ಬ್ರೇಕಿಂಗ್ ನ್ಯೂಸ್
10-07-24 01:52 pm Mangalore Correspondent ಕರಾವಳಿ
ಮಂಗಳೂರು, ಜುಲೈ.10: ಕಾಂಗ್ರೆಸ್ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಯ ಕೆನ್ನೆಗೆ ಹೊಡೆಯಬೇಕು ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದ ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಭರತ್ ಶೆಟ್ಟಿ ವಿರುದ್ಧ ಕಾವೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಾಂಗ್ರೆಸ್ ಕಾರ್ಪೊರೇಟರ್ ಅನಿಲ್ ಕುಮಾರ್ ನೀಡಿರುವ ದೂರಿನ ಆಧಾರದಲ್ಲಿ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ. ಬಿಎನ್ಎಸ್ 353 ಮತ್ತಿತರ ಸೆಕ್ಷನ್ ಪ್ರಕಾರ ಕೇಸು ದಾಖಲಾಗಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.





ರಾಹುಲ್ ಗಾಂಧಿ ಹಿಂದು ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಬಿಜೆಪಿ ಕಾವೂರಿನಲ್ಲಿ ಪ್ರತಿಭಟನೆ ನಡೆಸಿದ ಸಂದರ್ಭ ಭರತ್ ಶೆಟ್ಟಿ ವಿವಾದಾತ್ಮಕ ಮಾತುಗಳನ್ನಾಡಿದ್ದರು. ರಾಹುಲ್ ಗಾಂಧಿ ಒಬ್ಬ ಹುಚ್ಚನ ರೀತಿ ವರ್ತಿಸುತ್ತಿದ್ದಾರೆ. ಆತನಿಗೆ ಸ್ಥಿಮಿತ ಇಲ್ಲ. ಯಾರಾದ್ರೂ ಸಂಸತ್ತಿನ ಒಳಗಡೆಯೇ ಆತನ ಕಪಾಳಕ್ಕೆ ಹೊಡೆಯಬೇಕು. ಆತ ಈ ಕಡೆ ಬಂದರೆ ನಾವು ನೋಡಿಕೊಳ್ಳುತ್ತೇವೆ ಎಂದು ಹೇಳಿದ್ದರು. ಈ ಬಗ್ಗೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು, ತಾಕತ್ತಿದ್ದರೆ ನಮ್ಮ ಒಬ್ಬ ಕಾರ್ಯಕರ್ತನಿಗೆ ಹೊಡೆದು ನೋಡಲಿ ಎಂದಿದ್ದಲ್ಲದೆ, ಪೊಲೀಸರು ಸುಮೊಟೋ ಕೇಸು ದಾಖಲಿಸಬೇಕೆಂದು ಆಗ್ರಹ ಮಾಡಿದ್ದರು.
ಭರತ್ ಶೆಟ್ಟಿ ವಿರುದ್ಧ ಮಹಾನಗರ ಪಾಲಿಕೆಯ ಕಚೇರಿ ಮುಂಭಾಗದಲ್ಲಿ ಇಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯನ್ನೂ ನಡೆಸಿದ್ದು, ಭರತ್ ಶೆಟ್ಟಿ ಮುಖವಾಡ ತೊಟ್ಟು ಧಿಕ್ಕಾರ ಕೂಗಿದ್ದಾರೆ.
Mangalore Police book FIR on MLA Bharath Shetty for his remarks on Rahul Gandhi. Karnataka BJP MLA Bharat Shetty on Monday, July 8, stirred a major controversy, saying the Leader of the Opposition (LoP) Rahul Gandhi should be locked up and slapped inside the Parliament for his alleged anti-Hindu remarks.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm