ಬ್ರೇಕಿಂಗ್ ನ್ಯೂಸ್
15-07-24 11:36 am Mangalore Correspondent ಕರಾವಳಿ
ಉಳ್ಳಾಲ, ಜುಲೈ 15: ಕುತ್ತಾರು ಕೊರಗಜ್ಜನ ಕಟ್ಟೆಯಲ್ಲಿ ಭಾನುವಾರ ನಡೆದ ಹರಕೆಯ ಕೋಲದಲ್ಲಿ ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್, ಕ್ರಿಕೆಟಿಗ ಕೆ.ಎಲ್ ರಾಹುಲ್ ಸೇರಿದಂತೆ ನಟ ಸುನಿಲ್ ಶೆಟ್ಟಿ ಕುಟುಂಬಸ್ಥರು ಭಾಗಿಯಾಗಿದ್ದಾರೆ.
ನಟಿ ಕತ್ರಿನಾ ಕೈಫ್, ನಟ ಸುನಿಲ್ ಶೆಟ್ಟಿ ಅವರ ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆಧ್ಯಾ ಶೆಟ್ಟಿ, ಆಕೆಯ ಪತಿ ಕ್ರಿಕೆಟಿಗ ಕೆ.ಎಲ್.ರಾಹುಲ್, ಮ್ಯಾಟ್ರಿಕ್ಸ್ ಎಂಟರ್ ಟೈನ್ಮೆಂಟ್ ನ ರೇಷ್ಮಾ ಶೆಟ್ಟಿ, ಕತ್ರಿನಾ ಕೈಫ್ ಪತಿ ವಿಕಿ ಕೌಶಲ್ ಹಾಗೂ ವಿ.ಎಂ. ಕಾಮತ್ ಸೇರಿದಂತೆ ಒಟ್ಟು 9 ಮಂದಿ ಆಗಮಿಸಿದ್ದರು. ಮುಂಬೈನ ಉದ್ಯಮಿಯೊಬ್ಬರು ಎರಡು ತಿಂಗಳ ಹಿಂದೆ ಹರಕೆ ಕೋಲ ಬರೆಸಿದ್ದರು. ಇಂದು ವಿಕಿ ಕೌಶಲ್ ಹೊರತುಪಡಿಸಿ ಉಳಿದೆಲ್ಲರೂ ಕೋಲದಲ್ಲಿ ಭಾಗಿಯಾಗಿದ್ದರು. ಕತ್ರಿನಾ, ರೇಷ್ಮಾ ಶೆಟ್ಟಿ , ಆಧ್ಯಾ ಶೆಟ್ಟಿ ಪರಂಪರೆಯಂತೆ ಕೋಲದಿಂದ ಹೊರಗುಳಿದು ಕಟ್ಟೆಯ ಕಚೇರಿಯಲ್ಲಿ ಉಳಿದುಕೊಂಡರೆ, ರಾಹುಲ್ ಮತ್ತು ಅಹಾನ್ ಶೆಟ್ಟಿ ಕೋಲದಲ್ಲಿ ಭಾಗಿಯಾಗಿದ್ದಾರೆ.




ಭಾನುವಾರ ಸಂಜೆ 6 ಗಂಟೆ ವೇಳೆಗೆ ಕುತ್ತಾರಿಗೆ ಆಗಮಿಸಿದ್ದ ಬಾಲಿವುಡ್ ಕುಟುಂಬ ಮಾಧ್ಯಮಗಳಿಗೆ ಮಾಹಿತಿ ನೀಡದಂತೆ ಕಟ್ಟೆಯ ಕಚೇರಿ ಪ್ರಮುಖರಲ್ಲಿ ಮನವಿ ಮಾಡಿದ್ದರು. ಅಲ್ಲದೇ ಸ್ಥಳದಲ್ಲಿ ಫೋಟೊ ತೆಗೆಯಲು ಬಿಡದೇ , ತೆಗೆದವರನ್ನು ಅಳಿಸುವಂತೆ ವಿನಂತಿಸಿದ್ದಾರೆ. ಕಟ್ಟೆಯೊಳಗೆ ಬೆಳಕಿಲ್ಲದೆ ನಡೆಯುತ್ತಿದ್ದ ಕೋಲವನ್ನು ಹೊರಗೇ ನಿಂತ ಕತ್ರಿನಾ ಸೇರಿದಂತೆ ಉಳಿದವರು ಗಾಢವಾಗಿ ಕಣ್ಣುಮುಚ್ಚಿ ಪ್ರಾರ್ಥನೆಯಲ್ಲಿ ಭಾಗಿಯಾದರು.
Katrina Kaif made a splash at Anant Ambani and Radhika Merchant's wedding celebration over the weekend, dishing out couple goals as she posed with Vicky Kaushal. The actress had a brief stay in Mumbai and quickly jetted off to an undisclosed location post the festivity.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm