ಬ್ರೇಕಿಂಗ್ ನ್ಯೂಸ್
02-07-24 11:05 pm Mangalore Correspondent ಕರಾವಳಿ
ಮಂಗಳೂರು, ಜುಲೈ.2: ಮಂಗಳೂರು ನಗರವನ್ನು ಹಾದು ಹೋಗುವ ಹೆದ್ದಾರಿಯ ಅಲ್ಲಲ್ಲಿ ಮಳೆಯಿಂದಾಗಿ ಗುಂಡಿ ಬಿದ್ದಿದ್ದು, ವಾಹನ ಸವಾರರು ಸಂಚಾರಕ್ಕೆ ನರಕ ಯಾತನೆ ಅನುಭವಿಸುತ್ತಿದ್ದಾರೆ. ನಗರದ ಕೆಪಿಟಿ ವೃತ್ತದಲ್ಲಿ ಎರಡು ದಿನಗಳ ಹಿಂದೆ ಹೆದ್ದಾರಿ ಗುಂಡಿಗೆ ಬಿದ್ದು ದ್ವಿಚಕ್ರ ವಾಹನ ಸವಾರನೊಬ್ಬ ಗಾಯಗೊಂಡಿದ್ದ. ಇದನ್ನು ನೋಡಿ ಮನ ಕರಗಿದ ಟ್ರಾಫಿಕ್ ಪೊಲೀಸರು ಆ ಗುಂಡಿಗೆ ಸಿಮೆಂಟ್ ಹಾಕಿ ಮುಚ್ಚುವ ಕೆಲಸ ಮಾಡಿದ್ದಾರೆ.
ಕದ್ರಿ ಸಂಚಾರಿ ಠಾಣೆಯ ಇನ್ ಸ್ಪೆಕ್ಟರ್, ಮೈಸೂರು ಮೂಲದ ಈಶ್ವರ್ ಸ್ವಾಮಿ ಸ್ವತಃ ಹಾರೆ ಹಿಡಿದು ಗುಂಡಿಗೆ ಸಿಮೆಂಟ್ ತುಂಬಿಸುವ ಕೆಲಸ ಮಾಡಿದ್ದಾರೆ. ಟ್ರಾಫಿಕ್ ಪೊಲೀಸರ ಈ ಕೆಲಸ ಶ್ಲಾಘನೆಗೆ ಪಾತ್ರವಾಗಿದೆ. ಕೆಪಿಟಿ ವೃತ್ತದ ಬಳಿಯಲ್ಲೇ ಹೆದ್ದಾರಿಯಲ್ಲಿ ಗುಂಡಿ ಬಿದ್ದಿದ್ದು, ವಾಹನ ಸವಾರರಿಗೆ ಸಂಕಷ್ಟ ತಂದಿತ್ತು. ಹಾಗಿದ್ದರೂ, ಅಲ್ಲಿ ನಿಂತಿದ್ದ ಟ್ರಾಫಿಕ್ ಪೊಲೀಸರು ವಾಹನ ಸವಾರರನ್ನು ನಿಲ್ಲಿಸಿ ಫೈನ್ ಹಾಕುತ್ತಿದ್ದರೇ ವಿನಾ ಗುಂಡಿ ಮುಚ್ಚುವುದಕ್ಕಾಗಲೀ, ಹೆದ್ದಾರಿ ಇಲಾಖೆಗೆ ಹೇಳಿ ಕೆಲಸ ಮಾಡಿಸುವುದಾಗಲೀ ಮಾಡಿರಲಿಲ್ಲ.






ಮೊನ್ನೆ ಸ್ಕೂಟರ್ ಸವಾರನೊಬ್ಬ ಅದೇ ಗುಂಡಿಗೆ ಬಿದ್ದು ಮೈಕೈಗೆ ಗಾಯ ಮಾಡಿಕೊಂಡಿದ್ದ. ಟ್ರಾಫಿಕ್ ಪೊಲೀಸರು ನಿಲ್ಲುವ ಜಾಗದಲ್ಲೇ ಈ ಘಟನೆ ನಡೆದಿತ್ತು. ಇದನ್ನು ನೋಡಿದ್ದ ಟ್ರಾಫಿಕ್ ಇನ್ಸ್ ಪೆಕ್ಟರ್ ಈಶ್ವರ್ ಸ್ವಾಮಿ ಮಂಗಳವಾರ ಎಲ್ಲಿಂದಲೋ ಸಿಮೆಂಟ್ ಮಿಕ್ಸರ್ ತಂದು ಸುರಿದಿದ್ದಾರೆ. ಅಷ್ಟಾದರೂ ಗುಂಡಿ ಮುಚ್ಚಲಿ ಎಂದು ಸಾರ್ವಜನಿಕರ ಸೇವೆ ಮಾಡಿದ್ದಾರೆ. ಪುಣ್ಯಕ್ಕೆ ಸಂಜೆಯ ವರೆಗೆ ಮಳೆ ಬಿಟ್ಟಿದ್ದರಿಂದ ಸಿಮೆಂಟ್ ಸ್ವಲ್ಪ ಗಟ್ಟಿ ಆಗುವಂತೆ ಉಳಿದುಬಿಟ್ಟಿದೆ. ಪಣಂಬೂರು, ಬೈಕಂಪಾಡಿ, ಕುಳೂರು ಹೆದ್ದಾರಿ ಉದ್ದಕ್ಕೂ ಗುಂಡಿ ಬಿದ್ದಿದ್ದು, ಹೆದ್ದಾರಿ ಅಧಿಕಾರಿಗಳು ಇದನ್ನು ಮುಚ್ಚುವ ಗೊಡವೆಗೆ ಮುಂದಾಗಿಲ್ಲ.
Mangalore kadri traffic police inspector eshwar Swami and policeman fix potholes at KPT as authorities neglect duty. Eshwar Swamy, who works at the east traffic police station, along with contributions from traffic staff and auto-rickshaw drivers, managed to fix the pothole.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm