ಬ್ರೇಕಿಂಗ್ ನ್ಯೂಸ್
12-07-24 10:49 pm Mangalore Correspondent ಕರಾವಳಿ
ಮಂಗಳೂರು, ಜುಲೈ.12: ದಕ್ಷಿಣ ಕನ್ನಡ ಜಿಲ್ಲೆಯ ರೈಲು ಯೋಜನೆಗಳ ಅಭಿವೃದ್ಧಿ ದೃಷ್ಟಿಯಿಂದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಮನವಿ ಮೇರೆಗೆ ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ಸಚಿವ ವಿ. ಸೋಮಣ್ಣ ಜುಲೈ 17 ರಂದು ಮಂಗಳೂರಿಗೆ ಆಗಮಿಸಿ ರೈಲ್ವೇ ಅಧಿಕಾರಿಗಳ ಜೊತೆಗೆ ಸಭೆ ನಡೆಸಲು ಒಪ್ಪಿಗೆ ನೀಡಿದ್ದಾರೆ.
ಬೆಳಿಗ್ಗೆ 9ರಿಂದ 9.45ರ ನಡುವೆ ಮಂಗಳೂರು ಸೆಂಟ್ರಲ್ ರೇಲ್ವೆ ನಿಲ್ದಾಣದ ವೀಕ್ಷಣೆ, 10ರಿಂದ 10.45 ರ ವರೆಗೆ ಮಂಗಳೂರು ಜಂಕ್ಷನ್ ರೇಲ್ವೆ ನಿಲ್ದಾಣದ ವೀಕ್ಷಣೆ ಹಾಗೂ 11 ರಿಂದ ಮಧ್ಯಾಹ್ನ 2ರ ವರೆಗೆ ಮಂಗಳೂರಿನ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಮಂಗಳೂರು ವ್ಯಾಪ್ತಿಯ ರೇಲ್ವೆ ವಿವಿಧ ಬೇಡಿಕೆಗಳು, ಸಮಸ್ಯೆಗಳು ಹಾಗೂ ಅಭಿವೃದ್ಧಿಯ ವಿಚಾರಗಳ ಕುರಿತು ಸಭೆ ನಡೆಸಲಿದ್ದಾರೆ.
ವಿಶೇಷವಾಗಿ ಕೊಂಕಣ ಭಾಗದಲ್ಲಿ ಪ್ರಯಾಣಿಸುತ್ತಿರುವ ಪ್ರಯಾಣಿಕರ ಬಹುಕಾಲದ ಬೇಡಿಕೆಯಾದ ಕೊಂಕಣ ರೈಲ್ವೇ ಮತ್ತು ಭಾರತೀಯ ರೈಲ್ವೇ ವಿಲೀನ, ಈ ವಿಲೀನದಿಂದ ರೈಲ್ವೇ ಮೂಲ ಸೌಕರ್ಯಗಳ ಸುಧಾರಣೆ ಮತ್ತು ಪ್ರಯಾಣಿಕರ ಅನುಕೂಲ ಸುಗಮವಾಗಲಿದೆ.
ಮಂಗಳೂರು- ಬೆಂಗಳೂರು ರೈಲ್ವೇ ಮಾರ್ಗದ ಉನ್ನತೀಕರಣ
ಶಿರಾಡಿ ಘಾಟ್ ಭಾಗದ ಕಾರ್ಯ ಯೋಜನಾ ಅಧ್ಯಯನ ಮತ್ತು ಸುಬ್ರಹ್ಮಣ್ಯ- ಸಕಲೇಶಪುರ ಘಾಟ್ ಭಾಗದ ಸಾಮರ್ಥ್ಯ ವೃದ್ಧಿಯ ಪ್ರಸ್ತಾಪಗಳ ಕುರಿತು ಕರಾವಳಿ ಭಾಗದ ಶಾಸಕರು, ಜನಪ್ರತಿನಿಧಿಗಳು, ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಗಳ ಉಪಸ್ಥಿತಿಯಲ್ಲಿ ಚರ್ಚೆ ನಡೆಯಲಿದೆ.
ಸಭೆಯು ದಕ್ಷಿಣ ಕನ್ನಡದ ರೈಲ್ವೇ ಪ್ರಯಾಣಿಕರು ಮತ್ತು ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಚರ್ಚಿಸಿ, ಅವುಗಳಿಗೆ ಪರಿಹಾರ ಕೊಂಡುಕೊಳ್ಳುವ ನಿಟ್ಟಿನಲ್ಲಿ ಸಹಕಾರಿಯಾಗಲಿದೆ ಎಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.
Union Minister of State for Railways V. Somanna will hold a meeting in Mangaluru on July 17 to discuss and address railway issues pertaining to Mangaluru region, according to Dakshina Kannada Member of Parliament Captain Brijesh Chowta.
21-07-25 10:38 pm
Bangalore Correspondent
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
21-07-25 11:23 pm
HK News Desk
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
Jagdeep Dhankhar; ಆರೋಗ್ಯ ಸಮಸ್ಯೆ ; 74 ವರ್ಷದ ಉಪ...
21-07-25 10:41 pm
ಬಾಂಗ್ಲಾ ರಾಜಧಾನಿ ಢಾಕಾದಲ್ಲಿ ವಾಯುಪಡೆ ತರಬೇತಿ ವಿಮಾ...
21-07-25 09:56 pm
ತನ್ನ ಜೊತೆಗೆ ಲಿವ್ ಇನ್ ರಿಲೇಶನ್ನಲ್ಲಿದ್ದ ಎಎಸ್ಐ ಯು...
20-07-25 04:47 pm
21-07-25 06:42 pm
Mangalore Correspondent
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
21-07-25 11:01 pm
HK News Desk
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm