ಬ್ರೇಕಿಂಗ್ ನ್ಯೂಸ್
02-07-24 01:41 pm Mangalore Correspondent ಕರಾವಳಿ
ಉಳ್ಳಾಲ, ಜು.02: ಉಳ್ಳಾಲ ತಾಲೂಕಿನ ಹರೇಕಳದಲ್ಲಿ ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಪಾವೂರು ಮಲಾರು ಅಕ್ಷರನಗರ ನಿವಾಸಿ ವಿಶ್ವನಾಥ್ ಆಚಾರ್ಯ ಎಂಬವರ ಪುತ್ರ ಗಣೇಶ್ ಆಚಾರ್ಯ (27) ಮೃತ ದುರ್ದೈವಿ. ಗಣೇಶ್ ಆಚಾರ್ಯ ಅವರು ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.
ಜೂ.28 ರಂದು ಬೆಳಗ್ಗೆ ಗಣೇಶ್ ಅವರು ಪಾವೂರು ಹರೇಕಳದಿಂದ ಕೊಣಾಜೆಗೆ ತೆರಳುವ ವೇಳೆ ಹರೇಕಳ ಗ್ರಾಮ ಪಂಚಾಯತ್ ಕಚೇರಿಯ ಎದುರುಗಡೆ ಅಪಘಾತ ಸಂಭವಿಸಿತ್ತು. ವೇಗದಿಂದ ಚಲಿಸುತ್ತಿದ್ದ ಟಿಪ್ಪರ್ ಗಣೇಶ್ ಅವರು ಚಲಿಸುತ್ತಿದ್ದ ಸ್ಕೂಟರನ್ನ ಓವರ್ ಟೇಕ್ ಮಾಡುವ ಧಾವಂತದಲ್ಲಿ ಅಪಘಾತ ಸಂಭವಿಸಿದೆ. ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರ್ ಸಹಿತ ಗಣೇಶ್ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಟಿಪ್ಪರ್ ಚಾಲಕ ಮಹಮ್ಮದ್ ಹನೀಫ್ ಎಂಬವರ ವಿರುದ್ಧ ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನಲ್ಲಿ ಎ.ಸಿ ಮೆಕ್ಯಾನಿಕ್ ಆಗಿದ್ದ ಗಣೇಶ್ ಅವರು ಕುಟುಂಬಕ್ಕೆ ಆಧಾರವಾಗಿದ್ದರು. ಮೃತರು ತಾಯಿ, ತಂದೆ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿದ್ದ ಗಣೇಶ್ ಆಚಾರ್ಯ ಶಸ್ತ್ರಚಿಕಿತ್ಸೆಗೆ 10 ಲಕ್ಷ ರೂ. ಖರ್ಚಾಗುತ್ತದೆ ಎಂದು ವೈದ್ಯರು ತಿಳಿಸಿದ್ದರಿಂದ ಸ್ನೇಹಿತರು ಸಾಮಾಜಿಕ ಜಾಲತಾಣಗಳಲ್ಲಿ ದಾನಿಗಳ ನೆರವು ಕೋರಿದ್ದರು.
Mangalore Truck bike accident at Harekala in ullal, 27 year old youth dies in hospital. The deceased has been identified as Ganesh Acharya. On 28th of June he met with an accident and today he breathed his last in the hospital.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 11:41 am
Udupi Correspondent
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm