ಬ್ರೇಕಿಂಗ್ ನ್ಯೂಸ್
06-07-24 01:41 pm Mangalore Correspondent ಕರಾವಳಿ
ಮಂಗಳೂರು, ಜುಲೈ.6: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಮಾಜವಾದಕ್ಕೆ ತಿಲಾಂಜಲಿ ಇಟ್ಟಿದ್ದು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಮೂಡಾ ಸೈಟ್ ಮಾರಾಟ ಪ್ರಕರಣದಲ್ಲಿ ಮುಖ್ಯಮಂತ್ರಿ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಎಂಎಲ್ಸಿ ರವಿ ಕುಮಾರ್ ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿಗಳು ಸಮಾಜವಾದ ಹಿನ್ನೆಲೆಯಿಂದ ಬಂದವರು ಅಂತ ಹೇಳಿಕೊಳ್ಳುತ್ತಿದ್ದರು. ನನಗೂ ಭ್ರಷ್ಟಾಚಾರಕ್ಕೂ ಸಾಸಿವೆ ಕಾಳಷ್ಟು ಸಂಬಂಧ ಇಲ್ಲ ಎಂದು ಹೇಳುತ್ತಾ ಬಂದಿದ್ದರು. ಆದರೆ ಎರಡನೇ ಬಾರಿಗೆ ಸಿಎಂ ಆಗಿರುವ ಸಿದ್ದರಾಮಯ್ಯ ಸಮಾಜವಾದಕ್ಕೆ ತಿಲಾಂಜಲಿ ಇಟ್ಟಿದ್ದಾರೆ. ಮೈಸೂರು ಮೂಡಾದಲ್ಲಿ ತನ್ನ ಪತ್ನಿಗೆ 14 ಸೈಟು ಮಾಡಿಸಿಕೊಡ್ತಾರೆ. 35 ಕೋಟಿ ಕೊಟ್ಟು 14 ಸೈಟು ತಗೋಳ್ತಾರೆ ಅಂದ್ರೆ ಇವರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.
ನೀವು ಎರಡನೇ ಬಾರಿ ಮುಖ್ಯಮಂತ್ರಿ ಆದ ಬಳಿಕ ನಿಮ್ಮ ಸಮಾಜವಾದ ಆದರ್ಶ ಎಲ್ಲಿ ಹೋಯ್ತು ಎಂದು ಪ್ರಶ್ನಿಸಿದ ರವಿಕುಮಾರ್, ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಎಸ್ಸಿ ಎಸ್ಟಿ ಅಭಿವೃದ್ಧಿಗೆ ಮೀಸಲಿಟ್ಟ ಹಣ ಹೇಗೆ ಗ್ಯಾರಂಟಿಗೆ ಬಳಸುತ್ತೀರಾ? ಎಸ್ ಸಿ ಗಳಿಗೆ, ಎಸ್ಟಿ ಗಳಿಗೆ ದಲಿತರಿಗೆ ಮಹಾ ದ್ರೋಹ ಮಾಡಿದ ಸಿಎಂ ಎಂದರೆ ಅದು ಸಿದ್ದರಾಮಯ್ಯ. ಬಹಳ ಬುದ್ಧಿವಂತರಾದ ಸಿದ್ದರಾಮಯ್ಯ, ಆರ್ಥಿಕ ತಜ್ಞ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ, 4ರಿಂದ 5 ಲಕ್ಷ ಬೆಲೆ ಬಾಳುವ ಜಮೀನನ್ನ ಮೂಡಾಕ್ಕೆ ಕೊಟ್ಟು ಈಗ 62 ಕೋಟಿ ರೂಪಾಯಿ ಕೇಳ್ತಾ ಇದ್ದಾರೆ. ಇಡೀ ರಾಜ್ಯದಲ್ಲಿ ಈ ಹಿಂದೆ ರೈತರು ಕಡಿಮೆ ಬೆಲೆಗೆ ಜಮೀನನ್ನು ಕೊಟ್ಟಿದ್ದಾರೆ. ಈಗ ಅದು ಕೋಟ್ಯಂತರ ಮೌಲ್ಯದ ಫ್ಲಾಟ್ ಸೈಟ್ ಆಗಿ ಪರಿವರ್ತನೆಯಾಗಿದೆ.
ಈಗ ಆ ಎಲ್ಲಾ ರೈತರು ಅಷ್ಟೇ ಮೊತ್ತ ಕೇಳಿದ್ರೆ ಕೋಟಿ ಕೊಡ್ತೀರಾ? ನೀವು ಭ್ರಷ್ಟ ಮುಖ್ಯಮಂತ್ರಿಯಾಗಿದ್ದೀರಿ, ಮಹರ್ಷಿ ವಾಲ್ಮೀಕಿ ನಿಗಮದ ಹಣವನ್ನ ಬೇರೆ ರಾಜ್ಯದ ಚುನಾವಣೆಗೆ ಬಳಸಿಕೊಂಡಿದ್ದೀರಿ. 700 ಅಕೌಂಟ್ ಗಳಿಗೆ ಹಣ ಸಂದಾಯ ಮಾಡಿ ಡ್ರಾ ಮಾಡಿಸಿದ್ದೀರಿ. ವಾಲ್ಮೀಕಿ ನಿಗಮದ ಹಗರಣದ ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ಕೊಟ್ರು. ನೀವು ಈಗ ಸೈಟ್ ಗಳಲ್ಲಿ ಭ್ರಷ್ಟಾಚಾರ ಮಾಡಿದ್ದೀರಾ.. ನೀವು ಕೂಡ ರಾಜೀನಾಮೆ ಕೊಟ್ಟು ಮಾತನಾಡಿ ಎಂದು ಆಗ್ರಹಿಸಿದರು.
Siddaramaiah’s wife lost land worth Rs 57 crore to MUDA, cm should resign says MLC Ravi Kumar in Mangalore. Siddaramaiah’s wife is ready to return the alternative sites provided by MUDA, if the authority returns her 3.16 acres land at Kesare village, A S Ponnanna, the legal adviser to chief minister said.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm