ಬ್ರೇಕಿಂಗ್ ನ್ಯೂಸ್
02-07-24 10:35 pm Mangalore Correspondent ಕರಾವಳಿ
ಮಂಗಳೂರು, ಜುಲೈ.2: ನೀಟ್ ಪರೀಕ್ಷೆ ರದ್ದುಪಡಿಸಬೇಕು ಎಂದು ಒತ್ತಾಯಿಸಿ ಎನ್ಎಸ್ ಯುಐ ಮತ್ತು ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಕ್ಲಾಕ್ ಟವರ್ ಮುಂಭಾಗದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿ ಡೌನ್ ಡೌನ್ ಎಂದು ಘೋಷಣೆ ಕೂಗಿದ್ದಲ್ಲದೆ, ನೀಟ್ ಪರೀಕ್ಷೆಯಲ್ಲಿ ಹಗರಣ ಆಗಿದ್ದರೂ, ಮೌನ ವಹಿಸಿರುವ ಪ್ರಧಾನಿ ಮೋದಿಗೆ ಧಿಕ್ಕಾರ ಕೂಗಿದ್ದಾರೆ.
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ರಾಜ್ಯ ಕಾಂಗ್ರೆಸ್ ವಕ್ತಾರ ಎಂಜಿ ಹೆಗ್ಡೆ, ನೀಟ್ ಹಗರಣ ಸಂಬಂಧಿಸಿ ಸಿಬಿಐ ಅಧಿಕಾರಿಗಳು ಗುಜರಾತ್ ಮತ್ತು ಬಿಹಾರದಲ್ಲಿಯೇ ಹೆಚ್ಚಿನ ಕಡೆ ದಾಳಿ ನಡೆಸಿದ್ದಾರೆ. ಬಿಹಾರದಲ್ಲಿ ಕೋಚಿಂಗ್ ಸೆಂಟರ್ ಹೊಂದಿರುವ ವ್ಯಕ್ತಿಯೇ ಇದರ ಕಿಂಗ್ ಪಿನ್. ವಿಶೇಷ ಅಂದ್ರೆ, ಆತ ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ವ್ಯಕ್ತಿ. ಆತನ ಕೋಚಿಂಗ್ ಸೆಂಟರಿನಿಂದ ಪರೀಕ್ಷೆ ಬರೆದವರೆಲ್ಲ ಪಾಸ್ ಆಗಿದ್ದಾರೆ. ಪರೀಕ್ಷೆಗೂ ಮೊದಲೇ ಪ್ರಶ್ನೆ ಪತ್ರಿಕೆ ಬಿಹಾರದಲ್ಲಿ ಹಂಚಿಕೆಯಾಗಿದೆ ಎನ್ನುವುದಕ್ಕಿದು ಸಾಕ್ಷಿ. ಬಿಹಾರದಲ್ಲಿ 20ಕ್ಕೂ ಹೆಚ್ಚು ಬಂಧನ ಆಗಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಬಾಯಿಬಿಟ್ಟಿದ್ದಾರೆ. ಹಾಗಿದ್ದರೂ, ಕೇಂದ್ರ ಸರಕಾರ ಈ ಬಗ್ಗೆ ಮೌನ ವಹಿಸಿದ್ದು ನೋಡಿದರೆ ಇವರು ಮಕ್ಕಳ ಪರೀಕ್ಷೆ ವಿಚಾರದಲ್ಲಿಯೂ ಕಾಸು ಮಾಡಿದ್ದಾರೆ ಎನ್ನುವುದು ತಿಳಿಯುತ್ತದೆ ಎಂದರು.










ನೀಟ್ ಲೀಕ್, ಎನ್ ಡಿಎ ಲೀಕ್ ಎನ್ನುವ ಭಿತ್ತಿಪತ್ರ ಹಿಡಿದು ಕಾರ್ಯಕರ್ತರು ಘೋಷಣೆ ಕೂಗಿದರು. ಮಾಜಿ ಸಚಿವ ರಮಾನಾಥ ರೈ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್, ಎನ್ಎಸ್ ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಮತ್ತಿತರರಿದ್ದರು. ಪ್ರತಿಭಟನೆಯ ಕೊನೆಯಲ್ಲಿ ಪೊಲೀಸರು ಹಾಕಿದ್ದ ಬ್ಯಾರಿಕೇಡನ್ನು ತಳ್ಳಿಕೊಂಡು ಕಾರ್ಯಕರ್ತರು ಹೊರಬಂದಿದ್ದು ಕೆಲಕಾಲ ಗೊಂದಲ ಮೂಡಿಸಿದ್ದಾರೆ.
The Dakshina Kannada National Students Union of India (NSUI) led by prominant Congress leaders of the district staged a protest at Clock Tower, Mangaluru, on Tuesday, July 2, criticising the Central BJP Government over the NEET question paper leak.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm