ಬ್ರೇಕಿಂಗ್ ನ್ಯೂಸ್
08-07-24 12:44 pm Mangalore Correspondent ಕರಾವಳಿ
ಉಳ್ಳಾಲ, ಜು.8: ಉಳ್ಳಾಲ ಖಾಝಿ, ಮರ್ಹೂಂ ಶೈಖುನಾ ತಾಜುಲ್ ಉಲಮಾ ಅಸ್ಸೈಯದ್ ಅಬ್ದುರಹ್ಮಾನ್ ಅಲ್ ಬುಖಾರಿ ತಂಞಳ್ ಅವರ ಪುತ್ರ ಅಸ್ಸೈಯದ್ ಫಝಲ್ ಕೋಯಮ್ಮ(ಕೂರತ್ ತಂಞಳ್) ತಂಞಳ್ ಅಲ್ ಬುಖಾರಿ(65) ಸೋಮವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕೇರಳದ ಕಣ್ಣೂರು ಜಿಲ್ಲೆಯ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಹೃದಯಾಘಾತದಿಂದ ತಂಞಳ್ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ. ಇಂದು ಮಧ್ಯಾಹ್ನ ಉಳ್ಳಾಲ ಸೈಯದ್ ಮದನಿ ದರ್ಗಾ ವಠಾರದಲ್ಲಿ ನಿಗದಿಯಾಗಿದ್ದ ಸೈಯದ್ ಮದನಿ ಶರೀಅತ್ ಕಾಲೇಜು ವಿದ್ಯಾರ್ಥಿಗಳ ನೂತನ ಹಾಸ್ಟೆಲ್ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಬೆಳಗ್ಗೆ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಸಿದ್ದರಾಗುತ್ತಿದ್ದರು. ಈ ವೇಳೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ಅವರ ಪಾರ್ಥಿವ ಶರೀರವು ಇಂದು ಸಂಜೆ 7 ಗಂಟೆ ಸುಮಾರಿಗೆ ಉಳ್ಳಾಲ ಜುಮಾ ಮಸೀದಿ ಮತ್ತು ಸೈಯದ್ ಮದನಿ ದರ್ಗಾ ವಠಾರಕ್ಕೆ ತಲುಪಲಿದೆ. ಆ ಬಳಿಕ ಪಾರ್ಥಿವ ಶರೀರವನ್ನು ಕಡಬ ತಾಲೂಕಿನ ಕೂರತ್ ಗೆ ಕೊಂಡೊಯ್ಯಲಾಗುತ್ತದೆ. ಅಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ದಫನ ಕಾರ್ಯ ನೆರವೇರಲಿದೆ ಎಂದು ಉಳ್ಳಾಲ ಸೈಯದ್ ಮದನಿ ದರ್ಗಾ ಸಮಿತಿಯ ಅಧ್ಯಕ್ಷ ಬಿ.ಜಿ.ಹನೀಫ್ ಹಾಜಿ ತಿಳಿಸಿದ್ದಾರೆ.
ಕೂರತ್ ತಂಞಳ್ ಅವರು 2014ರಲ್ಲಿ ತಾಜುಲ್ ಉಲಮಾ ನಿಧನರಾದ ಬಳಿಕ ಉಳ್ಳಾಲ ಖಾಝಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
Assayed Hamid Fazal Koyamma Thangal Madani, the Qazi of Ulllal, passed away in Kerala on Monday July 8. Fazal Koyamma Tangal had taken over the posted after the death of the previous Qazi, Tajul Ulema Assayyid Abdurrahman Al Bukhari Ullal Tangal.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm