ಬ್ರೇಕಿಂಗ್ ನ್ಯೂಸ್
14-07-24 10:06 pm Mangalore Correspondent ಕರಾವಳಿ
ಮಂಗಳೂರು, ಜುಲೈ 14: ಸುರತ್ಕಲ್ ಬಳಿಯ ಎಸ್ಇಝೆಡ್ ವ್ಯಾಪ್ತಿಯಲ್ಲಿ ಮೀನು ಆಹಾರ ಉತ್ಪನ್ನ ಘಟಕದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಕೋಟ್ಯಾಂತರ ರೂ.ಗಳ ನಷ್ಟ ಉಂಟಾಗಿದೆ.
ಜೋಕಟ್ಟೆ ಬಳಿಯ ಅಥೆಂಟಿಕ್ ಓಷನ್ ಟ್ರೆಷರ್ ಎಂಬ ಮೀನು ಉತ್ಪನ್ನ ಘಟಕದಲ್ಲಿ ಭಾನುವಾರ ಸಂಜೆ ಬೆಂಕಿ ದುರಂತ ಸಂಭವಿಸಿದೆ. ಸುಮಾರು 10 ಕೋಟಿ ಮೌಲ್ಯದ ಮತ್ಸ್ಯ ಉತ್ಪನ್ನಗಳು ಬೆಂಕಿಗೆ ತುತ್ತಾಗಿದೆ ಎನ್ನಲಾಗಿದೆ. ಕಂಪೆನಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದರಿಂದ ಭಾನುವಾರ ರಜೆ ಕೊಡಲಾಗಿತ್ತು. ಹೀಗಾಗಿ ನೌಕರರು ಯಾರೂ ಇರಲಿಲ್ಲ ಎನ್ನಲಾಗಿದೆ. ಹಾಗಾಗಿ ಪ್ರಾಣ ಹಾನಿ ಸಂಭವಿಸಿಲ್ಲ.




ಅಥೆಂಟಿಕ್ ಓಷನ್ ಟ್ರೆಷರ್ ಕಂಪೆನಿಯು ಮೀನುಗಳನ್ನು ಸ್ವಚ್ಛಗೊಳಿಸಿ ಮಾಂಸದ ರೂಪಕ್ಕೆ ತಂದು ಅದನ್ನು 10 ಕೆ.ಜಿ. ಪ್ಯಾಕೆಟ್ ಗಳನ್ನಾಗಿ ಮಾಡಿ ವಿದೇಶಗಳಿಗೆ ರಫ್ತು ಮಾಡುವ ಕಂಪೆನಿಯಾಗಿದೆ. ಕಂಪೆನಿಯ ಕೋಲ್ಡ್ ಸ್ಟೋರ್ ಸೆಕ್ಷನ್ ಮತ್ತು ಕಟ್ಟಿಂಗ್ ಸೆಕ್ಷನ್ ಗಳಲ್ಲಿ ದುರಸ್ತಿ ಕಾರ್ಯ ನಡೆಯುತ್ತಿತ್ತು. ಈ ವೇಳೆ ಕೋಲ್ಡ್ ಸ್ಟೋರೆಜ್ ಸೆಕ್ಷನ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆಯಿಂದ ಸುಮಾರು 10 ಕೋಟಿ ರೂ. ಮೌಲ್ಯದ ಮತ್ಸ್ಯ ಉತ್ಪನ್ನಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದುಬಂದಿದೆ. ಬಳಿಕ ಎಂಆರ್ ಪಿಎಲ್, ಗೇಲ್ ಇಂಡಿಯಾ ಕಂಪೆನಿಗಳ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದೆ. ಹೊರ ಭಾಗದಲ್ಲಿ ಮಳೆಯ ನಡುವೆಯೂ ಬಾನೆತ್ತರಕ್ಕೆ ಹಾರುತ್ತಿದ್ದ ಬೆಂಕಿ ಮತ್ತು ಹೊಗೆ ಸ್ಥಳೀಯರನ್ನು ಅಚ್ಚರಿಗೆ ನೂಕಿತ್ತು.
SEZ massive fire erupts, fish factory catches fire in Mangalore. Fire personals had come in large number to off the fire
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm