ಬ್ರೇಕಿಂಗ್ ನ್ಯೂಸ್
14-07-24 10:06 pm Mangalore Correspondent ಕರಾವಳಿ
ಮಂಗಳೂರು, ಜುಲೈ 14: ಸುರತ್ಕಲ್ ಬಳಿಯ ಎಸ್ಇಝೆಡ್ ವ್ಯಾಪ್ತಿಯಲ್ಲಿ ಮೀನು ಆಹಾರ ಉತ್ಪನ್ನ ಘಟಕದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಕೋಟ್ಯಾಂತರ ರೂ.ಗಳ ನಷ್ಟ ಉಂಟಾಗಿದೆ.
ಜೋಕಟ್ಟೆ ಬಳಿಯ ಅಥೆಂಟಿಕ್ ಓಷನ್ ಟ್ರೆಷರ್ ಎಂಬ ಮೀನು ಉತ್ಪನ್ನ ಘಟಕದಲ್ಲಿ ಭಾನುವಾರ ಸಂಜೆ ಬೆಂಕಿ ದುರಂತ ಸಂಭವಿಸಿದೆ. ಸುಮಾರು 10 ಕೋಟಿ ಮೌಲ್ಯದ ಮತ್ಸ್ಯ ಉತ್ಪನ್ನಗಳು ಬೆಂಕಿಗೆ ತುತ್ತಾಗಿದೆ ಎನ್ನಲಾಗಿದೆ. ಕಂಪೆನಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದರಿಂದ ಭಾನುವಾರ ರಜೆ ಕೊಡಲಾಗಿತ್ತು. ಹೀಗಾಗಿ ನೌಕರರು ಯಾರೂ ಇರಲಿಲ್ಲ ಎನ್ನಲಾಗಿದೆ. ಹಾಗಾಗಿ ಪ್ರಾಣ ಹಾನಿ ಸಂಭವಿಸಿಲ್ಲ.




ಅಥೆಂಟಿಕ್ ಓಷನ್ ಟ್ರೆಷರ್ ಕಂಪೆನಿಯು ಮೀನುಗಳನ್ನು ಸ್ವಚ್ಛಗೊಳಿಸಿ ಮಾಂಸದ ರೂಪಕ್ಕೆ ತಂದು ಅದನ್ನು 10 ಕೆ.ಜಿ. ಪ್ಯಾಕೆಟ್ ಗಳನ್ನಾಗಿ ಮಾಡಿ ವಿದೇಶಗಳಿಗೆ ರಫ್ತು ಮಾಡುವ ಕಂಪೆನಿಯಾಗಿದೆ. ಕಂಪೆನಿಯ ಕೋಲ್ಡ್ ಸ್ಟೋರ್ ಸೆಕ್ಷನ್ ಮತ್ತು ಕಟ್ಟಿಂಗ್ ಸೆಕ್ಷನ್ ಗಳಲ್ಲಿ ದುರಸ್ತಿ ಕಾರ್ಯ ನಡೆಯುತ್ತಿತ್ತು. ಈ ವೇಳೆ ಕೋಲ್ಡ್ ಸ್ಟೋರೆಜ್ ಸೆಕ್ಷನ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆಯಿಂದ ಸುಮಾರು 10 ಕೋಟಿ ರೂ. ಮೌಲ್ಯದ ಮತ್ಸ್ಯ ಉತ್ಪನ್ನಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದುಬಂದಿದೆ. ಬಳಿಕ ಎಂಆರ್ ಪಿಎಲ್, ಗೇಲ್ ಇಂಡಿಯಾ ಕಂಪೆನಿಗಳ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದೆ. ಹೊರ ಭಾಗದಲ್ಲಿ ಮಳೆಯ ನಡುವೆಯೂ ಬಾನೆತ್ತರಕ್ಕೆ ಹಾರುತ್ತಿದ್ದ ಬೆಂಕಿ ಮತ್ತು ಹೊಗೆ ಸ್ಥಳೀಯರನ್ನು ಅಚ್ಚರಿಗೆ ನೂಕಿತ್ತು.
SEZ massive fire erupts, fish factory catches fire in Mangalore. Fire personals had come in large number to off the fire
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm