ಬ್ರೇಕಿಂಗ್ ನ್ಯೂಸ್
04-07-24 03:05 pm Mangalore Correspondent ಕರಾವಳಿ
ಮಂಗಳೂರು, ಜುಲೈ 4: ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜಲಪಾತಗಳು ಮತ್ತೆ ಮೈದುಂಬಿಕೊಂಡು ಹರಿಯುತ್ತಿವೆ. ಆದರೆ ಭೋರ್ಗರವೆ ನೀರಿನಲ್ಲಿ ಅಪಾಯ ಇರುವುದರಿಂದ ಪಶ್ಚಿಮ ಘಟ್ಟಗಳ ಜಲಪಾತ, ಟ್ರಕ್ಕಿಂಗ್ ಪಾಯಿಂಟ್ ತೆರಳದಂತೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
ಮಳೆಗಾಲ ಸಮಯದಲ್ಲಿ ಜಲಪಾತ, ಟ್ರಕ್ಕಿಂಗ್ ಹೋಗುವುದಕ್ಕೆ ಬೆಂಗಳೂರಿನ ಜನ ಇಷ್ಟ ಪಡುತ್ತಾರೆ. ಆದರೆ ಮಳೆ ಹೆಚ್ಚಿರುವುದರಿಂದ ಟ್ರೆಕ್ಕಿಂಗ್, ಜಲಪಾತ ಹೋಗುವವರಿಗೆಲ್ಲ ಮುಂದಿನ ಸೂಚನೆ ವರೆಗೂ ಬ್ರೇಕ್ ಹಾಕಲಾಗಿದೆ.
ಕರಾವಳಿ ಭಾಗದ ನಾಲ್ಕು ಜಿಲ್ಲೆಗಳಲ್ಲಿ ಕಾಡಿನ ಮಧ್ಯದ ಪ್ರವಾಸಿ ತಾಣಗಳಿಗೆ ಭೇಟಿ ನೀಡದಂತೆ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿದೆ. ಮಂಗಳೂರು ಅರಣ್ಯ ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ ಕಾಡುಗಳು, ಬೆಟ್ಟಗಳು- ಜಲಪಾತಗಳಿಗೆ ಜನಸಾಮಾನ್ಯರ ಭೇಟಿಯನ್ನು ನಿರ್ಬಂಧಿಸಲಾಗಿದೆ. ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನ ನರಸಿಂಹಗಡ (ಗಡಾಯಿಕಲ್ಲು) ಬೆಟ್ಟ, ಅರಿಶಿನಗುಂಡಿ, ಕೂಡ್ಲು, ಬರ್ಕಳ, ಹಿಡ್ಲುಮನೆ, ವನಕಬ್ಬಿ, ಬಂಡಾಜೆ ಜಲಪಾತಗಳತ್ತ ತೆರಳದಂತೆ ನಿರ್ಬಂಧಿಸಲು ಬೆಳ್ತಂಗಡಿ ಆರ್ಎಫ್ಓಗೆ ಕುದುರೆಮುಖ ಸಿಎಫ್ ಆದೇಶ ನೀಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲೂ ಫಾಲ್ಸ್ ನಿರ್ಬಂಧ
ಉತ್ತರ ಕನ್ನಡ ಜಿಲ್ಲೆಯಲ್ಲಿ ಗಂಗಾವಳಿ ನದಿ ಭೋರ್ಗರೆಯುತ್ತಿದ್ದು ನೀರಿನ ಹೆಚ್ಚಳದಿಂದ ಕಾರವಾರ ತಾಲೂಕಿನ ಫಾಲ್ಸ್ಗಳಿಗೆ ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧ ಹಾಕಲಾಗಿದೆ. ಯಲ್ಲಾಪುರದ ಶಿರಲೆ ಫಾಲ್ಸ್, ಕಾನೂರು ಫಾಲ್ಸ್, ಕುಳಿ ಮಾಗೋಡು ಜಲಪಾತಗಳ ಭೇಟಿಗೆ ಅರಣ್ಯ ಇಲಾಖೆಯಿಂದ ಪ್ರವೇಶ ನಿಷೇಧ ಮಾಡಲಾಗಿದೆ. ಕಾರವಾರ ತಾಲೂಕಿನ ಪಣಸಗುಳಿ ಸೇತುವೆ ಮುಳುಗಡೆ ಹಾಗೂ ಗಂಗಾವಳಿ ನದಿ ಉಕ್ಕಿ ಹರಿಯುತ್ತಿರುವ ಹಿನ್ನಲೆ ಸಂಚಾರ ನಿರ್ಬಂಧಿಸಲಾಗಿದೆ.
Entry for water falls and sightseeing in Mangalore Udupi and uttar karnataka restricted due to heavy rains. People from various districts come to visit water falls and do trekking for which the adminstration has put a full stop for safety purpose.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm