ಬ್ರೇಕಿಂಗ್ ನ್ಯೂಸ್
11-07-24 10:30 pm Mangalore Correspondent ಕರಾವಳಿ
ಮಂಗಳೂರು, ಜುಲೈ.11: ಕೊಂಕಣ ರೈಲ್ವೇ ಮತ್ತು ಮಂಗಳೂರು ಪ್ರತ್ಯೇಕ ರೈಲ್ವೇ ವಿಭಾಗ ಬೇಡಿಕೆಯ ಕುರಿತು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ರೈಲು ಯಾತ್ರಿಕರ ಸಮಸ್ಯೆಗಳ ಕುರಿತಾಗಿ ಚರ್ಚಿಸಲು ಮಂಗಳೂರಿನಲ್ಲಿಯೇ ಸಭೆ ಏರ್ಪಡಿಸುವಂತೆ ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ಸಚಿವ ವಿ. ಸೋಮಣ್ಣ ಅವರಿಗೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಪತ್ರ ಬರೆದಿದ್ದಾರೆ.
ಕೊಂಕಣ ರೈಲು ಮಂಡಳಿಯನ್ನು ಭಾರತೀಯ ರೈಲ್ವೇ ಜೊತೆಗೆ ಸೇರ್ಪಡೆ ಮಾಡುವುದು ಮುಖ್ಯ ಬೇಡಿಕೆ. ಕೊಂಕಣ ರೈಲ್ವೇ ನಿಗಮ ಲಿಮಿಟೆಡ್ (ಕೆಆರ್ಸಿಎಲ್) ಸ್ವತಂತ್ರ ಸಂಸ್ಥೆಯಾಗಿರುವುದರಿಂದ ಎದುರಿಸುತ್ತಿರುವ ಹಣಕಾಸು ಅಡಚಣೆಗಳನ್ನು ನಿವಾರಿಸಲು ವಿಲೀನ ಅವಶ್ಯವಾಗಿದೆ. ಮುಂಬೈ- ಮಂಗಳೂರು ಮಧ್ಯೆ 741 ಕಿಮೀ ಉದ್ದದ ಕೊಂಕಣ ರೈಲ್ವೇ ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿದ್ದು, ಭಾರತೀಯ ರೈಲ್ವೇ ವಿಭಾಗದಿಂದ ಪ್ರತ್ಯೇಕವಾಗಿ ಗುರುತಿಸಿಕೊಂಡಿರುವುದರಿಂದ ಅಭಿವೃದ್ಧಿಗೆ ತೊಡಕಾಗಿದೆ. ಇನ್ನಿತರ ರೈಲು ಸಂಪರ್ಕದ ಅಭಿವೃದ್ಧಿಗೂ ಬೇರೆ ವಲಯಗಳನ್ನು ಅವಲಂಬಿಸುವ ಸ್ಥಿತಿಯಿದೆ. ಹೀಗಾಗಿ ಕೊಂಕಣ ರೈಲ್ವೇಯನ್ನು ಭಾರತೀಯ ರೈಲ್ವೇ ಜೊತೆಗೆ ವಿಲೀನಗೊಳಿಸಿದರೆ, ಕರಾವಳಿಯ ರೈಲ್ವೇ ವಲಯ ಅಭಿವೃದ್ಧಿ ಸಾಧ್ಯವಾಗಲಿದೆ.

ಇದಲ್ಲದೆ, ಮಂಗಳೂರು- ಬೆಂಗಳೂರು ರೈಲ್ವೇ ಮಾರ್ಗದ ಅಭಿವೃದ್ಧಿ ದೃಷ್ಟಿಯಿಂದ ಶಿರಾಡಿ ಘಾಟ್ ಭಾಗದ ಕಾರ್ಯಯೋಜನೆ ಬಗ್ಗೆ ಅಧ್ಯಯನ ಅಗತ್ಯವಿದೆ. ಶಿರಾಡಿ ಘಾಟ್ ನಲ್ಲಿ ಸದ್ಯ ಒಂದೇ ರೈಲು ಮಾರ್ಗವಿದ್ದು, ಸುಬ್ರಹ್ಮಣ್ಯ- ಸಕಲೇಶಪುರ ನಡುವೆ ಪ್ರತ್ಯೇಕ ರೈಲು ಹಳಿ ನಿರ್ಮಾಣಗೊಂಡರೆ ಪ್ರಯಾಣ ಮತ್ತು ಸರಕು ಸಾಕಣೆ ಸುಗಮವಾಗುತ್ತದೆ. ಇದರಿಂದ ಸಂಚಾರಕ್ಕೆ ಇರುವ ಪ್ರಮುಖ ಅಡಚಣೆ ನೀಗಿದಂತಾಗುತ್ತದೆ. ಮಂಗಳೂರು ಬಂದರು, ಏರ್ಪೋರ್ಟ್, ರೈಲ್ವೇ ಎಲ್ಲ ರೀತಿಯ ಸಂಪರ್ಕ ವ್ಯವಸ್ಥೆ ಇರುವ ನಗರವಾಗಿದ್ದು, ಕರಾವಳಿ ಅಭಿವೃದ್ಧಿ ದೃಷ್ಟಿಯಿಂದ ರಾಜಧಾನಿ ಬೆಂಗಳೂರಿಗೆ ಅತಿ ವೇಗದಲ್ಲಿ ತಲುಪಲು ರೈಲು ವ್ಯವಸ್ಥೆಯಾಗಬೇಕಿದೆ. ಇದಕ್ಕಾಗಿ ಮಂಗಳೂರು – ಬೆಂಗಳೂರು ರೈಲ್ವೇ ಹಾದಿಯನ್ನು ಅಭಿವೃದ್ಧಿ ಮಾಡಲೇಬೇಕಿದೆ ಎಂದು ಸಂಸದ ಚೌಟ ಪತ್ರದಲ್ಲಿ ಸಚಿವರಿಗೆ ಮನವಿ ಮಾಡಿದ್ದಾರೆ.
ಉಳಿದಂತೆ ಕರಾವಳಿ ಭಾಗದಲ್ಲಿ ನಡೆಯುತ್ತಿರುವ ರೈಲ್ವೇ ಕಾಮಗಾರಿಗಳ ಪರಿಶೀಲನೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಯ ಬಗ್ಗೆ ಚರ್ಚೆ ನಡೆಸುವ ಅಗತ್ಯವಿದೆ. ಇದಕ್ಕಾಗಿ ರೈಲ್ವೇ ಸಚಿವರಾಗಿ ತಾವು ಮಂಗಳೂರಿನಲ್ಲೇ ಸಭೆ ನಡೆಸಿದರೆ, ಅದರಲ್ಲಿ ದಕ್ಷಿಣ, ನೈರುತ್ಯ, ಕೊಂಕಣ ರೈಲ್ವೇ ವಿಭಾಗದ ಅಧಿಕಾರಿಗಳು, ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು, ಮಂಗಳೂರು ಮಹಾನಗರ ಪಾಲಿಕೆ, ಜಿಲ್ಲಾಡಳಿತ, ಪಿಡಬ್ಲ್ಯುಡಿ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಭಾಗವಹಿಸುವ ಅವಕಾಶ ಸಿಗುತ್ತದೆ. ಎಲ್ಲ ಇಲಾಖೆಗಳನ್ನು ಒಟ್ಟು ಸೇರಿಸಿ ಮಂಗಳೂರಿನಲ್ಲಿ ಸಭೆಯನ್ನು ಮಾಡಲು ಉದ್ದೇಶಿಸಿದ್ದು ಈ ಸಭೆಯಲ್ಲಿ ಸಚಿವರಾಗಿ ತಾವು ಪಾಲ್ಗೊಳ್ಳಬೇಕೆಂದು ಪತ್ರ ಬರೆದು ಸಂಸದರು ಕೇಳಿಕೊಂಡಿದ್ದಾರೆ.
MP Brijesh Chowta writes letter to railway minister to improve Bangalore mangalore line.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm