ಬ್ರೇಕಿಂಗ್ ನ್ಯೂಸ್
08-07-24 12:44 pm Mangalore Correspondent ಕರಾವಳಿ
ಉಳ್ಳಾಲ, ಜು.8: ಉಳ್ಳಾಲ ಖಾಝಿ, ಮರ್ಹೂಂ ಶೈಖುನಾ ತಾಜುಲ್ ಉಲಮಾ ಅಸ್ಸೈಯದ್ ಅಬ್ದುರಹ್ಮಾನ್ ಅಲ್ ಬುಖಾರಿ ತಂಞಳ್ ಅವರ ಪುತ್ರ ಅಸ್ಸೈಯದ್ ಫಝಲ್ ಕೋಯಮ್ಮ(ಕೂರತ್ ತಂಞಳ್) ತಂಞಳ್ ಅಲ್ ಬುಖಾರಿ(65) ಸೋಮವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕೇರಳದ ಕಣ್ಣೂರು ಜಿಲ್ಲೆಯ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಹೃದಯಾಘಾತದಿಂದ ತಂಞಳ್ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ. ಇಂದು ಮಧ್ಯಾಹ್ನ ಉಳ್ಳಾಲ ಸೈಯದ್ ಮದನಿ ದರ್ಗಾ ವಠಾರದಲ್ಲಿ ನಿಗದಿಯಾಗಿದ್ದ ಸೈಯದ್ ಮದನಿ ಶರೀಅತ್ ಕಾಲೇಜು ವಿದ್ಯಾರ್ಥಿಗಳ ನೂತನ ಹಾಸ್ಟೆಲ್ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಬೆಳಗ್ಗೆ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಸಿದ್ದರಾಗುತ್ತಿದ್ದರು. ಈ ವೇಳೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ಅವರ ಪಾರ್ಥಿವ ಶರೀರವು ಇಂದು ಸಂಜೆ 7 ಗಂಟೆ ಸುಮಾರಿಗೆ ಉಳ್ಳಾಲ ಜುಮಾ ಮಸೀದಿ ಮತ್ತು ಸೈಯದ್ ಮದನಿ ದರ್ಗಾ ವಠಾರಕ್ಕೆ ತಲುಪಲಿದೆ. ಆ ಬಳಿಕ ಪಾರ್ಥಿವ ಶರೀರವನ್ನು ಕಡಬ ತಾಲೂಕಿನ ಕೂರತ್ ಗೆ ಕೊಂಡೊಯ್ಯಲಾಗುತ್ತದೆ. ಅಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ದಫನ ಕಾರ್ಯ ನೆರವೇರಲಿದೆ ಎಂದು ಉಳ್ಳಾಲ ಸೈಯದ್ ಮದನಿ ದರ್ಗಾ ಸಮಿತಿಯ ಅಧ್ಯಕ್ಷ ಬಿ.ಜಿ.ಹನೀಫ್ ಹಾಜಿ ತಿಳಿಸಿದ್ದಾರೆ.
ಕೂರತ್ ತಂಞಳ್ ಅವರು 2014ರಲ್ಲಿ ತಾಜುಲ್ ಉಲಮಾ ನಿಧನರಾದ ಬಳಿಕ ಉಳ್ಳಾಲ ಖಾಝಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
Assayed Hamid Fazal Koyamma Thangal Madani, the Qazi of Ulllal, passed away in Kerala on Monday July 8. Fazal Koyamma Tangal had taken over the posted after the death of the previous Qazi, Tajul Ulema Assayyid Abdurrahman Al Bukhari Ullal Tangal.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm