಸುವ ಬಗ್ಗೆ ಬದ್ಧತೆಯಿಂದ ಮಾಧ್ಯಮ ಸಂಸ್ಥೆಗಳು ಮತ್ತು ಪತ್ರಕರ್ತರು ಕಾರ್ಯ ನಿರ್ವಹಿಸಬೇಕಾಗಿದೆ ಎಂದು ಹೇಳಿದರು.
ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನ ಪ್ರಾಂಶುಪಾಲ ಡಾ.ಎಚ್.ಎಮ್.ವಾಟ್ಸನ್ ಮಾತನಾಡಿ, ಕಿಟೆಲ್, ಮೋಗ್ಲಿಂಗ್, ಬ್ರಿಗೆಲ್, ಗುಂಡರ್ಟ್ ಮೊದಲಾದ ಯುಗ ಪ್ರವರ್ತಕರ ನೆನಪಿನಲ್ಲಿ ಬಾಸೆಲ್ ಮಿಷನ್ ಮ್ಯೂಸಿಯಂ ಆರಂಭಿಸುವ ಉದ್ದೇಶ ಇದೆ ಎಂದು ಹೇಳಿದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಹಾಗೂ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಗೌರವ ಅಧ್ಯಕ್ಷ ಹರೀಶ್ ಬಂಟ್ವಾಳ್ ಸ್ವಾಗತಿಸಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಪ್ರಧಾನ ಕಾರ್ಯದರ್ಶಿ ಕೆನ್ಯೂಟ್ ಪಿಂಟೋ ಕಾರ್ಯಕ್ರಮ ನಿರ್ವಹಿಸಿದರು.
Karnataka Konkani Sahitya Akademi President Stany Alvares has requested that a circle be built in the name of Reverend Herman Mogling, who was the editor of Mangalore Samachar, the first Kannada newspaper.
21-07-25 01:31 pm
Bangalore Correspondent
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
ವಾಲ್ಮೀಕಿ ನಿಗಮ ಹಗರಣ ರೀತಿಯಲ್ಲೇ ಮತ್ತೊಂದು ಹಗರಣ ;...
20-07-25 07:55 pm
Dharmasthala SIT Case, Parameshwar: ಎಸ್ಐಟಿ ರ...
20-07-25 04:24 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
21-07-25 03:11 pm
Mangalore Correspondent
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
Dharmasthala Case, SIT, Pronab Mohanty: ಧರ್ಮಸ...
20-07-25 03:06 pm
20-07-25 08:52 pm
HK News Desk
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm