ಬ್ರೇಕಿಂಗ್ ನ್ಯೂಸ್
04-07-24 10:04 pm Mangalore Correspondent ಕರಾವಳಿ
ಮಂಗಳೂರು, ಜುಲೈ.4: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಂಸದನಾಗಿ ಪ್ರತಿಜ್ಞೆ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಮೊದಲ ಅಧಿವೇಶನದ ಸಮಯದಲ್ಲಿ ಹಲವು ಕೇಂದ್ರ ಸಚಿವರುಗಳನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕಲ್ಪನೆ ಸಾಕಾರಗೊಳಿಸಲು ಮುನ್ನುಡಿ ಬರೆದಿದ್ದಾರೆ.
ಕೇಂದ್ರ ಬಂದರು, ಶಿಪ್ಪಿಂಗ್ ಮತ್ತು ಜಲಮಾರ್ಗಗಳ ಸಚಿವರಾದ ಸರ್ಬಾನಂದ ಸೋನೋವಾಲ್ ಅವರನ್ನು ಅವರ ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ಮಂಗಳೂರು ಎನ್ಎಮ್ಪಿಎ ಬಂದರು ಅಭಿವೃದ್ಧಿಯ ದೃಷ್ಟಿಯಿಂದ ಇರುವ ಸಾಧ್ಯತೆಗಳು, ಸಾಗರ್ಮಾಲಾ ಯೋಜನೆ ಅಡಿಯಲ್ಲಿ ಲಕ್ಷದ್ವೀಪಕ್ಕೆ ತೆರಳುವ ಹಡಗುಗಳಿಗೆ ಮೀಸಲಾದ ಜೆಟ್ಟಿ ಮತ್ತು ಕ್ರೂಸ್ ಟರ್ಮಿನಲ್ ನಿರ್ಮಾಣದ ಕುರಿತು ಚರ್ಚೆ ನಡೆಸಿದರು.




ಹಾಗೆಯೇ ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ದೆಹಲಿಯ ಸಚಿವಾಲಯದಲ್ಲಿ ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ರೈಲ್ವೇ ಯೋಜನೆಗಳ ಪ್ರಗತಿ, ಸಮಸ್ಯೆ ಮತ್ತು ಸಾಧ್ಯತೆಗಳ ಕುರಿತು ಚರ್ಚಿಸಿದ್ದಾರೆ.
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ ಸಂಸದ ಚೌಟ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟ ಕಾಮಗಾರಿಗಳ ಕುರಿತು ಚರ್ಚಿಸಿದ್ದು, ಶಿರಾಡಿ ಘಾಟಿಯ ಮೂಲಕ ಹಾದು ಹೋಗುವ ಮಂಗಳೂರು – ಬೆಂಗಳೂರು ನಡುವಿನ ರಸ್ತೆ ಪ್ರಯಾಣದ ಅವಧಿಯನ್ನು ಕಡಿಮೆಗೊಳಿಸಲು ಕೈಗೊಳ್ಳಬಹುದಾದ ಯೋಜನೆಗಳ ಕುರಿತು ಅಧ್ಯಯನ ನಡೆಸುವಂತೆ ಕೇಳಿಕೊಂಡಿದ್ದಾರೆ.
ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರನ್ನು ದೆಹಲಿಯ ಸಚಿವಾಲಯದಲ್ಲಿ ಭೇಟಿಯಾಗಿ ದಕ್ಷಿಣ ಕನ್ನಡದಲ್ಲಿ ಪೆಟ್ರೋಲಿಯಂ ಇಲಾಖೆಗೆ ಸಂಬಂಧಿಸಿದ ಮತ್ತು ಜಿಲ್ಲೆಯ ಅಭಿವೃದ್ಧಿ ವಿಷಯಗಳಿಗೆ ಸ್ಪಂದಿಸುವಂತೆ ಕೇಳಿಕೊಂಡರು. ಹಾಗೂ ಗ್ರೀನ್ ಹೈಡ್ರೋಜನ್ ಘಟಕಗಳನ್ನು ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಸ್ಥಾಪಿಸುವ ಸಾಧ್ಯತೆಗಳ ಬಗ್ಗೆ ಹಾಗೂ ಅದರಿಂದ ಸೃಷ್ಟಿಯಾಗುವ ಉದ್ಯೋಗಗಳನ್ನು ಸ್ಥಳೀಯರಿಗೆ ನೀಡುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮನವಿ ಮಾಡಿದರು.
ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಮಾರ್ಗದರ್ಶನ ಮತ್ತು ಸಹಕಾರ ನೀಡುವಂತೆ ಮನವಿ ಮಾಡಿದರು.
Mangalore MP Brijesh Chowta meets central ministers, seeks helps in development of Dakshina Kannada
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm