ಬ್ರೇಕಿಂಗ್ ನ್ಯೂಸ್
02-07-24 11:05 pm Mangalore Correspondent ಕರಾವಳಿ
ಮಂಗಳೂರು, ಜುಲೈ.2: ಮಂಗಳೂರು ನಗರವನ್ನು ಹಾದು ಹೋಗುವ ಹೆದ್ದಾರಿಯ ಅಲ್ಲಲ್ಲಿ ಮಳೆಯಿಂದಾಗಿ ಗುಂಡಿ ಬಿದ್ದಿದ್ದು, ವಾಹನ ಸವಾರರು ಸಂಚಾರಕ್ಕೆ ನರಕ ಯಾತನೆ ಅನುಭವಿಸುತ್ತಿದ್ದಾರೆ. ನಗರದ ಕೆಪಿಟಿ ವೃತ್ತದಲ್ಲಿ ಎರಡು ದಿನಗಳ ಹಿಂದೆ ಹೆದ್ದಾರಿ ಗುಂಡಿಗೆ ಬಿದ್ದು ದ್ವಿಚಕ್ರ ವಾಹನ ಸವಾರನೊಬ್ಬ ಗಾಯಗೊಂಡಿದ್ದ. ಇದನ್ನು ನೋಡಿ ಮನ ಕರಗಿದ ಟ್ರಾಫಿಕ್ ಪೊಲೀಸರು ಆ ಗುಂಡಿಗೆ ಸಿಮೆಂಟ್ ಹಾಕಿ ಮುಚ್ಚುವ ಕೆಲಸ ಮಾಡಿದ್ದಾರೆ.
ಕದ್ರಿ ಸಂಚಾರಿ ಠಾಣೆಯ ಇನ್ ಸ್ಪೆಕ್ಟರ್, ಮೈಸೂರು ಮೂಲದ ಈಶ್ವರ್ ಸ್ವಾಮಿ ಸ್ವತಃ ಹಾರೆ ಹಿಡಿದು ಗುಂಡಿಗೆ ಸಿಮೆಂಟ್ ತುಂಬಿಸುವ ಕೆಲಸ ಮಾಡಿದ್ದಾರೆ. ಟ್ರಾಫಿಕ್ ಪೊಲೀಸರ ಈ ಕೆಲಸ ಶ್ಲಾಘನೆಗೆ ಪಾತ್ರವಾಗಿದೆ. ಕೆಪಿಟಿ ವೃತ್ತದ ಬಳಿಯಲ್ಲೇ ಹೆದ್ದಾರಿಯಲ್ಲಿ ಗುಂಡಿ ಬಿದ್ದಿದ್ದು, ವಾಹನ ಸವಾರರಿಗೆ ಸಂಕಷ್ಟ ತಂದಿತ್ತು. ಹಾಗಿದ್ದರೂ, ಅಲ್ಲಿ ನಿಂತಿದ್ದ ಟ್ರಾಫಿಕ್ ಪೊಲೀಸರು ವಾಹನ ಸವಾರರನ್ನು ನಿಲ್ಲಿಸಿ ಫೈನ್ ಹಾಕುತ್ತಿದ್ದರೇ ವಿನಾ ಗುಂಡಿ ಮುಚ್ಚುವುದಕ್ಕಾಗಲೀ, ಹೆದ್ದಾರಿ ಇಲಾಖೆಗೆ ಹೇಳಿ ಕೆಲಸ ಮಾಡಿಸುವುದಾಗಲೀ ಮಾಡಿರಲಿಲ್ಲ.






ಮೊನ್ನೆ ಸ್ಕೂಟರ್ ಸವಾರನೊಬ್ಬ ಅದೇ ಗುಂಡಿಗೆ ಬಿದ್ದು ಮೈಕೈಗೆ ಗಾಯ ಮಾಡಿಕೊಂಡಿದ್ದ. ಟ್ರಾಫಿಕ್ ಪೊಲೀಸರು ನಿಲ್ಲುವ ಜಾಗದಲ್ಲೇ ಈ ಘಟನೆ ನಡೆದಿತ್ತು. ಇದನ್ನು ನೋಡಿದ್ದ ಟ್ರಾಫಿಕ್ ಇನ್ಸ್ ಪೆಕ್ಟರ್ ಈಶ್ವರ್ ಸ್ವಾಮಿ ಮಂಗಳವಾರ ಎಲ್ಲಿಂದಲೋ ಸಿಮೆಂಟ್ ಮಿಕ್ಸರ್ ತಂದು ಸುರಿದಿದ್ದಾರೆ. ಅಷ್ಟಾದರೂ ಗುಂಡಿ ಮುಚ್ಚಲಿ ಎಂದು ಸಾರ್ವಜನಿಕರ ಸೇವೆ ಮಾಡಿದ್ದಾರೆ. ಪುಣ್ಯಕ್ಕೆ ಸಂಜೆಯ ವರೆಗೆ ಮಳೆ ಬಿಟ್ಟಿದ್ದರಿಂದ ಸಿಮೆಂಟ್ ಸ್ವಲ್ಪ ಗಟ್ಟಿ ಆಗುವಂತೆ ಉಳಿದುಬಿಟ್ಟಿದೆ. ಪಣಂಬೂರು, ಬೈಕಂಪಾಡಿ, ಕುಳೂರು ಹೆದ್ದಾರಿ ಉದ್ದಕ್ಕೂ ಗುಂಡಿ ಬಿದ್ದಿದ್ದು, ಹೆದ್ದಾರಿ ಅಧಿಕಾರಿಗಳು ಇದನ್ನು ಮುಚ್ಚುವ ಗೊಡವೆಗೆ ಮುಂದಾಗಿಲ್ಲ.
Mangalore kadri traffic police inspector eshwar Swami and policeman fix potholes at KPT as authorities neglect duty. Eshwar Swamy, who works at the east traffic police station, along with contributions from traffic staff and auto-rickshaw drivers, managed to fix the pothole.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 11:41 am
Udupi Correspondent
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm