ಬ್ರೇಕಿಂಗ್ ನ್ಯೂಸ್
08-07-24 06:37 pm Udupi Correspondent ಕರಾವಳಿ
ಉಡುಪಿ, ಜುಲೈ 8: ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ಭತ್ತದ ಗದ್ದೆಗಳೇ ಮಾಯವಾಗುತ್ತಿವೆ. ಇದ್ದ ಗದ್ದೆಗಳಲ್ಲಿ ಉತ್ತು ಬೆಳೆ ತೆಗೆಯುವುದಕ್ಕೆ ಕೃಷಿ ಕಾರ್ಮಿಕರ ಕೊರತೆಯೂ ಇದೆ. ಉಡುಪಿ ಜಿಲ್ಲೆಯ ಕೋಟ ಆಸುಪಾಸಿನಲ್ಲೀಗ ಭತ್ತದ ಗದ್ದೆಗಳಲ್ಲಿ ಒಡಿಶಾ ಮೂಲದ ಮಹಿಳೆಯರು ಭತ್ತದ ಕೃಷಿ ಕೆಲಸದಲ್ಲಿ ತೊಡಗಿಸಿದ್ದಾರೆ.
ಗದ್ದೆಗಳು ಒಂದೆಡೆ ಮರೆಯಾಗುತ್ತಿದ್ದರೂ, ಅಕ್ಕಿಗೆ ಒಂದೇ ಸಮನೆ ದರ ಏರುತ್ತಿರುವುದರಿಂದ ಹಿಂದಿನಿಂದಲೂ ಗದ್ದೆ ಬೇಸಾಯ ಮಾಡಿಕೊಂಡಿದ್ದವರು ಬಿಟ್ಟಾಕುತ್ತಿಲ್ಲ. ಸಾಂಪ್ರದಾಯಿಕ ಕೃಷಿಯಿಂದ ಲಾಭ ಇದೆಯೆಂದು ಹೇಳುವವರು ಕಷ್ಟದಲ್ಲೂ ಭತ್ತದ ಒಂದು ಬೆಳೆ ತೆಗೆಯುತ್ತಿದ್ದಾರೆ. ಕೃಷಿಗೆ ಯಂತ್ರಕ್ಕಿಂತಲೂ ಕೂಲಿಗೆ ಜನ ಸಿಕ್ಕರೆ, ಅವರಲ್ಲೇ ನಾಟಿ ಮಾಡಿಸುವುದು ಒಳ್ಳೆದು ಅಂತಾರೆ. ಒಡಿಶಾದ ಮಹಿಳಾ ಕಾರ್ಮಿಕರು ಉಡುಪಿ, ಮಲ್ಪೆಯಲ್ಲಿ ಮೀನಿಗೆ ಸಂಬಂಧಿಸಿದ ಕೈಗಾರಿಕೆ, ಮಾರುಕಟ್ಟೆಗಳಲ್ಲಿ ದುಡಿಯುತ್ತಿದ್ದವರು. ಮಳೆಗಾಲದಲ್ಲಿ ಮೀನುಗಾರಿಕೆಗೆ ರಜೆ ಇರುವುದರಿಂದ ಸಾಮಾನ್ಯವಾಗಿ ಇವರು ತಮ್ಮೂರಿಗೆ ತೆರಳುತ್ತಿದ್ದರು. ಈ ಬಾರಿ, ತಮ್ಮೂರಿನ ರೀತಿಯಲ್ಲೇ ಕೃಷಿ ಕಾರ್ಯದ ಕೂಲಿ ಸಿಕ್ಕಿದ್ದು, ಕೋಟ, ಸಾಲಿಗ್ರಾಮ ಕಡೆಗಳಲ್ಲಿ ಗದ್ದೆಗಳಲ್ಲಿಳಿದು ಕೆಲಸ ಮಾಡುತ್ತಿದ್ದಾರೆ.
ಒಡಿಶಾದಲ್ಲಿಯೂ ಇಲ್ಲಿನ ರೀತಿಯಲ್ಲೇ ಸಾಂಪ್ರದಾಯಿಕ ಮಾದರಿಯಲ್ಲಿ ಭತ್ತದ ಗದ್ದೆ ಮಾಡುತ್ತಾರಂತೆ. ಭತ್ತದ ನೇಜಿ ನೆಡುವ ಕೆಲಸ ಗೊತ್ತಿರುವ ಮಹಿಳೆಯರು ಇದೀಗ ಉಡುಪಿ ಜಿಲ್ಲೆಯಲ್ಲಿ ಭತ್ತದ ಕೃಷಿ ಕೆಲಸಕ್ಕೆ ಮುಂದಾಗಿದ್ದಾರೆ. ತಮ್ಮೂರಿಗೆ ಹೋಲಿಸಿದರೆ, ಇಲ್ಲಿ ಸಂಬಳವೂ ಹೆಚ್ಚಿರುವುದರಿಂದ ಹೆಚ್ಚಿನ ಮಹಿಳೆಯರು ಊರಿಗೆ ಹಿಂತಿರುಗದೆ ಭತ್ತ ನಾಟಿಯಲ್ಲಿ ತೊಡಗಿದ್ದಾರೆ. ಇಲ್ಲಿ ಕೃಷಿ ಕೆಲಸದಲ್ಲಿ ತೊಡಗಿರುವ ಇವರೆಲ್ಲ ಮೂಲತಃ ಕೃಷಿ ಕಾರ್ಮಿಕರೇ ಆಗಿರುವುದು ವಿಶೇಷ. ತಂಡದ ಮಹಿಳೆಯರು ಉಡುಪಿ ಆಸುಪಾಸಿನಲ್ಲಿ ಬಿಡಾರದಲ್ಲಿದ್ದು, ಬೆಳಗ್ಗೆ 7ರಿಂದ ಸಂಜೆ 5.30ರ ತನಕ ನಾಟಿ ಮಾಡುತ್ತಾರೆ. ಪ್ರತಿದಿನ ಎಕ್ರೆಗಟ್ಟಲೆ ಗದ್ದೆ ನಾಟಿ ಮಾಡುವ ಇವರಿಗೆ ದಿನಕ್ಕೆ 550 ರೂ. ಸಂಬಳ ನೀಡಲಾಗುತ್ತದೆ.
ತಂಡದ ಸದಸ್ಯರು ನಾಟಿಯ ನಡುವೆ ಒಡಿಸ್ಸಿ ಜಾನಪದ ಹಾಡು ಹಾಡುತ್ತ ಖುಷಿ ಪಡೆದುಕೊಳ್ಳುತ್ತಾರೆ. ಇದರಿಂದಾಗಿ ಹಿಂದೆಲ್ಲಾ ಗದ್ದೆಗಳ ಎಡೆಯಿಂದ ಕೇಳುತ್ತಿದ್ದ ಓಬೇಲೇ ಹಾಡು ಕೇಳದಾಗಿದೆ. ಒಡಿಸ್ಸಿಗಳು ಕೂಡ ಸ್ಥಳೀಯ ಕಾರ್ಮಿಕರಿಗೆ ಕಡಿಮೆ ಇಲ್ಲದಂತೆ ವೇಗವಾಗಿ ಕೆಲಸ ಮಾಡುತ್ತಾರೆ ಎನ್ನುವುದು ಇವರ ಜೊತೆಗಿರುವ ಸ್ಥಳೀಯರ ಅನಿಸಿಕೆ. ಇವರ ಜತೆಗೆ ಕೊಪ್ಪಳ, ಗಂಗಾವತಿಯಿಂದಲೂ ನೂರಾರು ಕಾರ್ಮಿಕರು ಇಲ್ಲಿಗೆ ಆಗಮಿಸಿ ಭತ್ತ ಬೇಸಾಯದ ಕೆಲಸ ನಿರ್ವಹಿಸುತ್ತಿದ್ದಾರೆ.
Paddy fields in coastal Dakshina Kannada and Udupi are disappearing. There is also a shortage of agricultural labourers to plough the existing fields. Women from Odisha are now engaged in paddy cultivation in paddy fields around Kota in Udupi district.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm