ಬ್ರೇಕಿಂಗ್ ನ್ಯೂಸ್
07-07-24 06:58 pm Mangalore Correspondent ಕರಾವಳಿ
ಮಂಗಳೂರು, ಜು.6: 2024- 2025ನೇ ಸಾಲಿನ ಮುಂಗಾರು ಅವಧಿಯಲ್ಲಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಅನಾಹುತ ಸಂಭವಿಸದಂತೆ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಪ್ರವಾಸಿಗರಿಗೆ ಗಿರಿತಾಣಗಳಿಗೆ ಚಾರಣ ಹೋಗುವುದನ್ನು, ನದಿ ದಡಗಳಿಗೆ ಭೇಟಿ ನೀಡುವುದನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ನಿಷೇಧಿಸಿದೆ.
ಮುಂಗಾರು ಮಳೆ ಚುರುಕಾಗಿರುವುದರಿಂದ ಜಿಲ್ಲೆಯಾದ್ಯಂತ ಪ್ರಾಕೃತಿಕ ವಿಕೋಪದ ಘಟನೆಗಳಾಗುತ್ತಿದ್ದು ಸಾರ್ವಜನಿಕರ ಹಿತಾಸಕ್ತಿ ಗಮನಿಸಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕರು ಹಾಗೂ ಪ್ರವಾಸಿಗರ ಸುರಕ್ಷಾ ದೃಷ್ಟಿಯಿಂದ ಜಿಲ್ಲೆಯಲ್ಲಿ ಗಿರಿತಾಣ, ಶಿಖರಗಳಿಗೆ ಮಳೆಗಾಲದ ಅವಧಿಯಲ್ಲಿ ಚಾರಣ ಹೋಗುವುದನ್ನು ಸಂಪೂರ್ಣ ನಿರ್ಬಂಧಿಸಲಾಗಿದೆ.
ಮಳೆಗಾಲ ಮುಗಿಯುವವರೆಗೆ ಹೋಮ್ ಸ್ಟೇ, ರೆಸಾರ್ಟ್, ಅರಣ್ಯ ಇಲಾಖೆ ವತಿಯಿಂದ ಕೈಗೊಳ್ಳುವ ಟ್ರೆಕ್ಕಿಂಗ್ ಸಾಹಸ ಚಟುವಟಿಕೆಗಳು ಇತ್ಯಾದಿ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಆದೇಶದ ಉಲ್ಲಂಘನೆ ಮಾಡಿದರೆ ಡಿಸಾಸ್ಟರ್ ಮ್ಯಾನೇಜ್ಮೆಂಟ್ ಕಾಯ್ದೆ 2005 ಸೆಕ್ಷನ್ 51ಬಿ ಪ್ರಕಾರ ದಂಡ ವಿಧಿಸಲಾಗುವುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಸೂಚಿಸಿದ್ದಾರೆ.
ಸಾರ್ವಜನಿಕರು-ಪ್ರವಾಸಿಗರು ನೀರಿಗೆ ಇಳಿಯದಿರಿ
ಇದಲ್ಲದೆ, ಮಳೆಗಾಲದ ಅವಧಿಯಲ್ಲಿ ಯಾವುದೇ ಅವಘಡಗಳಿಗೆ ಆಸ್ಪದವಿರದಂತೆ ಮುನ್ನಚ್ಚರಿಕೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಇರುವ ಜಲಪಾತ, ಝರಿ, ನದಿ, ಸಮುದ್ರ, ಜಲಾಶಯದ ಪ್ರದೇಶಗಳಲ್ಲಿ ಸಾರ್ವಜನಿಕರು, ಪ್ರವಾಸಿಗರು ನೀರಿನಲ್ಲಿ ಇಳಿಯುವುದು, ಈಜುವುದು, ಸಾಹಸ ಚಟುವಟಿಕೆಗಳನ್ನು ನಡೆಸುವುದನ್ನು ನಿರ್ಬಂಧಿಸಿ ಮುಂದಿನ ಆದೇಶದ ವರೆಗೆ ಜಿಲ್ಲಾಧಿಕಾರಿ ಅದೇಶಿಸಿದ್ದಾರೆ.
Mangalore trekking, entry to water falls and mountain area restricted. The Dakshina Kannada district administration has issued a ban on trekking to peaks in the district until the end of the monsoon season. This order, issued under the Disaster Management Act by Deputy Commissioner and District Magistrate M.P. Mullai Muhilan, cites the risks of landslips, mudslides, and lightning due to heavy rains.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm