ಬ್ರೇಕಿಂಗ್ ನ್ಯೂಸ್
02-07-24 01:41 pm Mangalore Correspondent ಕರಾವಳಿ
ಉಳ್ಳಾಲ, ಜು.02: ಉಳ್ಳಾಲ ತಾಲೂಕಿನ ಹರೇಕಳದಲ್ಲಿ ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಪಾವೂರು ಮಲಾರು ಅಕ್ಷರನಗರ ನಿವಾಸಿ ವಿಶ್ವನಾಥ್ ಆಚಾರ್ಯ ಎಂಬವರ ಪುತ್ರ ಗಣೇಶ್ ಆಚಾರ್ಯ (27) ಮೃತ ದುರ್ದೈವಿ. ಗಣೇಶ್ ಆಚಾರ್ಯ ಅವರು ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.
ಜೂ.28 ರಂದು ಬೆಳಗ್ಗೆ ಗಣೇಶ್ ಅವರು ಪಾವೂರು ಹರೇಕಳದಿಂದ ಕೊಣಾಜೆಗೆ ತೆರಳುವ ವೇಳೆ ಹರೇಕಳ ಗ್ರಾಮ ಪಂಚಾಯತ್ ಕಚೇರಿಯ ಎದುರುಗಡೆ ಅಪಘಾತ ಸಂಭವಿಸಿತ್ತು. ವೇಗದಿಂದ ಚಲಿಸುತ್ತಿದ್ದ ಟಿಪ್ಪರ್ ಗಣೇಶ್ ಅವರು ಚಲಿಸುತ್ತಿದ್ದ ಸ್ಕೂಟರನ್ನ ಓವರ್ ಟೇಕ್ ಮಾಡುವ ಧಾವಂತದಲ್ಲಿ ಅಪಘಾತ ಸಂಭವಿಸಿದೆ. ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರ್ ಸಹಿತ ಗಣೇಶ್ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಟಿಪ್ಪರ್ ಚಾಲಕ ಮಹಮ್ಮದ್ ಹನೀಫ್ ಎಂಬವರ ವಿರುದ್ಧ ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನಲ್ಲಿ ಎ.ಸಿ ಮೆಕ್ಯಾನಿಕ್ ಆಗಿದ್ದ ಗಣೇಶ್ ಅವರು ಕುಟುಂಬಕ್ಕೆ ಆಧಾರವಾಗಿದ್ದರು. ಮೃತರು ತಾಯಿ, ತಂದೆ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿದ್ದ ಗಣೇಶ್ ಆಚಾರ್ಯ ಶಸ್ತ್ರಚಿಕಿತ್ಸೆಗೆ 10 ಲಕ್ಷ ರೂ. ಖರ್ಚಾಗುತ್ತದೆ ಎಂದು ವೈದ್ಯರು ತಿಳಿಸಿದ್ದರಿಂದ ಸ್ನೇಹಿತರು ಸಾಮಾಜಿಕ ಜಾಲತಾಣಗಳಲ್ಲಿ ದಾನಿಗಳ ನೆರವು ಕೋರಿದ್ದರು.
Mangalore Truck bike accident at Harekala in ullal, 27 year old youth dies in hospital. The deceased has been identified as Ganesh Acharya. On 28th of June he met with an accident and today he breathed his last in the hospital.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm